ರಾಜ್ಯಕ್ಕೆ ಮತ್ತೂಂದು ಭರ್ಜರಿ ಬಂಡವಾಳ-ಫಾಕ್ಸ್ಕಾನ್ ಜತೆ ರಾಜ್ಯ ಸರ್ಕಾರದ ಮತ್ತೂಂದು ಒಪ್ಪಂದ
5 ಸಾವಿರ ಕೋಟಿ ಹೂಡಿಕೆ, 13 ಸಾವಿರ ಉದ್ಯೋಗ ಸೃಷ್ಟಿ- ಐಫೋನ್ ಬಿಡಿಭಾಗ, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೂಡಿಕೆ
Team Udayavani, Aug 3, 2023, 7:16 AM IST
ಬೆಂಗಳೂರು: ಹೂಡಿಕೆದಾರರಿಗೆ ಕರ್ನಾಟಕ ಸ್ವರ್ಗ ಎಂಬುದು ಮತ್ತೆ ಸಾಬೀತಾಗಿದೆ. ರಾಜ್ಯದಲ್ಲಿ ಬರೋಬ್ಬರಿ 5 ಸಾವಿರ ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಫಾಕ್ಸ್ಕಾನ್ ಸಂಸ್ಥೆ ಒಪ್ಪಂದ ಮಾಡಿಕೊಂಡಿದ್ದು, ಈ ಯೋಜನೆಗಳಿಂದ 13 ಸಾವಿರ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
ಚೆನ್ನೈನ ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಫೋನ್ ಎನ್ಕ್ಲೋಸರ್ಸ್ ಉತ್ಪಾದನಾ ಘಟಕ ಸ್ಥಾಪನೆ ಹಾಗೂ ಸೆಮಿಕಾನ್ ಉಪಕರಣಗಳ ಯೋಜನೆ ಜಾರಿ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಿದ ಫಾಕ್ಸ್ಕಾನ್ ಅಧ್ಯಕ್ಷ ಯಂಗ್ ಲಿಯು ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.
ಈ ಕುರಿತು ಬುಧವಾರ ಮಾಹಿತಿ ಹಂಚಿಕೊಂಡಿರುವ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಈ ಎರಡೂ ಒಪ್ಪಂದಗಳು, ಈ ಮೊದಲು ಮಾಡಿಕೊಂಡಿದ್ದ 14 ಸಾವಿರ ಕೋಟಿ ಮೊತ್ತದ ಆ್ಯಪಲ್ ಫೋನ್ ತಯಾರಿಕಾ ಘಟಕ ಹೊರತಾದವುಗಳಾಗಿವೆ ಎಂದಿದ್ದಾರೆ. ಇದಕ್ಕೂ ದೊಡ್ಡಬಳ್ಳಾಪುರ ಸಮೀಪ ಭೂಮಿ ನೀಡುವ ಕೆಲಸ ನಡೆಯುತ್ತಿದೆ. ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಫಾಕ್ಸ್ಕಾನ್ ಮುಂದೆ ಬಂದಿರುವುದು ಸಂತೋಷದ ವಿಷಯ. ಬಂಡವಾಳ ಆಕರ್ಷಣೆ ಮತ್ತು ಕಂಪನಿಗಳಿಗೆ ಉತ್ತಮ ಪರಿಸರ ವ್ಯವಸ್ಥೆ ಕಲ್ಪಿಸಲು ನಮ್ಮ ನೀತಿಗಳು ಪೂರಕವಾಗಿವೆ ಎಂದು ಹೇಳಿದ್ದಾರೆ.
ಒಪ್ಪಂದದಲ್ಲಿರುವ ಅಂಶಗಳು
ಫೋನ್ ಎನ್ಕ್ಲೋರ್ಸ್- ಎಫ್ಐಐ
ಐಫೋನ್ಗಳ ಮೆಕ್ಯಾನಿಕಲ್ ಎನ್ಕ್ಲೋಸರ್ಸ್ನಂತಹ ಸ್ಮಾರ್ಟ್ಫೋನ್ನ ಉಪ ಘಟಕಗಳನ್ನು ತಯಾರಿಸುವ ಸಂಸ್ಥೆಯಾದ ಫಾಕ್ಸ್ಕಾನ್ ಇಂಡಸ್ಟ್ರಿಯಲ್ ಇಂಟರ್ ನೆಟ್ (ಎಫ್ಐಐ)ನ ಹೂಡಿಕೆ ಮೊತ್ತ 350 ದಶಲಕ್ಷ ಡಾಲರ್ (3,000 ಕೋಟಿ ರೂ.) ಯೋಜನೆಯಡಿ 12,000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಎಫ್ಐಐ ಉದ್ದೇಶಿಸಿದೆ.
ಸೆಮಿಕಾನ್ ಉಪಕರಣಗಳು
ಅಪ್ಲೈಡ್ ಮೆಟೀರಿಯಲ್ಸ್ ಸಹಯೋಗದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಉಪಕರಣಗಳ ತಯಾರಿಸುವ ಸಂಸ್ಥೆಯ ಯೋಜಿತ ಯೋಜನೆಯ ಹೂಡಿಕೆ ಮೊತ್ತ 250 ದಶಲಕ್ಷ ಡಾಲರ್(2,000 ಕೋಟಿ ರೂ.). ಇದರಿಂದ 1000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಹೈಟೆಕ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ – 2ನೇ ಹಂತದಲ್ಲಿ ಈ ಯೋಜನೆಗಾಗಿ 35 ಎಕರೆ ಭೂಮಿಯನ್ನು ಅಂತಿಮಗೊಳಿಸಲಾಗಿದೆ.
13 ಸಾವಿರ– ಸೃಷ್ಟಿಯಾಗುವ ಉದ್ಯೋಗ
35 ಎಕರೆ– ಯೋಜನೆಗಾಗಿ ಭೂಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.