ರೈತರನ್ನು ಕಂಗಾಲು ಮಾಡಿದ ಅಂತರಗಂಗೆ : ಶಾಶ್ವತ ಪರಿಹಾರಕ್ಕಾಗಿ ಹೂಳೆತ್ತುವಂತೆ ಆಗ್ರಹ


Team Udayavani, Jul 17, 2021, 7:15 PM IST

ರೈತರನ್ನು ಕಂಗಾಲು ಮಾಡಿದ ಅಂತರಗಂಗೆ : ಶಾಶ್ವತ ಪರಿಹಾರಕ್ಕಾಗಿ ಹೂಳೆತ್ತುವಂತೆ ಆಗ್ರಹ

ತೆಕ್ಕಟ್ಟೆ : ಕೆದೂರು ಗ್ರಾ.ಪಂ. ವ್ಯಾಪ್ತಿಯ ಹಲ್ತೂರು, ಉಳ್ತೂರು ಭಾಗಗಳಲ್ಲಿ ನೂರಾರು ಎಕರೆ ಕೃಷಿ ಭೂಮಿಯನ್ನು ಅಂತರಗಂಗೆ ಆವರಿಸಿರುವ ಪರಿಣಾಮ ಕೃಷಿಕರು ಕಂಗಾಲಾಗಿದ್ದಾರೆ.

ನಿರಂತರ ಮಳೆಯಿಂದಾಗಿ ಅಂತರಗಂಗೆ ಉಳ್ತೂರಿನ ಹಲ್ತೂರು ಕಿರು ಸೇತುವೆ ಬಳಿ ಅಪಾರ ಪ್ರಮಾಣದಲ್ಲಿ ಶೇಖರಣೆಯಾಗಿದೆ. ಮಳೆ ಪ್ರಮಾಣ ಕಡಿಮೆಯಾದರೆ ಹೊಳೆಸಾಲು ಸಮೀಪದಲ್ಲಿರುವ ಕೃಷಿ ಭೂಮಿಗಳಿಗೆ ಆವರಿಸಿ ಕೃಷಿ ಚಟುವಟಿಕೆಗೆತೀವ್ರ ತೊಂದರೆಯಾಗಲಿದೆ.

ಏನಿದು ಅಂತರಗಂಗೆ?
ನೀರಿನ ಮೇಲ್ಪದರದಲ್ಲಿ ದಟ್ಟವಾಗಿ ಬೆಳೆಯುವ ಈ ಗಿಡ ಆಮ್ಲಜನಕ ಹಾಗೂ ಸೂರ್ಯನ ಬೆಳಕು ನೀರಿನ ಆಳಕ್ಕೆ ಇಳಿಯದಂತೆ ತಡೆಯುವ ಮೂಲಕ ನೀರಿನಲ್ಲಿರುವ ಮೀನುಗಳು ಹಾಗೂ ಇತರ ಜಲಚರಗಳ ಸಾವಿಗೆ ಪರೋಕ್ಷ ಕಾರಣವಾಗುತ್ತದೆ.

ಆವರಿಸುತ್ತಿದೆ ಅಂತರಗಂಗೆ: ಉಳ್ತೂರು, ಮಲ್ಯಾಡಿ, ಬೇಳೂರು ಗ್ರಾಮೀಣ ಭಾಗಗಳಲ್ಲಿ ಕಳೆದ ಮೂರು ವರ್ಷಗಳಿಂದ ಅಂತರಗಂಗೆಯ ಸಮಸ್ಯೆ ತುಸು ಕಡಿಮೆಯಾಗಿತ್ತು. ಆದರೆ ಈ ಬಾರಿ ಅಂತರಗಂಗೆ ತೇಲಿ ಬರುತ್ತಿದ್ದು ಎಲ್ಲೆಡೆ ವ್ಯಾಪಿಸಿ ಕೃಷಿ ನಾಶವಾಗುವ ಭೀತಿ ಹೆಚ್ಚಾಗಿದೆ.

ಹೊಳೆ ಸಾಲು ಹೂಳೆತ್ತಬೇಕು: ಹಲ್ತೂರು ಬೈಲು, ಉಳ್ತೂರು ಮೂಡುಬೆಟ್ಟಿನಲ್ಲಿ ಈಗಾಗಲೇ ಅಂತರಗಂಗೆ ಕೃಷಿಭೂಮಿಯನ್ನು ವ್ಯಾಪಿಸಿದೆ. ಹಲ್ತೂರಿನ ಹುಣ್ಸೆಕಟ್ಟೆಯಿಂದ ತೆಂಕಬೆಟ್ಟಿನ ಬಟ್ಟೆಕೆರೆ ಬೈಲಿನ ವರೆಗೆ ಹೊಳೆ ಸಾಲನ್ನು ಹೂಳೆತ್ತಬೇಕು. ಇದರಿಂದ ನೀರಿನ ಒಳ ಹರಿವು ಹೆಚ್ಚಾದಾಗ ಗ್ರಾಮದಲ್ಲಿ ಕೃಷಿಕರ ಪಾಲಿಗೆ ಕಂಟಕವಾಗಿದ್ದ ಅಂತರಗಂಗೆ ಸಮಸ್ಯೆಗೆ ಶಾಶ್ವತವಾದ ಪರಿಹಾರ ಕಂಡು ಕೊಳ್ಳಲು ಸಾಧ್ಯವಿದೆ ಎನ್ನುವುದು ಸ್ಥಳೀಯ ಕೃಷಿಕ ಪ್ರತಾಪ್‌ ಶೆಟ್ಟಿ ಉಳ್ತೂರು ಅವರ ಅಭಿಪ್ರಾಯ.

ಸುಲಭದಲ್ಲಿ ಸಾಯದು
ನೀರಿನಿಂದ ಹೊರತೆಗೆದು ದಂಡೆಗಳಲ್ಲಿ ಒಣಗಿಸಿ ಅನಂತರ ಕೆಲವೊಂದು ರಾಸಾಯನಿಕ ಸಿಂಪಡಣೆ ಅಥವಾ ಸುಟ್ಟಾಗ ಮಾತ್ರ ಶಾಶ್ವತವಾಗಿ ಅಂತರಗಂಗೆಯನ್ನು ನಾಶ ಮಾಡಲು ಸಾಧ್ಯ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.