IMEC ಗೆ ಟರ್ಕಿಯಿಂದ ಪ್ರತ್ಯಸ್ತ್ರ


Team Udayavani, Sep 24, 2023, 12:17 AM IST

IMEC MAP

ಹೊಸದಿಲ್ಲಿಯಲ್ಲಿ ನಡೆದ ಜಿ20 ಶೃಂಗಸಭೆಯ ವೇಳೆ ಚೀನದ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಪ್ರತಿಯಾಗಿ ಭಾರತ- ಮಧ್ಯಪ್ರಾಚ್ಯ- ಯುರೋಪ್‌ ಕಾರಿಡಾರ್‌(ಐಎಂಇಸಿ) ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಭಾರತ, ಯುಎಇ, ಸೌದಿ ಅರೇಬಿಯಾ, ಅಮೆರಿಕ, ಜಪಾನ್‌, ಐರೋಪ್ಯ ಒಕ್ಕೂಟ, ಫ್ರಾನ್ಸ್‌, ಇಟಲಿ, ದೇಶಗಳು ಸೇರಿ ಹೊಸದಾಗಿ ಭಾರ ತ-ಮಧ್ಯ ಪ್ರಾಚ್ಯ-ಐರೋಪ್ಯ ರಾಷ್ಟ್ರಗಳೊಂದಿಗೆ ಸಂಪರ್ಕ ಕೊಂಡಿ ಯಾಗಿ ಈ ಆರ್ಥಿಕ ಕಾರಿಡಾರ್‌ ರಚಿ ಸುವ ತೀರ್ಮಾನಕ್ಕೆ ಬರಲಾಗಿದೆ. ಆದರೆ ಈ ಬಗ್ಗೆ ಟರ್ಕಿ ಅಸಮಾಧಾನಗೊಂಡಿದೆ. ಸದ್ಯ ಟರ್ಕಿಯು ತನ್ನ ಮಿತ್ರರಾಷ್ಟ್ರಗಳನ್ನು ಒಗ್ಗೂಡಿಸಿಕೊಂಡು ಪರ್ಯಾಯವಾಗಿ ಹೊಸ ಕಾರಿಡಾರ್‌ ರಚನೆಯ ಕಾರ್ಯದಲ್ಲಿ ತೊಡಗಿ ಕೊಂಡಿದೆ. ಟರ್ಕಿಯ ಅಸಮಾಧಾನಕ್ಕೆ ಕಾರಣವೇನು?, ಟರ್ಕಿಯ ಯೋಜನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಟರ್ಕಿ ಅಸಮಾಧಾನಕ್ಕೆ ಕಾರಣ?
ಜಿ20 ಶೃಂಗಸಭೆಯ ವೇಳೆ ಕೈಗೊಂಡ ನಿರ್ಣಯದಲ್ಲಿ ಹೊಸ ಆರ್ಥಿಕ ಕಾರಿಡಾರ್‌ನಲ್ಲಿ ಚೀನದ ಬೆಲ್ಟ್ ಆ್ಯಂಡ್‌ ರೋಡ್‌ ಯೋಜನೆಗೆ ಬೆಂಬಲವಾಗಿದ್ದ ಟರ್ಕಿಯನ್ನು ಹೊರಗಿಡಲಾಗಿತ್ತು. ಈ ಬಗ್ಗೆ ಶೃಂಗಸಭೆಯ ಬಳಿಕ ಪ್ರತಿಕ್ರಿಯೆ ನೀಡಿದ್ದ ಟರ್ಕಿಯ ಅಧ್ಯಕ್ಷ ರಿಸೆಪ್‌ ತಯಿಪ್‌ ಎಡ್ರೊಗೆನ್‌ ಅವರು, ಟರ್ಕಿಯನ್ನು ಹೊರತುಪಡಿಸಿ ಯಾವುದೇ ಕಾರಿಡಾರ್‌ ರಚಿಸಲು ಸಾಧ್ಯವಿಲ್ಲ. ಪೂರ್ವದಿಂದ ಪಶ್ಚಿಮಕ್ಕೆ ವ್ಯಾಪಾರಕ್ಕೆ ತೆರಳಲು ಸೂಕ್ತವಾದ ಮಾರ್ಗವೆಂದರೆ ಟರ್ಕಿ ಮೂಲಕ ತೆರಳುವುದು ಎಂದಿದ್ದರು. ಹಿಂದಿನಿಂದಲೂ ಪೂರ್ವ ಮತ್ತು ಪಶ್ವಿ‌ಮ ರಾಷ್ಟ್ರಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಟರ್ಕಿಗೆ ಹೊಸ ಕಾರಿಡಾರ್‌ ರಚನೆಯ ನಿರ್ಧಾರ ಆಘಾತ ನೀಡಿತ್ತು.

ಟರ್ಕಿಯಿಂದ ಹೊಸ ಯೋಜನೆ
ಭಾರತ- ಮಧ್ಯಪ್ರಾಚ್ಯ- ಯುರೋಪ್‌ ಕಾರಿಡಾರ್‌ಗೆ ಪರ್ಯಾಯವಾಗಿ ಸುಮಾರು 17 ಬಿಲಿಯನ್‌ ಡಾಲರ್‌ ಮೊತ್ತದ ಹೊಸ ಮಾರ್ಗದ ಬಗ್ಗೆ ಇರಾಕ್‌ ಡೆವಲಪ್‌ಮೆಂಟ್‌ ರೋಡ್‌ ಇನಿಶಿಯೇಟಿವ್‌ ಯೋಜನೆ ರೂಪಿಸಿದೆ. ಕತಾರ್‌, ಯುಎಇ ಮತ್ತು ಇರಾಕ್‌ ರಾಷ್ಟ್ರಗಳ ಮಧ್ಯೆ ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಟರ್ಕಿಯ ವಿದೇಶಾಂಗ ಸಚಿವ ಹ್ಯಾಕನ್‌ ಪೈಢನ್‌ ಹೇಳಿದ್ದಾರೆ.

ದಕ್ಷಿಣ ಇರಾಕ್‌ನ ಗ್ರ್ಯಾಂಡ್‌ ಫಾ ಬಂದರಿನಿಂದ ಹೊರಟು ಇರಾಕ್‌ನ 10 ಪ್ರಾಂತಗಳನ್ನು ದಾಟಿ ಟರ್ಕಿಯನ್ನು ತಲುಪುವ ಬಗ್ಗೆ ಬಾಗ್ಧಾದ್‌ ಸರಕಾರ ಬಿಡುಗಡೆ ಮಾಡಿದ ನೀಲನಕ್ಷೆಯಲ್ಲಿ ತಿಳಿಸಿದೆ. ಮೂರು ಹಂತದಲ್ಲಿ ಈ ಯೋಜನೆ ನಿರ್ಮಾಣವಾಗಲಿದ್ದು, 2028ರಲ್ಲಿ ಮೊದಲ ಹಂತ ಪೂರ್ಣಗೊಂಡರೆ, ಕೊನೆಯ ಹಂತ 2050ರಲ್ಲಿ ಮುಗಿಯಲಿದೆ. ಭಾರತ- ಮಧ್ಯಪ್ರಾಚ್ಯ- ಯುರೋಪ್‌ ಕಾರಿಡಾರ್‌ ಪೂರ್ಣಗೊಳ್ಳಲೂ ಹಲವು ದಶಕಗಳು ಬೇಕಾಗಿವೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಕತಾರ್‌, ಯುಎಇಯಿಂದ ಬೆಂಬಲ ನಿರೀಕ್ಷೆ
ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಟರ್ಕಿಯು ಆರ್ಥಿಕ ಸಮಸ್ಯೆ ಎದುರಿ ಸುತ್ತಿದೆ. ಈ ಹಿನ್ನೆಲೆಯಲ್ಲಿ ಯುಎಇ ಮತ್ತು ಕತಾರ್‌ನ ಬೆಂಬಲದ ನಿರೀಕ್ಷೆ ಯಲ್ಲಿದೆ. ಈ ಯೋಜನೆಯಲ್ಲಿ ಗಲ್ಫ್ ರಾಷ್ಟ್ರಗಳು ಹೂಡಿಕೆ ಮಾಡುವಂತೆ ಮನ ವೊಲಿಸಬೇಕಾಗಿದೆ ಎಂದು ಯುರೇಷ್ಯಾ ಥಿಂಕ್‌ -ಟ್ಯಾಂಕ್‌ನ ಯುರೋಪ್‌ ನಿರ್ದೇಶಕ ಎಮ್ರೆ ಪೆಕರ್‌ ಹೇಳಿದ್ದಾರೆ.

ರಂಜಿನಿ, ಮಿತ್ತಡ್ಕ

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupati: ಲಡ್ಡು ಪ್ರಸಾದ ಪ್ರಮಾದ!

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.