Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Team Udayavani, Apr 25, 2024, 1:20 AM IST
ಕಿನ್ನಿಗೋಳಿ: ಇಲ್ಲಿನ ಕೆಂಚನಕೆರೆಯ ಉದ್ಯಮಿ ಶ್ರೀಕಾಂತ್ ಶೆಟ್ಟಿ ಅವರ ತೋಟದಲ್ಲಿ ಅಡಿಕೆ ಹಾಗೂ ಹಿಂಗಾರ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಮನೆಯ ಕೆಲಸದವರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಡಿಕೆ ಕಳ್ಳನನ್ನು ಅಂಗಾರ ಗುಡ್ಡೆ ನಿವಾಸಿ ವಿಜಯ (52) ಎಂದು ಗುರುತಿಸಲಾಗಿದೆ. .
ಬುಧವಾರ ಮಧ್ಯಾಹ್ನ ತೋಟದಿಂದ ಹಿಂಗಾರ ಕಳವು ಮಾಡುತ್ತಿದ್ದ ವೇಳೆ ತೋಟದ ಕಾರ್ಮಿಕ ನಾರಾಯಣ ಆರೋಪಿಯನ್ನು ಹಿಡಿಯಲೆತ್ನಿಸಿದಾಗ ಚೂರಿಯಿಂದ ಹಲ್ಲೆ ಮಾಡಲು ಮುಂದಾದ. ಈ ವೇಳೆ ನಾರಾಯಣ ಕಿರುಚಿದ್ದರಿಂದ ಉಳಿದ ಕೆಲಸದವರು ಬಂದು ಆರೋಪಿಯನ್ನು ಹಿಡಿದು ಮುಲ್ಕಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಸುಮಾರು ಎರಡು ಕ್ವಿಂಟಾಲ್ ಅಡಿಕೆ ಹಾಗೂ 500ಕ್ಕೂ ಹೆಚ್ಚು ಹಿಂಗಾರ ಕಳವು ಮಾಡಲಾಗಿದೆ ಎಂದು ಶ್ರೀಕಾಂತ್ ಶೆಟ್ಟಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.