ಅರಸೊಳಿಗೆ ರಸ್ತೆ ಕಾಮಗಾರಿ ವೀಡಿಯೋ ಮಾಡಿದ ವಿಚಾರ: ಪ್ರಕರಣ ದಾಖಲು
Team Udayavani, Feb 11, 2023, 1:09 AM IST
ಬಂಟ್ವಾಳ: ಸರಪಾಡಿ ಗ್ರಾಮದ ಪೆರಿಯಪಾದೆ-ಅರಸೊಳಿಗೆ ರಸ್ತೆಯ ಡಾಮರು ಅಗೆದು ವೀಡಿಯೋ ಮಾಡಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ವ್ಯಕ್ತಿಯ ವಿರುದ್ಧ ಸಂಬಂಧಪಟ್ಟ ಎಂಜಿನಿಯರ್ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಂಟ್ವಾಳ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್ ಪಿ. ಅವರು ವೀಡಿಯೋದಲ್ಲಿರುವ ಪದ್ಮನಾಭ ಸಾವಂತ್ ವಿರುದ್ಧ ದೂರು ನೀಡಿದ್ದಾರೆ.
ಅರಸೊಳಿಗೆ ರಸ್ತೆಯ ಡಾಮರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಹೊಸ ಡಾಮರನ್ನು ಅಗೆದು ವೀಡಿಯೋ ಮಾಡಿದ್ದಾರೆ. ಕಾಮಗಾರಿಯ ವೇಳೆ ಆ ವ್ಯಕ್ತಿ ಡಾಮರನ್ನು ಎಬ್ಬಿಸುವ ಜತೆಗೆ ಶಾಸಕರ ಕುರಿತು ಕೆಟ್ಟ ಶಬ್ದಗಳನ್ನು ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ತನಿಖೆಗೆ ಶಾಸಕರ ಸೂಚನೆ: ಕಾಮಗಾರಿ ಗುಣಮಟ್ಟದ ತನಿಖೆಗಾಗಿ ಶಾಸಕರು ಡಿಸಿಗೆ ಸೂಚಿಸಿದ್ದು, ಅದರಂತೆ ಜಿ.ಪಂ. ಎಂಜಿನಿಯರಿಂಗ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿದ್ದ ಎರಡು ತಂಡಗಳ ಮಧ್ಯೆ ಮಾತಿನ ಚಕಮಕಿಯೂ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.