![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 11, 2023, 1:09 AM IST
ಬಂಟ್ವಾಳ: ಸರಪಾಡಿ ಗ್ರಾಮದ ಪೆರಿಯಪಾದೆ-ಅರಸೊಳಿಗೆ ರಸ್ತೆಯ ಡಾಮರು ಅಗೆದು ವೀಡಿಯೋ ಮಾಡಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟ ವ್ಯಕ್ತಿಯ ವಿರುದ್ಧ ಸಂಬಂಧಪಟ್ಟ ಎಂಜಿನಿಯರ್ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಂಟ್ವಾಳ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ತಾರಾನಾಥ ಸಾಲ್ಯಾನ್ ಪಿ. ಅವರು ವೀಡಿಯೋದಲ್ಲಿರುವ ಪದ್ಮನಾಭ ಸಾವಂತ್ ವಿರುದ್ಧ ದೂರು ನೀಡಿದ್ದಾರೆ.
ಅರಸೊಳಿಗೆ ರಸ್ತೆಯ ಡಾಮರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಹೊಸ ಡಾಮರನ್ನು ಅಗೆದು ವೀಡಿಯೋ ಮಾಡಿದ್ದಾರೆ. ಕಾಮಗಾರಿಯ ವೇಳೆ ಆ ವ್ಯಕ್ತಿ ಡಾಮರನ್ನು ಎಬ್ಬಿಸುವ ಜತೆಗೆ ಶಾಸಕರ ಕುರಿತು ಕೆಟ್ಟ ಶಬ್ದಗಳನ್ನು ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ತನಿಖೆಗೆ ಶಾಸಕರ ಸೂಚನೆ: ಕಾಮಗಾರಿ ಗುಣಮಟ್ಟದ ತನಿಖೆಗಾಗಿ ಶಾಸಕರು ಡಿಸಿಗೆ ಸೂಚಿಸಿದ್ದು, ಅದರಂತೆ ಜಿ.ಪಂ. ಎಂಜಿನಿಯರಿಂಗ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿದ್ದ ಎರಡು ತಂಡಗಳ ಮಧ್ಯೆ ಮಾತಿನ ಚಕಮಕಿಯೂ ನಡೆದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.