ಸದ್ಯ ರಾಜ್ಯ ಬಿಜೆಪಿ ನಾಯಕರು ನಿರಾಳ


Team Udayavani, May 21, 2019, 6:00 AM IST

BJP-545

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯು ಸರಾಸರಿ 18ರಿಂದ 20 ಸ್ಥಾನ ಗೆಲ್ಲುವುದಾಗಿ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳಿರುವುದು ಸದ್ಯ ರಾಜ್ಯ ಬಿಜೆಪಿ ನಾಯಕರಲ್ಲಿ ನಿರಾಳ ಭಾವ ಮೂಡಿಸಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಕಾರಣಕ್ಕೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್‌- ಜೆಡಿಎಸ್‌ ಲೋಕಸಭೆ ಚುನಾವಣೆಗೂ ಮೈತ್ರಿ ಮುಂದುವರಿಸಿದವು. ಇದು ಪಕ್ಷಕ್ಕೆ ವರದಾನವಾಗಲಿದ್ದು, ಮುಖ್ಯವಾಗಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಲಾಭವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿತ್ತು. ಸದ್ಯ ಬಹಿರಂಗವಾಗಿರುವ ಬಹುತೇಕ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನಿರೀಕ್ಷೆಯಷ್ಟೇ ಸ್ಥಾನಗಳನ್ನು ಗೆಲ್ಲುವುದಾಗಿ ಭವಿಷ್ಯ ಹೇಳಿರುವುದು ಬಿಜೆಪಿ ನಾಯಕರ ಆತ್ಮವಿಶ್ವಾಸ ಹೆಚ್ಚಿಸಿದೆ.

ಈ ಬಾರಿ ರಾಜ್ಯದಲ್ಲಿ ಬಿಜೆಪಿ 22 ಸ್ಥಾನ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್‌.ಯಡಿಯೂರಪ್ಪ ಸೇರಿ ಹಲವು ನಾಯಕರು ನಿರಂತರವಾಗಿ ಹೇಳುತ್ತಲೇ ಬಂದಿದ್ದಾರೆ. ಮೇಲ್ನೋಟಕ್ಕೆ ಎಲ್ಲರೂ 22 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದರೂ ಅಷ್ಟೂ ಸ್ಥಾನ ಗೆಲ್ಲುವ ವಿಶ್ವಾಸ ಬಹುತೇಕ ನಾಯಕರಿಗೆ ಇದ್ದಂತಿರಲಿಲ್ಲ. ಮೈತ್ರಿ ಪಕ್ಷಗಳ ಮತದಾರರು ಒಂದಾಗಿ ಮತ ಚಲಾಯಿಸಿದರೆ ಬಿಜೆಪಿ ಕೇವಲ 14ರಿಂದ 15 ಕ್ಷೇತ್ರವನ್ನಷ್ಟೇ ಗೆಲ್ಲಲು ಸಾಧ್ಯ ಎಂಬುದು ನಾಯಕರ ಆತಂಕಕ್ಕೆ ಕಾರಣವಾಗಿತ್ತು.

ಎರಡು ಹಂತದ ಮತದಾನ ಮುಗಿದ ನಂತರವೂ ಬಹುಪಾಲು ನಾಯಕರ ಅಭಿಪ್ರಾಯವೂ ಅದೇ ರೀತಿ ಇತ್ತು. ಮೈತ್ರಿ ಪಕ್ಷಗಳ ಕಿತ್ತಾಟ ಇತರೆ ಕಾರಣಗಳಿಗೆ ಕೆಲವೆಡೆ ಬಿಜೆಪಿಗೆ ಅನುಕೂಲವಾದರೂ ಗರಿಷ್ಠವೆಂದರೆ 17- 18 ಸ್ಥಾನ ಗೆಲ್ಲುವ ನಿರೀಕ್ಷೆಯನ್ನಷ್ಟೇ ಇಟ್ಟುಕೊಂಡಿದ್ದರು. ಹಾಗಾಗಿ ಹಲವು ನಾಯಕರಿಗೆ ಒಳಗೊಳಗೆ ಸ್ವಲ್ಪ ಅಂಜಿಕೆ ಇದ್ದಂತಿತ್ತು ಎನ್ನಲಾಗಿದೆ.

ಆತಂಕ ನಿವಾರಿಸಿದ ಸಮೀಕ್ಷೆಗಳು: ಈ ನಡುವೆ ಭಾನುವಾರ ಬಹಿರಂಗವಾಗಿರುವ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಸರಾಸರಿ 18ರಿಂದ 20 ಸ್ಥಾನ ಗೆಲ್ಲುವುದಾಗಿ ಭವಿಷ್ಯ ನುಡಿದಿವೆ. ಎಬಿಪಿ ಹಾಗೂ ನೀಲ್ಸನ್‌ ಸಂಸ್ಥೆಗಳು ಬಿಜೆಪಿ 15 ಸ್ಥಾನ ಗೆಲ್ಲುವುದಾಗಿ ಹೇಳಿರುವುದನ್ನು ಹೊರತುಪಡಿಸಿದರೆ ಉಳಿದ ಸಮೀಕ್ಷೆಗಳು ಬಿಜೆಪಿ ಕನಿಷ್ಠ 18ರಿಂದ ಗರಿಷ್ಠ 23 ಸ್ಥಾನ ಗೆಲ್ಲುವುದಾಗಿ ಅಂದಾಜಿಸಿವೆ. ಇಂಡಿಯಾ ಟುಡೆ- ಆ್ಯಕ್ಸಿಸ್‌ ಸಮೀಕ್ಷೆಯು ಬಿಜೆಪಿ ಕನಿಷ್ಠ 21ರಿಂದ ಗರಿಷ್ಠ 25 ಸ್ಥಾನ ಗೆಲ್ಲುವುದಾಗಿ ಹೇಳಿದೆ. ಇದರಿಂದ ಸಹಜವಾಗಿಯೇ ರಾಜ್ಯ ಬಿಜೆಪಿ ನಾಯಕರು ಸದ್ಯದ ಮಟ್ಟಿಗೆ ನಿರಾಳರಾಗಿದ್ದಾರೆ. ಬಿಜೆಪಿ ನಾಯಕರ ಜತೆಗೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಲ್ಲೂ ಸಮೀಕ್ಷಾ ವರದಿಗಳು ನಿರಾಳ ಭಾವ ಮೂಡಿಸಿದೆ.

ಕರ್ನಾಟಕ 2ನೇ ಸ್ಥಾನದಲ್ಲಿ
ದೇಶದಲ್ಲಿ ಪ್ರಧಾನಿ ಮೋದಿ ಅಲೆ ದೊಡ್ಡ ಮಟ್ಟದಲ್ಲಿರುವ ರಾಜ್ಯಗಳ ಪೈಕಿ ಬಿಹಾರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಹಾಗಾಗಿ ಮೋದಿ ಅಲೆ ಈ ಬಾರಿಯ ಚುನಾವಣೆಯಲ್ಲೂ ಪಕ್ಷದ ಕೈಹಿಡಿಯುವ ನಿರೀಕ್ಷೆಯನ್ನು ಸಮೀಕ್ಷಾ ವರದಿಗಳು ಇನ್ನಷ್ಟು ಗಟ್ಟಿಗೊಳಿಸಿವೆ. ರಾಜ್ಯದಲ್ಲಿ ಬಿಜೆಪಿ ಈವರೆಗೆ 19 ಲೋಕಸಭಾ ಸ್ಥಾನ ಗೆದ್ದ ದಾಖಲೆ ಇದೆ. ಅದನ್ನು ಈ ಚುನಾವಣೆಯಲ್ಲಿ ಹಿಂದಿಕ್ಕುವ ನಿರೀಕ್ಷೆ ಮೂಡಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.