ಜಿಎಸ್ಟಿಗೆ ಪ್ರಾಧಿಕಾರ ಘೋಷಣೆ? 2019ರ ಜ.3ರಂದೇ ಕೇಂದ್ರ ಸಂಪುಟದಲ್ಲಿ ನಿರ್ಧಾರ
Team Udayavani, Jan 31, 2022, 5:55 AM IST
ಹೊಸದಿಲ್ಲಿ: ಸದ್ಯ ದೇಶದಲ್ಲಿ ಜಾರಿಯಲ್ಲಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಗೆ ಸಂಬಂಧಿಸಿದ ವಾಜ್ಯಗಳ ಪರಿಹಾರಕ್ಕೆ ಮೇಲ್ಮ ನವಿ ಪ್ರಾಧಿಕಾರ ಸ್ಥಾಪನೆ ಬಗ್ಗೆ 2022- 23ನೇ ಸಾಲಿನ ಬಜೆಟ್ನಲ್ಲಿ ಘೋಷಣೆಯಾಗುವ ಸಾಧ್ಯತೆಗಳು ಇವೆ. ಅದಕ್ಕೆ ಜಿಎಸ್ಟಿಎಟಿ ಮೇಲ್ಮನವಿ ಪ್ರಾಧಿಕಾರ ಎಂದು ಹೆಸರಿಸುವ ಸಾಧ್ಯತೆಗಳು ಇವೆ.
ಸದ್ಯ ತೆರಿಗೆ ಸಂಬಧಿಸಿದ ವಿಚಾರಗಳಿಗೆ ತೆರಿಗೆದಾ ರರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ. ಇದ ರಿಂದಾಗಿ ಹೆಚ್ಚಿನ ಸಮಯ ಕಾನೂನು ಹೋರಾಟಕ್ಕೆ ವಿನಿಯೋಗವಾಗುತ್ತದೆ.
ಮೇಲ್ಮನವಿ ಪ್ರಾಧಿಕಾರದ ಸ್ಥಾಪನೆಯಿಂದ ಅನು ಕೂಲವೇ ಆಗಲಿದೆ ಎಂದು ವಿಶ್ಲೇಷಿಸಲಾಗಿದೆ.
ಇದನ್ನೂ ಓದಿ:ಕೇಂದ್ರದ ಯೋಜನೆಗಳು ಗಾಂಧಿ ಚಿಂತನೆಯ ಹೊಸ ಸ್ವರೂಪ
ಜತೆಗೆ ಕಡಿಮೆ ಪ್ರಮಾಣದಲ್ಲಿ ಕಾನೂನು ತಕರಾರು ಪ್ರಕರಣಗಳು ಇರುವಂತೆ ಮಾಡಿ, ಉದ್ಯಮ ಸ್ನೇಹಿ ವಾತಾವರಣ ಸೃಷ್ಟಿಸುವುದು ಸರ್ಕಾ ರದ ಇರಾದೆ. ಜಿಎಸ್ಟಿ ಕಾಯ್ದೆಯ ಅನುಸಾರ 2019ರ ಜ.23ರಂದು ನಡೆ ದಿದ್ದ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಾದೇಶಿಕ ಕಚೇರಿಗಳನ್ನು ಒಳಗೊಂಡ ಜಿಎಸ್ಟಿ ಮೇಲ್ಮನವಿ ಪ್ರಾಧಿಕಾರ ರಚನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಅದರ ಪ್ರಧಾನ ಕಚೇರಿ ದೆಹಲಿಯಲ್ಲಿ ಇರಬೇಕು ಎಂದು ನಿರ್ಧರಿಸಲಾಗಿತ್ತು ಎಂದು ಮೂಲಗಳನ್ನು ಉಲ್ಲೇಖಿಸಿ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.