Sringeri: ಶಾರದಾ ಪೀಠ ತಲುಪಿದ ಅಯೋಧ್ಯೆ ಜಲಪ್ರಸಾದ ತೀರ್ಥ


Team Udayavani, Feb 16, 2024, 12:23 AM IST

shring

ಶೃಂಗೇರಿ: ಅಯೋಧ್ಯೆ ಶ್ರೀರಾಮಮಂದಿರದ ಜಲಪ್ರಸಾದ ತೀರ್ಥ ಶ್ರೀ ಶಾರದಾ ಪೀಠಕ್ಕೆ ತಲುಪಿದೆ. ವಾರಾಣಸಿ ಮೂಲದ ಸಪ್ತನದಿ ಜಲ ಸಂಗ್ರಹ ಕುಂಭವನ್ನು ಆಯೋಧ್ಯೆ ಯಾತ್ರೆ ಸಮಿತಿ ಪದಾಧಿ ಕಾರಿಗಳು ಶಾರದೆಯ ಸನ್ನಿ ಧಿಗೆ ತಂದರು. ಬಳಿಕ ಕಾಶ್ಮೀರದ ಗಡಿಯಲ್ಲಿರುವ ನಂದಲಾಲ್‌ಜೀ ಆಶ್ರಮದ ಗುರು ಮೋಹನ್‌ ಕಿಶನ್‌ ಮೊಂಘಾ ನೇತೃತ್ವದಲ್ಲಿ ಜಗನ್ಮಾತೆಯ ಸನ್ನಿ ಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಬಳಿಕ ಜಲತೀರ್ಥ ಕುಂಡವನ್ನು ಭಕ್ತರಿಗೆ ನೀಡಲು ಸಮಿತಿಯ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಮಂಜುನಾಥ ಶರ್ಮ ಅವರಿಗೆ ಮೋಹನ್‌ ಕಿಶನ್‌ ಮೊಂಘಾ ಹಸ್ತಾಂತರಿಸಿದರು. ಶ್ರೀಮಠದ ಆವರಣದಲ್ಲಿ ನೆರೆದ ಭಕ್ತರಿಗೆ ಪವಿತ್ರ ತೀರ್ಥ ವಿತರಿಸಲಾಯಿತು.

ಸಮಿತಿಯ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಮಂಜುನಾಥ ಶರ್ಮ ಮಾತನಾಡಿ, ಸನಾತನ ಹಿಂದೂ ಧರ್ಮದಲ್ಲಿ ಗಂಗೆ, ಯಮುನೆ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧೂ, ಕಾವೇರಿ ಹೀಗೆ ಏಳು ನದಿಗಳು ಪವಿತ್ರವಾದವು. ಇವುಗಳಲ್ಲಿ ಐದು ನದಿಗಳು ಭಾರತ ದೇಶದಲ್ಲಿ ಲಭ್ಯವಿದ್ದು, ಸರಸ್ವತಿ ಮತ್ತು ಸಿಂಧೂ ಪಾಕ್‌ ಅಕ್ರಮಿತ ಕಾಶ್ಮೀರದ ನೀಲಂ ಕಣಿವೆಯಲ್ಲಿ ಹುಟ್ಟಿ ಅದೇ ಭಾಗದಲ್ಲಿ ಹರಿಯುತ್ತವೆ. ಜಲಾಭಿಷೇಕಕ್ಕೆ ಎರಡು ನದಿಗಳ ನೀರು ಪ್ರಮುಖ. ನೀಲಂ ಕಣಿವೆಯ ಶಾರದಾ ಗ್ರಾಮದಲ್ಲಿ ಲಭ್ಯವಿರುವ ಎರಡು ನದಿಗಳ ನೀರಿನ ಜತೆಗೆ ಅದೇ ಪ್ರದೇಶದ ಪಾರ್ವತಿ ಮತ್ತು ನಾರದ ಘಾಟಿಯಲ್ಲಿ ಹರಿಯುತ್ತಿರುವ ಮಧುಮತಿ, ಕಿಶನ್‌ಗಂಗಾ ನದಿಗಳನ್ನು ಸಂಗ್ರಹಿಸಲಾಗಿದೆ.

ಭಾರತ ಮೂಲದ ಶಾರದಾ ಸರ್ವಜ್ಞಪೀಠ ರಕ್ಷಣ ಸಮಿತಿ ಪಿಒಕೆಯ ಮುಸ್ಲಿಂ ಬಾಂಧವರ ಮೂಲಕ ಸಂಗ್ರಹಿಸಿ ಮುಂಬಯಿಗೆ ತರಿಸಲಾಗಿದೆ. ಕಳೆದ ತಿಂಗಳು ಶೃಂಗೇರಿ ಉಭಯ ಶ್ರೀಗಳಾದ ಭಾರತೀರ್ಥ ಮಹಾಸ್ವಾಮೀಜಿ ಹಾಗೂ ವಿಧುಶೇಖರಭಾರತೀ ಸ್ವಾಮೀಜಿ ಅನುಗ್ರಹ ಪಡೆದು ಅವರ ಆಶಯದಂತೆ ಯಾತ್ರೆ ಮೂಲಕ ಅಯೋಧ್ಯೆ ತಲುಪಿಸಿದ್ದೆವು. ಅಲ್ಲಿ ಬಳಸಿದ ಜಲವನ್ನು ಮತ್ತೆ ಸಂಗ್ರಹಿಸಿ ಶೃಂಗೇರಿಗೆ ತರಲಾಗಿದೆ ಎಂದರು.

ಕಾಶ್ಮೀರದ ನಂದಲಾಲ್‌ಜೀ ಆಶ್ರಮದ ಗುರು ಮೋಹನ್‌ ಕಿಶನ್‌ ಮೊಂಘಾ ಮಾತನಾಡಿ, ಈ ಜಲಭರಿತ ಕುಂಭವನ್ನು ಭಾರತದ ಎಲ್ಲ ಜ್ಯೋತಿರ್ಲಿಂಗ, ಶಕ್ತಿ ಪೀಠಗಳಿಗೆ ಒಯ್ಯಲಾಗುತ್ತಿದೆ. ಅಲ್ಲಿ ಬರುವ ಭಕ್ತರಿಗೆ ಶ್ರೀರಾಮತೀರ್ಥವನ್ನು ಪ್ರಸಾದ ರೂಪದಲ್ಲಿ ಎಲ್ಲ ವರ್ಗದ ಜನರಿಗೂ ವಿತರಿಸಲಾಗುತ್ತದೆ. ಕರ್ನಾಟಕದಲ್ಲಿ ಅಗಮತ್ರಯ ಅಗಮಿಕ ಅರ್ಚಕರ ಮಹಾಮಂಡಲ, ಮುಜರಾಯಿ ಇಲಾಖೆ, ಅರ್ಚಕರ ಸಂಘ ಮುಂತಾದ ಸಂಘಟನೆಗಳಿಗೆ ನೀಡುವ ಉದ್ದೇಶ ನಮ್ಮದಾಗಿದೆ ಎಂದರು.

ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಚಂಪಾಲಾಲ್‌, ಪದಾ ಧಿಕಾರಿಗಳಾದ ರವೀಂದ್ರ ಕಣಕಟ್ಟೆ, ಆದರ್ಶ, ಸರಸ್ವತಿ, ಜಯಲಕ್ಷ್ಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.