ಬ್ಯಾಡ್ಜ್ ಕಡ್ಡಾಯ ಮಾನದಂಡ: ಸಹಸ್ರಾರು ಆಟೋ ಚಾಲಕರು ಸಹಾಯಧನ ವಂಚಿತರು!


Team Udayavani, May 11, 2020, 11:18 AM IST

ಬ್ಯಾಡ್ಜ್ ಕಡ್ಡಾಯ ಮಾನದಂಡ: ಸಹಸ್ರಾರು ಆಟೋ ಚಾಲಕರು ಸಹಾಯಧನ ವಂಚಿತರು!

ಉಡುಪಿ: ಲಾಕ್‌ಡೌನ್‌ನಿಂದ ತೊಂದರೆಗೆ ಒಳಗಾಗಿರುವ ಆಟೋ ರಿಕ್ಷಾ ಚಾಲಕರಿಗೆ ಸಹಾಯಧನ ಪಡೆಯಲು ಬ್ಯಾಡ್ಜ್ ಕಡ್ಡಾಯ ಎಂಬ ನಿಯಮದಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಸ್ರಾರು ಆಟೋ ಚಾಲಕರು ಸೌಲಭ್ಯ ವಂಚಿತರಾಗುವ ಸಾಧ್ಯತೆಗಳಿವೆ.

ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 13 ಸಾವಿರ ಆಟೋ ರಿಕ್ಷಾ ಚಾಲಕರಿದ್ದಾರೆ. ಅವರ ಪೈಕಿ 6 ಸಾವಿರದಷ್ಟು ಮಂದಿ ಮಾತ್ರ ಬ್ಯಾಡ್ಜ್ ಹೊಂದಿದ್ದು, ಉಳಿದ 7 ಸಾವಿರ ಮಂದಿಯಲ್ಲಿ ಇಲ್ಲ. ದ.ಕ. ಜಿಲ್ಲೆಯಲ್ಲಿ 26 ಸಾವಿರಕ್ಕೂ ಅಧಿಕ ಅಟೋ ರಿಕ್ಷಾ ಚಾಲಕರಿದ್ದು 12,500ದಷ್ಟು ಮಂದಿ ಬ್ಯಾಡ್ಜ್ ಹೊಂದಿಲ್ಲ ಎನ್ನಲಾಗುತ್ತಿದೆ. ನಾನಾ ಕಾರಣಗಳಿಂದ ಅವರೆಲ್ಲ ಬ್ಯಾಡ್ಜ್ ಪಡೆದುಕೊಂಡಿಲ್ಲ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ರಿಕ್ಷಾ ಚಾಲಕರಿಗೆ ಸರಕಾರವು ತಲಾ 5,000 ರೂ. ಸಹಾಯಧನ ನೀಡುತ್ತಿದೆ. ಆದರೆ ಅವರು ಚಾಲನಾ ಪರವಾನಿಗೆ ಮತ್ತು ಬ್ಯಾಡ್ಜ್ ಹೊಂದಿರಬೇಕು ಎಂಬ ನಿಯಮದಿಂದಾಗ ಅರ್ಧದಷ್ಟು ಮಂದಿ ಸೌಲಭ್ಯ ವಂಚಿತರಾಗುತ್ತಿದ್ದಾರೆ.

2020ರ ಮಾ. 1ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಪರವಾನಿಗೆಯನ್ನು ಸೇವಾ ಸಿಂಧು ವೆಬ್‌ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಜತೆಗೆ ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ವಿವರ, ಬ್ಯಾಂಕ್‌ನ ಐಎಫ್ಎಸ್‌ಸಿ, ಎಂಐಸಿಆರ್‌ ಕೋಡ್‌ಗಳು, ವಾಹನದ ನೋಂದಣಿ ಸಂಖ್ಯೆ ನಮೂದಿಸಬೇಕು. ಅರ್ಜಿ ಸಲ್ಲಿಸುವ ವೇಳೆ ಚಾಲಕರು ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಪತ್ರವನ್ನೂ ನೀಡಬೇಕು.

ಸಚಿವರಿಂದ ಭರವಸೆ
ಸುಪ್ರೀಂ ಕೋರ್ಟ್‌ ಸಾರಿಗೆ ಇಲಾಖೆಗೆ 2017ರ ಜು. 3ರಂದು ಆದೇಶ ಸಂಖ್ಯೆ 5826ರ ಆದೇಶದಲ್ಲಿ ಬ್ಯಾಡ್ಜ್ ಕಡ್ಡಾಯವಲ್ಲ ಎಂದು ಉಲ್ಲೇಖಿಸಿದೆ. ಹೀಗಾಗಿ ಬ್ಯಾಡ್ಜ್ ರಹಿತರು ಕೂಡ ಸರಕಾರದ ಸಹಾಯಧನ ಪಡೆಯಲು ಅರ್ಹರು. ರಿಕ್ಷಾ ಪರವಾನಿಗೆ ಕೂಡ ತಾಲೂಕು ವ್ಯಾಪ್ತಿಯದ್ದಾಗಿರುತ್ತದೆ. ಆದ್ದರಿಂದ ಬ್ಯಾಡ್ಜ್ ರಹಿತರಿಗೂ ಸೌಲಭ್ಯ ಒದಗಿಸಬೇಕು ಎಂಬ ಆಗ್ರಹ ಗಳಿವೆ. ಬ್ಯಾಡ್ಜ್ ರಹಿತರರಿಗೆ ಸೌಲಭ್ಯ ನೀಡು ವುದು, ನಿಯಮಾವಳಿ ಸಡಿಲಿಸಬೇಕು ಇತ್ಯಾದಿ ಬೇಡಿಕೆಗಳ ಮನವಿಯನ್ನು ದ.ಕ. ಜಿಲ್ಲೆಯ ಗುತ್ತಿಗಾರು ಬಿಎಂಎಸ್‌ ಸಂಘಟನೆಯ ಚಂದ್ರಶೇಖರ್‌ ಕಡೋಡಿ ಅವರು ಉಸ್ತುವಾರಿ ಸಚಿವರಿಗೆ ಸಲ್ಲಿಸಿದ್ದು, ಸರಕಾರದ ಮಟ್ಟದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ.

ಮಧ್ಯವರ್ತಿಗಳ ಹಾವಳಿ ತಡೆಯಿರಿ
ರಿಕ್ಷಾ ಚಾಲಕರು ದಾಖಲೆ ಇತ್ಯಾದಿ ಪಡೆಯಲು ಮಧ್ಯವರ್ತಿಗಳ ಮೊರೆ ಹೋಗುತ್ತಾರೆ. ಸಹಾಯಧನ ವಿಚಾರದಲ್ಲೂ ಮಧ್ಯವರ್ತಿಗಳು ಕೈಯಾಡಿಸುವ ಸಾಧ್ಯತೆ ಇದೆ. ಅವರು ಬಡ ಚಾಲಕರ ದಾರಿ ತಪ್ಪಿಸದಂತೆ ಮತ್ತು ಯೋಜನೆಯ ಹಣ ಪೂರ್ತಿಯಾಗಿ ಚಾಲಕರಿಗೇ ತಲುಪುವಂತೆ ಆಗಬೇಕೆಂದು ರಿಕ್ಷಾ ಚಾಲಕ ಯೂನಿಯನ್‌ಗಳು ಆಗ್ರಹಿಸಿವೆ.

ಅರ್ಜಿ ಸಲ್ಲಿಕೆಗೆ ಸೂಚಿಸಲಾಗಿದ್ದರೂ ಉಡುಪಿ ಜಿಲ್ಲೆಯಲ್ಲಿ ಇನ್ನು ಈ ಬಗ್ಗೆ ಜಿಲ್ಲಾಧಿಕಾರಿಗಳು ಯಾವುದೇ ಪ್ರಕಟನೆ ಹೊರಡಿಸಿಲ್ಲ. ಬಹುತೇಕ ಚಾಲಕರು ಬಡವರು. ಬ್ಯಾಡ್ಜ್ ಇಲ್ಲದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಬ್ಯಾಡ್ಜ್ ರಹಿತರಿಗೂ ಸೌಲಭ್ಯ ವಿಸ್ತರಿಸಬೇಕು.
– ಸುರೇಶ್‌ ಅಮೀನ್‌,
ಕಾರ್ಯಾಧ್ಯಕ್ಷ , ಆಟೋ ಚಾಲಕರ ಸಂಘದ ಜಿಲ್ಲಾ ಒಕ್ಕೂಟ, ಉಡುಪಿ

ಆಟೋ ರಿಕ್ಷಾ ಚಾಲಕರ ಪೈಕಿ ಶೇ. 40ರಷ್ಟು ಮಂದಿ ಬ್ಯಾಡ್ಜ್ ಹೊಂದಿಲ್ಲ. ಹೀಗಾಗಿ ಅವರು ಸೌಲಭ್ಯದಿಂದ ವಂಚಿತರಾಗುತ್ತಾರೆ. ಬ್ಯಾಡ್ಜ್ ರಹಿತರಿಗೂ ಸಿಗುವಂತೆ ಒತ್ತಡ ತರಲಾಗುವುದು.
-ಭಾಸ್ಕರ ರಾವ್‌, ಜಿಲ್ಲಾಧ್ಯಕ್ಷರು, ಬಿಎಂಎಸ್‌ ಅಟೋ ಚಾಲಕರ ಸಂಘ ದ.ಕ. ಜಿಲ್ಲೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.