ಬಳ್ಳಮಂಜ: 14-15 ನೇ ಶತಮಾನದ ಶಾಸನದ‌ ಅಧ್ಯಯನ


Team Udayavani, Oct 22, 2021, 5:44 PM IST

shasana-22

ಬೆಳ್ತಂಗಡಿ: ತಾಲೂಕಿನ ಬಳ್ಳಮಂಜದ ಶ್ರೀ ಮಹತೋಭಾರ ಅನಂತೇಶ್ವರ ದೇವಾಲಯದ ಆವರಣದಲ್ಲಿ 14-15ನೇ ಶತಮಾನಕ್ಕೆ‌ ಸೇರಿದ ಶಾಸನವನ್ನು ಸಂದೇಶ್ ಜೈನ್ ಅವರ ಮಾಹಿತಿಯ ಮೇರೆಗೆ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ‌ – ಉಡುಪಿ (ಎನ್‌.ಟಿ.ಸಿ – ಎ.ಒ.ಎಂ ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್‌.ಎ.ಕೃಷ್ಣಯ್ಯ ಅವರ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ‌ಮೂಡುಬೆಳ್ಳೆ ಅವರು ಅಧ್ಯಯನ ಮಾಡಿರುತ್ತಾರೆ.‌

ಶಾಸನವನ್ನು ಈ‌ ಮೊದಲು ಹಿರಿಯ ಸಂಶೋಧಕರಾದ ಡಾ. ಎಸ್.ಡಿ.ಶೆಟ್ಟಿ ಅವರು ಗಮನಿಸಿದ್ದು ಇದರ ಬಗ್ಗೆ ‌ಸರಳವಾದ ಮಾಹಿತಿಯನ್ನು ದೇವಾಲಯದ ಕೃತಿಯಲ್ಲಿ ನೀಡಿರುತ್ತಾರೆ. ಇವರು ದೇವಾಲಯದಲ್ಲಿ ಮೂರು ಶಾಸನಗಳಿವೆ ಎಂದು ತಿಳಿಸಿದ್ದು, ಒಂದು ಶಾಸನವು ಪ್ರಕಟಣೆಯಾಗಿರುತ್ತದೆ. ಪ್ರಸ್ತುತ ಈ ಶಾಸನವು ಹೊಸದಾಗಿ ಪತ್ತೆಯಾಗಿದ್ದು ಇನ್ನೊಂದು ಶಾಸನವು ಎಲ್ಲಿದೆ ಎಂದು ತಿಳಿದುಬಂದಿಲ್ಲ.

ಗ್ರಾನೈಟ್ ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ತುಂಡಾಗಿದ್ದು ಎರಡೂ ಬದಿಗಳಲ್ಲಿ ಕನ್ನಡ ಲಿಪಿಗಳಿವೆ. ಶಾಸನದ‌ ಹೆಚ್ಚಿನ ಅಕ್ಷರಗಳು ತೃಟಿತಗೊಂಡಿದ್ದು ಉಳಿದಿರುವ ಲಿಪಿಯ ಆಧಾರದ ‌ಮೇಲೆ‌ ಈ ಶಾಸನವು 14-15ನೇ‌ ಶತಮಾನಕ್ಕೆ ಸೇರಿದೆ ಎಂದು‌ ಹೇಳಬಹುದು.

ಇದನ್ನೂ ಓದಿ:  ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

ಶಾಸನದ ಪ್ರಕಾರ ಬಳ್ಳಮಂಜದ ದೇವರಿಗೆ ಕಂನಿಯಂಣ ಸೆಟಿ ಮತ್ತು ಬೆಳತಂಗಡಿ (ಬೆಳ್ತಂಗಡಿ)ಯ ಬೀರ‌ ಸೆನಭೋವನ ಮಗ ಕಾಂತಣ್ಣ‌ ಸೆನಭೋವನು ಮಾಡಿದ ಧರ್ಮದ ಬಗ್ಗೆ ಮಾಹಿತಿಯಿದೆ. ಶಾಸನದಲ್ಲಿ ಬಳ್ಳಮಂಜ ದೇವರಿಗೆ ಬಿಟ್ಟ ಭೂಮಿಯ ವಿವರ ಹಾಗೂ ಬ್ರಾಹ್ಮಣ ಭೋಜನಕ್ಕೆ ‌ಕೊಟ್ಟ ವಿವರಗಳನ್ನು ಉಲ್ಲೇಖಿಸಲಾಗಿದೆ.

ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ವಿಜಯ್ ಆಚಾರ್ಯ ಹಾಗೂ ದೇವಾಲಯದ ಆಡಳಿತ ಮಂಡಳಿಯವರು ಸಹಕಾರ ನೀಡಿರುತ್ತಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.