ಬಂಡೀಪುರ: ಕಾದಾಟದಲ್ಲಿ ಚಿರತೆ ಸಾವು
Team Udayavani, Feb 14, 2023, 8:52 PM IST
ಗುಂಡ್ಲುಪೇಟೆ(ಚಾಮರಾಜನಗರ): ಕಾಡಾಟದಲ್ಲಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯದಂಚಿನ ನಾಗರತ್ನಮ್ಮ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ.
ಸುಮಾರು ಒಂದೂವರೆ ವರ್ಷದ ಗಂಡು ಚಿರತೆ ಶವ ಪತ್ತೆಯಾಗಿದ್ದು, ಚಿರತೆಯ ಉಗುರು-ಹಲ್ಲುಗಳು ಸ್ಥಳದಲ್ಲೇ ಇದ್ದ ಕಾರಣ ಕಾಡು ಹಂದಿಯೊಂದಿಗೆ ಕಾದಾಟದಲ್ಲಿ ಸಾವನ್ನಪ್ಪಿದ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.
ಓಂಕಾರ ವಲಯದ ಅಂಚಿನ ನಾಗರತ್ಮಮ್ಮ ಕಾಲೋನಿ ಬಳಿ ಚಿರತೆಯ ಶವ ಪತ್ತೆಯಾಗಿದ್ದು, ಚಿರತೆ ಶವದಲ್ಲಿ ಹುಳುಗಳು ಬಿದ್ದಿವೆ. ಮೇಲಾಧಿಕಾರಿಗಳ ಗಮನಕ್ಕೆ ಆರ್ಎಫ್ಒ ಕೆ.ಪಿ.ಸತೀಶ್ಕುಮಾರ್ ತಂದಿದ್ದಾರೆ. ಸ್ಥಳಕ್ಕೆ ಎಸಿಎಫ್ ಜಿ.ರವೀಂದ್ರ, ಪಶು ವೈದ್ಯ ಡಾ.ವಾಸೀ ಮಿರ್ಜಾ, ಡಿಆರ್ಎಫ್ಒ ಅಮರ್, ಗಸ್ತು ವನಪಾಲಕ ಶ್ರೀಕಾಂತ್, ಚಾಲಕ ಹನೀಫ್, ಶ್ರೀಕಂಠ ಭೇಟಿ ನೀಡಿದ್ದರು.
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗು ನಿರ್ದೇಶಕ ಡಾ.ಪಿ.ರಮೇಶ್ಕುಮಾರ್ ಮಾರ್ಗದರ್ಶನದಂತೆ ಚಿರತೆಯ ಶವ ಪರೀಕ್ಷೆಯ ಬಳಿಕ ಬೆಂಕಿಯಲ್ಲಿ ಸುಟ್ಟು ಹಾಕಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.