Bangalore-Chennai ಎಕ್ಸ್‌ಪ್ರಸ್‌ ಹೈವೇ ಲೋಕಾರ್ಪಣೆಗೆ ಸಜ್ಜು

ದೇಶದ ಮೊಟ್ಟ ಮೊದಲ ಹಸಿರು ಹೆದ್ದಾರಿ

Team Udayavani, Aug 18, 2023, 6:34 AM IST

chennai bangalore express

ಭಾರತ ಮಾಲಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ದೇಶದ ಮೊದಲ ಹಸಿರು ಹೆದ್ದಾರಿ

ಕೋಲಾರ: ಗಂಟೆಗೆ 120 ಕಿ.ಮೀ. ವೇಗದಲ್ಲಿ ಕೇವಲ ಎರಡೂವರೆ ಗಂಟೆಯಲ್ಲಿ ಬೆಂಗಳೂರಿನಿಂದ ಚೆನ್ನೈ ಮಹಾನಗರದ ತಲುಪಬಹುದಾದ ಭಾರತ ಮಾಲಾ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ದೇಶದ ಮೊಟ್ಟ ಮೊದಲ ಹಸಿರು ಹೆದ್ದಾರಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌ ಹೈವೇ ಲೋಕಸಭಾ ಚುನಾವಣೆಗೂ ಮುನ್ನ ಲೋಕಾರ್ಪಣೆಗೊಳ್ಳಲು ಸಜ್ಜಾಗುತ್ತಿದೆ.

ಹಾಲಿ ಬೆಂಗಳೂರು-ಚೆನ್ನೈ ನಡುವೆ ಎರಡು ಹೆದ್ದಾರಿಗಳಿವೆ. ಹೊಸಕೋಟೆ-ಕೋಲಾರ ಮಾರ್ಗವಾಗಿರುವ ಹೆದ್ದಾರಿ 335 ಕಿ.ಮೀ. ಹಾಗೂ ಬೆಂಗಳೂರು-ಹೊಸೂರು ನಡುವೆ ಇರುವ ಹೆದ್ದಾರಿ 372 ಕಿ.ಮೀ. ದೂರ ಹೊಂದಿದ್ದು, ಹಾಲಿ ನಿರ್ಮಾಣವಾಗುತ್ತಿರುವ ಎಕ್ಸ್‌ಪ್ರಸ್‌ ಹೈವೇ 258 ಕಿ.ಮೀ. ದೂರದ್ದಾಗಿದೆ.  ಈಗ ಬೆಂಗಳೂರು-ಚೆನ್ನೈ ನಡುವೆ 6ರಿಂದ 7 ಗಂಟೆಗಳ ಪ್ರಯಾಣ ಕ್ರಮಿಸಬೇಕಾಗಿದ್ದು, ಎಕ್ಸ್‌ಪ್ರಸ್‌ ಹೈವೇಯಲ್ಲಿ ಈ ಸಮಯವನ್ನು ಕೇವಲ 2.50 ಗಂಟೆಯಿಂದ 4 ಗಂಟೆಗಳಲ್ಲಿ ಕ್ರಮಿಸಬಹುದಾಗಿದೆ.

2011ರಲ್ಲಿ ಘೋಷಣೆ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌  ಯೋಜನೆಯನ್ನು 2011ರಲ್ಲಿ ರೂಪಿಸಲಾಗಿತ್ತು.  2020 ನವೆಂಬರ್‌ನಲ್ಲಿ ಒಟ್ಟು ಆರು ಕಂಪನಿಗಳಿಗೆ 10  ಪ್ಯಾಕೇಜ್‌ಗಳಲ್ಲಿ ಯೋಜನೆ ಪೂರ್ಣಗೊಳಿಸಲು ಟೆಂಡರ್‌ಒಪ್ಪಿಸಲಾಗಿತ್ತು. ಸುಮಾರು 17,930 ಕೋಟಿ ರೂ. ಅಂದಾಜು ವೆಚ್ಚದ ಈ ಯೋಜನೆಗೆ ಪ್ರಧಾನಿ  ಮೋದಿಯವರು 2022 ಮೇ 26ರಂದು ಗುದ್ದಲಿ ಪೂಜೆ ನೆರವೇರಿಸಿದ್ದರು. ಮಾರ್ಚ್‌ 2024ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂಬ ಕಾಲಮಿತಿ ನೀಡಲಾಯಿತು.

ಮೂರು ರಾಜ್ಯಗಳು, ಐದು ಜಿಲ್ಲೆಗಳು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌ ಹೈವೇ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಮೂರು ರಾಜ್ಯಗಳ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿತ್ತೂರು, ರಾಣಿಪೇಟೈ ಹಾಗೂ ಕಾಂಚಿಪುರಂ ಜಿಲ್ಲೆಗಳಲ್ಲಿ ಹಾದು ಹೋಗಲಿದೆ. ಮೂರು ಹಂತಗಳಲ್ಲಿ ಕಾಮಗಾರಿ ನಿರ್ವಹಣೆ ಮಾಡಲಾಗುತ್ತಿದೆ. ಸದ್ಯಕ್ಕೆ ನಾಲ್ಕು ಲೇನ್‌ಗಳ ಹೆದ್ದಾರಿ ನಿರ್ಮಾಣವಾಗುತ್ತಿದ್ದು, ಭವಿಷ್ಯದಲ್ಲಿ 8 ಲೇನ್‌ಗಳಿಗೆ ವಿಸ್ತರಿಸಲು ಈಗಲೇ ಸ್ಥಳಾವಕಾಶ ಕಲ್ಪಿಸಿಕೊಳ್ಳಲಾಗುತ್ತಿದೆ. ಪ್ರಸ್ತುತ ಶೇ.15 ರಿಂದ ಶೇ.80ರವರೆಗೆ ವಿವಿಧ ಹಂತಗಳ ಕಾಮಗಾರಿ ಪ್ರಗತಿಯಲ್ಲಿದೆ.

ಹಸಿರು ಹೆದ್ದಾರಿ: ದೇಶದ ಮೊದಲ ಹಸಿರು ಹೆದ್ದಾರಿ ಎಂದು ಈ ಯೋಜನೆಯನ್ನು ಕರೆಯಲಾಗುತ್ತಿದೆ. ಯೋಜನೆಗಾಗಿ ಕೇವಲ 33 ಕಿ.ಮೀ. ಜಾಗವನ್ನು ಮಾತ್ರವೇ ಅರಣ್ಯ ಪ್ರದೇಶದಲ್ಲಿ ಬಳಸಿಕೊಳ್ಳಲಾಗಿದೆ. ಸುಮಾರು 2 ಸಾವಿರ ಮರಗಳನ್ನು ಕಡಿಯಲಾಗಿದೆ. ಇದನ್ನು ತುಂಬಲು ಹೆದ್ದಾರಿಯ ಅಕ್ಕಪಕ್ಕದಲ್ಲಿರುವ ಕೆರೆಗಳನ್ನು ಅಮೃತ ಸರೋವರ ಯೋಜನೆಯಡಿ ಪುನಶ್ಚೇತನ ಮಾಡಲಾಗುತ್ತಿದೆ. ಅಮೃತ ಮಹೋತ್ಸವ ಪಕ್ಷಿಧಾಮಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮರಗಳನ್ನು ಹೆಚ್ಚು ಬೆಳೆಸಲು ಯೋಜಿಸಲಾಗಿದೆ.

ಹೆದ್ದಾರಿಯ ಲಾಭಗಳೇನು?

ಬೆಂಗಳೂರು-ಚೆನ್ನೈಎಕ್ಸ್‌ಪ್ರಸ್‌ ಹೈವೇಯಿಂದಾಗಿ ಎರಡೂ ನಗರ ನಡುವಿನ ವಿಮಾನಯಾನದ ಒತ್ತಡ ಕಡಿಮೆಯಾಗಲಿದೆ. ಸಂಚಾರದ ಅವಧಿ ಕಡಿಮೆಯಾಗಲಿದೆ. ಸರಕು ಸಾಗಾಣೆ ವೆಚ್ಚ ಶೇ.16 ರಷ್ಟು ಕಡಿಮೆಯಾಗಲಿದೆ. ಮೂರು ರಾಜ್ಯಗಳ ಐದು ಜಿಲ್ಲೆಗಳಲ್ಲಿ ಹೆದ್ದಾರಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವುದರಿಂದ ಹೆದ್ದಾರಿ ಉದ್ದಕ್ಕೂ ಆರ್ಥಿಕ ಚಟುವಟಿಕೆಗಳು ಚುರುಕುಗೊಳ್ಳಲಿದೆ. ಕೈಗಾರಿಕಾ ಪ್ರದೇಶಾಭಿವೃದ್ಧಿಗೆ ಸಹಕಾರಿಯಾಗಲಿದೆ. ಈಗಾಗಲೇ ಹೆದ್ದಾರಿಗೆ ಹೊಂದಿಕೊಂಡಂತೆ ಕೈಗಾರಿಕೆ  ಅರಂಭಿಸಲು ಸಿದ್ಧತೆ ನಡೆಯುತ್ತಿವೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಕಳೆದ ವರ್ಷ ಹೆದ್ದಾರಿ ಕಾಮಗಾರಿಯನ್ನು ವೀಕ್ಷಿಸಿದ್ದಾರೆ. ಹೆದ್ದಾರಿಯು ಮಾರ್ಚ್‌ 2024 ರೊಳಗೆ ಲೋಕಾರ್ಪಣೆಯಾದರೂ, ಸಂಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಕ್ತಾಯವಾಗಲು ಮುಂದಿನ ವರ್ಷ ಆಗಸ್ಟ್‌ವರೆಗೂ ಕಾಯಬೇಕಾಗಬಹುದು ಎನ್ನಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರಸ್‌ ಹೈವೇಗಾಗಿ 61 ಗ್ರಾಮಗಳ 666 ಹೆಕ್ಟೇರ್‌ ಪ್ರದೇಶವನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. 446 ಕೋಟಿ ಪರಿಹಾರ ವಿತರಿಸಲಾಗಿದೆ. ತಾಂತ್ರಿಕ ಕಾರಣಗಳಿಗಾಗಿ 108 ಕೋಟಿ ರೂ. ಪರಿಹಾರ ವಿತರಣೆ ಬಾಕಿ ಇದೆ. ಕೋಲಾರ ಜಿಲ್ಲೆಯಲ್ಲಿ ಹೈವೇಯ ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ.

– ಶ್ರೀನಿವಾಸಶೆಟ್ಟಿ. ವ್ಯವಸ್ಥಾಪಕ, ವಿಶೇಷ ಭೂಸ್ವಾಧೀನ ಅಧಿಕಾರಿ ಹಾಗೂ ಸಕ್ರಮ ಪ್ರಾಧಿಕಾರ, ಎನ್‌ಎಚ್‌ಎಐ

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.