![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 9, 2021, 1:30 PM IST
ಬಂಗಾರಪೇಟೆ: ತಾಲೂಕಿನ ಬೂದಿಕೋಟೆ ಗ್ರಾಮದ ಮುಖ್ಯ ರಸ್ತೆಯ ಬಳಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದು, ಆದಷ್ಟು ಬೇಗ ಪೂರ್ಣಗೊಳಿಸುವಂತೆ ಬೂದಿಕೋಟೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ತಾಲೂಕಿನ ಬೂದಿಕೋಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹೊಳೆಯ ಬಳಿ 1.25 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲು ಕಾಮಗಾರಿಯ ಟೆಂಡರ್ ಅನ್ನು ಮುರಳಿ ಎಂಬವರು ಗುತ್ತಿಗೆ ಪಡೆದಿದ್ದಾರೆ. ಟೆಂಡರ್ ಪ್ರಕ್ರಿಯೆ ಮುಗಿದು ಸುಮಾರು ಐದು ವರ್ಷ ಕಳೆದಿದ್ದು, ಎರಡು ವರ್ಷಗಳ ಹಿಂದೆ ಗುತ್ತಿಗೆದಾರರು ಸೇತುವೆ ಕಾಮಗಾರಿ ಆರಂಭಿಸಿದ್ದಾರೆ. ಕಾಮಗಾರಿ ಆರಂಭವಾದ ದಿನದಿಂದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು ಸೇತುವೆ ಪೂರ್ಣಗೊಳ್ಳದ ಕಾರಣ ಹಲವು ಬಾರಿ ಅಪಘಾತ ನಡೆದಿದೆ.
ಹೊಸ ಸೇತುವೆ ನಿರ್ಮಾಣದ ಪಕ್ಕದಲ್ಲಿ ಚಿಕ್ಕದಾದ ಹಳೆ ಸೇತುವೆ ಇದ್ದು, ಎರಡೂ ಅಕ್ಕಪಕ್ಕ ಇರುವ ಕಾರಣ ವಾಹನ ಸಂಚಾರಕ್ಕೆ ಯಾವ ಸೇತುವೆಯಲ್ಲಿ ಸಂಚರಿಸಬೇಕು ಎಂಬ ಗೊಂದಲ
ಹೊಸದಾಗಿ ಈ ಮಾರ್ಗದಲ್ಲಿ ಬರುವ ವಾಹನ ಸವಾರರಿಗೆ ಉಂಟಾಗಿದೆ. ಇದರ ಜತೆಗೆ ಹಳೆಯ ಸೇತುವೆ ಸಣ್ಣದಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಒಂದು ವಾಹನ ಸಂಚರಿಸಿದ ಬಳಿಕ ಮತ್ತೂಂದು ವಾಹನದ ಚಾಲಕ ಕಾಯಬೇಕಾದ ಅನಿವಾರ್ಯ ಎದುರಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
15 ದಿನದಲ್ಲಿ ಡಾಂಬರು ಕಾರ್ಯ ಪೂರ್ಣ
ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಬಳಿ ನಿರ್ಮಾಣ ಮಾಡುತ್ತಿರುವ ಮೇಲ್ಸೆತುವೆ ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ಬರಲು ವಿಳಂಬವಾದ ಕಾರಣ ಕಾಮಗಾರಿ
ಪೂರ್ಣಗೊಳ್ಳಲು ಸ್ವಲ್ಪ ತಡವಾಗಿದೆ. ಅನುಮೋದನೆ ಕಾರ್ಯ ಇತ್ತೀಚೆಗೆ ಪೂರ್ಣಗೊಂಡಿದ್ದು, ಸೇತುವೆ ಬಳಿ ರಸ್ತೆ ನಿರ್ಮಿಸಲು ಜಲ್ಲಿ ಹಾಕಲಾಗಿದೆ. ಮುಂದಿನ 15 ದಿನಗಳಲ್ಲಿ ಡಾಂಬರು ಕಾರ್ಯ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಲಾಗುವುದು ಎಂದು ಗುತ್ತಿಗೆದಾರರಾದ ಕೆ.ಎಂ.ಮುರಳಿ ಮಾಹಿತಿ ನೀಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.