ಕೋವಿಡ್-19 ಭೀತಿ ನಡುವೆಯೂ ಬ್ಯಾಂಕಿಂಗ್‌ ಕ್ಷೇತ್ರ ಅಬಾಧಿತ

ಕನಿಷ್ಠ ಸಿಬಂದಿ ನಿರ್ವಹಿಸಿಕೊಂಡು ಕಾರ್ಯ ನಿರ್ವಹಣೆ

Team Udayavani, Apr 29, 2020, 5:40 AM IST

ಕೋವಿಡ್-19 ಭೀತಿ ನಡುವೆಯೂ ಬ್ಯಾಂಕಿಂಗ್‌ ಕ್ಷೇತ್ರ ಅಬಾಧಿತ

ಉಡುಪಿ: ಕೋವಿಡ್-19 ಹಾವಳಿಯಿಂದ ದೇಶವಿಡೀ ಲಾಕ್‌ಡೌನ್‌ ಆಗಿದ್ದರೂ ಆರೋಗ್ಯ, ಪೊಲೀಸ್‌, ಅಗ್ನಿ ಶಾಮಕ, ಗೃಹರಕ್ಷಕದಳದವರಂತೆ ಒಂದಿ ನಿತೂ ನಿಲುಗಡೆ ಇಲ್ಲದೆ ನಡೆಯುತ್ತಿರುವ ಕ್ಷೇತ್ರದಲ್ಲಿ ಬ್ಯಾಂಕಿಂಗ್‌ ಕೂಡ ಒಂದಾಗಿದೆ ಭಾರತೀಯ ರಿಸರ್ವ್‌ ಬ್ಯಾಂಕ್‌, ಹಣಕಾಸು ಸಚಿವಾಲಯದ ಸೂಚನೆ ಮೇರೆಗೆ ಠೇವಣಿ, ಹಣ ತೆಗೆಯುವುದು, ಚೆಕ್‌ ಕ್ಲಿಯರೆನ್ಸ್‌, ಸರಕಾರಿ ವ್ಯವಹಾರಗಳು ಇತ್ಯಾದಿಗಳು ನಡೆಯುತ್ತಿವೆ.

ಕನಿಷ್ಠ ಸಿಬಂದಿ ನಿಯೋಜಿಸಿ ಕೊಂಡು, ಮಾಸ್ಕ್, ಸ್ಯಾನಿಟೈಸರ್‌, ಸಾಮಾಜಿಕ ಅಂತರದ ಪಾಲನೆ ಇತ್ಯಾದಿ ಅಗತ್ಯಗಳೊಂದಿಗೆ ಕಾರ್ಯನಿರ್ವಹಿಸಿ ಎಂಬ ಸೂಚನೆ ಮೇರೆಗೆ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ನಿವೃತ್ತಿ ಅಂಚಿನಲ್ಲಿರುವವರು, ಆರೋಗ್ಯದ ಅಗತ್ಯವುಳ್ಳವರಿಗೆ ರಜೆ ನೀಡಿ ಉಳಿದವರಿಂದ ಕೆಲಸ ನಡೆಸ ಲಾಗುತ್ತಿದೆ. ಸಮೀಪದ ಶಾಖೆಗಳಲ್ಲಿ ಕಾರ್ಯ ನಿರ್ವಹಿಸುವಂತೆಯೂ ನೋಡಿ
ಕೊಳ್ಳಲಾಗುತ್ತಿದೆ.

ಪಾಸ್‌ಬುಕ್‌ ಎಂಟ್ರಿಗಳು ನಡೆಯುತ್ತಿಲ್ಲ. ಹಿಂದಿನ ದಾಖಲೆಗಳ ಆಧಾರದಲ್ಲಿ ಸಣ್ಣಪುಟ್ಟ ಸಾಲ ನೀಡಲಾಗುತ್ತಿದೆ. ಜನಧನ್‌ ಖಾತೆಗೆ ಇತ್ತೀಚೆಗೆ 500 ರೂ. ಜಮೆಯಾದ ಕಾರಣ ಒಮ್ಮೆಲೆ ಬ್ಯಾಂಕುಗಳಿಗೆ ಗ್ರಾಹಕರು ಬಂದಾಗ ಸಾಮಾಜಿಕ ಅಂತರ ಕಾಪಾಡುವುದೂ ದುಸ್ತರವಾಯಿತು. ಪ್ರಧಾನಿ ಕಿಸಾನ್‌ ನಿಧಿ, ಉಜ್ವಲ್‌ ಯೋಜನೆ, ಕಟ್ಟಡ ಕಾರ್ಮಿಕರ ಹಣ ಹೀಗೆ ಡಿಬಿಟಿ (ಡೈರೆಕ್ಟ್ ಬೆನೆಫಿಟ್‌ ಟ್ರಾನ್ಸ್‌ಫ‌ರ್‌) ಯೋಜನೆಗಳ ಹಣ ಬ್ಯಾಂಕ್‌ ಮೂಲಕ ನಿರ್ವಹಣೆಯಾಗುತ್ತಿರುವ ಕಾರಣ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಅಂತರ ಕಾಪಾಡಲು ಕಷ್ಟವಾಗುತ್ತಿದೆ ಎನ್ನುವ ಅಳಲು ಬ್ಯಾಂಕ್‌ ಸಿಬಂದಿಯದ್ದು.

ಸಾವಿರಾರು ಸಿಬಂದಿ ನಿರ್ವಹಣೆ
ಉಡುಪಿ ಜಿಲ್ಲೆಯಲ್ಲಿ 420 ಶಾಖೆಗಳು, 450 ಎಟಿಎಂಗಳು, 65 ಬಿಸಿನೆಸ್‌ ಕರೆಸ್ಪಾಂಡೆಂಟ್ಸ್‌, ದ.ಕ. ಜಿಲ್ಲೆಯಲ್ಲಿ 642 ಶಾಖೆಗಳು, 841 ಎಟಿಎಂಗಳು, 98 ಬಿಸಿನೆಸ್‌ ಕರೆಸ್ಪಾಂಡೆಂಟ್‌ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ಆರು, ತೊಕ್ಕೊಟ್ಟಿನಲ್ಲಿ ಒಂದು ಶಾಖೆ ಹೀಗೆ ಕಂಟೈನ್‌ಮೆಂಟ್‌ ಪ್ರದೇಶದಲ್ಲಿ ಏಳು ಶಾಖೆಗಳು ಕಾರ್ಯನಿರ್ವಹಿಸುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ 2,500-3000, ದ.ಕ. ಜಿಲ್ಲೆಯಲ್ಲಿ 3,500-4,000 ಸಿಬಂದಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲೂ ನಿರಂತರ ಸೇವೆ
ಆರ್‌ಬಿಐ ಮಾರ್ಗಸೂಚಿ ಪ್ರಕಾರ ಅಗತ್ಯ ಸೇವೆಗಳ ರಂಗದಲ್ಲಿ ಬರುವ ಬ್ಯಾಂಕಿಂಗ್‌ ಕ್ಷೇತ್ರವನ್ನು ಲಾಕ್‌ಡೌನ್‌ ಅವಧಿಯಲ್ಲಿಯೂ ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ.
-ರುದ್ರೇಶ್‌, ಪ್ರವೀಣ್‌, ಜಿಲ್ಲಾ ಅಗ್ರಣಿ ಬ್ಯಾಂಕ್‌ ಪ್ರಬಂಧಕರು, ಉಡುಪಿ ಮತ್ತು ದ.ಕ. ಜಿಲ್ಲೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.