karnataka polls 2023; ಕಾರ್ಯಕರ್ತರಿಗೆ ಶಕ್ತಿ ತುಂಬಿದ ಶಾಸಕ ರಾಜೇಶ್ ನಾೖಕ್
ಬಂಟ್ವಾಳದ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಹರಿಕೃಷ್ಣ ಬಂಟ್ವಾಳ
Team Udayavani, Apr 19, 2023, 11:38 AM IST
ಬಂಟ್ವಾಳ: ಕಾರ್ಯಕರ್ತರೂ ಯಾವತ್ತೂ ಕೂಡ ನಾಯಕರ ಹಿಂದೆ ಹೋಗದೆ ಪಕ್ಷದ ಹಿಂದೆ ಹೋದಾಗ ಆ ಕ್ಷೇತ್ರದಲ್ಲಿ ಪಕ್ಷ ಗಟ್ಟಿಯಾಗುತ್ತದೆ, ಯಾರೂ ಸ್ಪರ್ಧಿಸಿದರೂ ಗೆಲುವು ನಮ್ಮದಾಗುತ್ತದೆ ಎಂದು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ಪ್ರತಿ ಬಾರಿಯೂ ಪಕ್ಷದ ಕುರಿತು ಅಭಿಮಾನದ ಮಾತು ಹೇಳಿ, ಅಭ್ಯರ್ಥಿ ಘೋಷಣೆಗೆ ಮುನ್ನಾ ಬಂಟ್ವಾಳ ಕ್ಷೇತ್ರದ ಎಲ್ಲಾ ಬಿಜೆಪಿ ಶಕ್ತಿ ಕೇಂದ್ರಗಳಿಗೂ ತೆರಳಿ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕಾರ್ಯ ಮಾಡಿದ್ದಾರೆ ಎಂದು ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಹೇಳಿದರು.
ಕೇವಲ ಒಂದು ವಾರದ ಅಂತರದಲ್ಲಿ ಬಂಟ್ವಾಳದ ಎಲ್ಲ 59 ಗ್ರಾಮಗಳ ಪೈಕಿ 56 ಗ್ರಾಮಗಳನ್ನು ತಲುಪಿ ಶಕ್ತಿ ಕೇಂದ್ರದ ಪ್ರಮುಖರ ಜತೆ ಸಮಾಲೋಚನೆಯನ್ನು ನಡೆಸಿದ್ದರು. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಜಿಲ್ಲೆ, ಕ್ಷೇತ್ರದ ಎಲ್ಲಾ ಪದಾಧಿಕಾರಿಗಳು, ಗ್ರಾಮದ ಪ್ರಭಾರಿ ಸೇರಿದಂತೆ ಎಲ್ಲಾ ಕಾರ್ಯಕರ್ತರ ಪಾಲ್ಗೊಳ್ಳುವಿಕೆಯಲ್ಲಿ ಈ ಕಾರ್ಯ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.
ಶಾಸಕ ರಾಜೇಶ್ ನಾೖಕ್ ಅವರು ಪಕ್ಷವು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದೆ ಯಾವತ್ತೂ ಕೂಡ ತಾನು ಅಭ್ಯರ್ಥಿ ಎಂಬುದನ್ನು ಹೇಳದೆ ಪಕ್ಷ ಯಾರಿಗೆ ಅವಕಾಶ ನೀಡುತ್ತದೋ ಅದರ ಪರವಾಗಿ ಕೆಲಸ ಮಾಡೋಣ ಎಂಬುದನ್ನು ಹೇಳಿ ಪ್ರತಿ ಸಭೆಗಳಲ್ಲೂ ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯ ಮಾಡಿದ್ದರು.
ಅವರೇನೇ ಹೇಳಿದರೂ ಕಾರ್ಯಕರ್ತರು ಮಾತ್ರ ರಾಜೇಶ್ ನಾೖಕ್ ಅವರೇ ತಮ್ಮ ಅಭ್ಯರ್ಥಿ ಎಂದು ನಿರ್ಧರಿಸಿ ಬಿಟ್ಟಿದ್ದರು. ಅದಕ್ಕೆ ಪೂರಕ ಎಂಬಂತೆ ಶಕ್ತಿಯ ಕೇಂದ್ರದ ಪ್ರಮುಖರ ಅಂತಿಮ ಸಭೆಗಳ ಸಂದರ್ಭ ಪಕ್ಷದ ವರಿಷ್ಠರು ಕೂಡ ಬಂಟ್ವಾಳ ಕ್ಷೇತ್ರಕ್ಕೆ ರಾಜೇಶ್ ನಾೖಕ್ ಅವರೇ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು. ಪಕ್ಷ ಸಂಘಟನೆಗಾಗಿ ದುಡಿದ ಕಾರಣಕ್ಕಾಗಿಯೇ ಅವರು ಸರ್ವರ ಅಭ್ಯರ್ಥಿಯಾಗಿ ಮೂಡಿಬಂದಿದ್ದರು ಎಂದರು.
ಪ್ರತಿ ಗ್ರಾಮಗಳಿಗೆ ತೆರಳಿ ಕಾರ್ಯಕರ್ತರ ಬೇಡಿಕೆಗಳನ್ನು ಆಲಿಸಿ ನಾವು ಬಂಟ್ವಾಳದಲ್ಲಿ ಪಕ್ಷವನ್ನು ಗಟ್ಟಿಗೊಳಿಸೋಣ. ಮುಂದಿನ ದಿನಗಳಲ್ಲಿ ವಿರೋಧಿಗಳು ಎಷ್ಟೇ ಬಲಿಷ್ಠ ಅಭ್ಯರ್ಥಿಗಳನ್ನು ತಂದರೂ ಬಂಟ್ವಾಳದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ಸ್ಥಿತಿಗೆ ಪಕ್ಷವನ್ನು ತಂದು ನಿಲ್ಲಿಸಬೇಕು ಎಂದು ಪ್ರತಿ ಬಾರಿಯೂ ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯ ಮಾಡುತ್ತಿದ್ದರು.
ಕಷ್ಟ ಸುಖಗಳಿಗೆ ಸ್ಪಂದನೆ
ಶಕ್ತಿ ಕೇಂದ್ರದ ಸಭೆಗಳಲ್ಲಿ ಶಾಸಕ ರಾಜೇಶ್ ನಾೖಕ್ ಅವರು ಮಾತನಾಡುತ್ತಾ, ಕಳೆದ 5 ವರ್ಷಗಳಲ್ಲಿ ಕ್ಷೇತ್ರದಾದ್ಯಂತ ಸಂಚಾರ ಮಾಡಿ ಜನತೆಯ ಕಷ್ಟ ಸುಖಗಳಿಗೆ ಸ್ಪಂದನೆ ನೀಡುವ ಜತೆಗೆ ಗರಿಷ್ಠ ಪ್ರಮಾಣದ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನ ಮಾಡಿದ್ದೇನೆ. ದೇಶದ ಸಂಸ್ಕೃತಿ, ಧರ್ಮವನ್ನು ಉಳಿಸುವ ಕಾರ್ಯದ ಸಂಜೆ ಶಾಂತಿಯ ಬಂಟ್ವಾಳ ನಿರ್ಮಾಣ ಮಾಡಿದ ತೃಪ್ತಿ ಇದೆ ಎಂದರು.
ಚುನಾವಣೆ ಹತ್ತಿರ ಬರುವಾಗ ಕಾಂಗ್ರೆಸ್ಗೆ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಅವರ ನೆನಪಾಗುತ್ತದೆ. ಚುನಾವಣೆಯ ಸಂದರ್ಭ ಅವರ ನಿವಾಸಕ್ಕೆ ಬಂದು ನಾಟಕ ಮಾಡುತ್ತಾರೆ. ಸತ್ಯ, ನ್ಯಾಯದ ಸಾಕಾರಮೂರ್ತಿಯಾಗಿರುವ ರಾಜೇಶ್ ನಾೖಕ್ ಅವರನ್ನು ಬಂಟ್ವಾಳದಲ್ಲಿ ಮತ್ತೂಮ್ಮೆ ಗೆಲ್ಲಿಸಬೇಕಿದೆ ಎಂದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಶಾಸಕ ರಾಜೇಶ್ ನಾೖಕ್ ಅವರು ಕ್ಷೇತ್ರಕ್ಕೆ ಕೇಳಿದ್ದನ್ನು ನೀಡಿದ ಕಾಮಧೇನುವಾಗಿದ್ದು, ಅವರನ್ನು ಮತ್ತೂಮ್ಮೆ ಗೆಲ್ಲಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.