Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ


Team Udayavani, May 19, 2024, 1:53 AM IST

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

ಬಂಟ್ವಾಳ: ಖೋಟಾ ನೋಟುಗಳನ್ನು ವಿನಿಮಯ ಮಾಡಲು ಬಂದಿದ್ದ ಕೇರಳದ ಮೂಲದ ತಂಡವನ್ನು ಭೇದಿಸಿದ್ದ ಬಂಟ್ವಾಳ ನಗರ ಪೊಲೀಸರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಪಡೆದು ತಂಡದಿಂದ ಒಟ್ಟು 506 ನೋಟುಗಳನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದೆ.

ಮೇ 10ರಂದು ಬಿ.ಸಿ.ರೋಡಿನಲ್ಲಿ ಹೆದ್ದಾರಿ ಬದಿ ಕೇರಳ ನೋಂದಣಿಯ ಕಾರು ಅನುಮಾನಾಸ್ಪದ ರೀತಿಯಲ್ಲಿ ನಿಂತಿದ್ದು, ಬಂಟ್ವಾಳ ನಗರ ಠಾಣಾ ಪಿಎಸ್‌ಐ ರಾಮಕೃಷ್ಣ ಹಾಗೂ ಸಿಬಂದಿ ಕಾರಿನ ಬಳಿ ತೆರಳಿದಾಗ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಓರ್ವನನ್ನು ಬಂಧಿಸಲಾಗಿತ್ತು. ಬಳಿಕ ಕಾರಿನಲ್ಲಿದ್ದ ಓರ್ವ ಮಹಿಳೆಯನ್ನೂ ಬಂಧಿಸಲಾಯಿತು.

ಕಾಸರಗೋಡಿನ ಕೂಡ್ಲು ಗ್ರಾಮದ ಚೂರಿ ನಿವಾಸಿಗಳಾದ ಮೊಹಮ್ಮದ್‌ ಸಿ.ಎ.(61) ಹಾಗೂ ಕಮರುನ್ನೀಸಾ(41) ಬಂಧಿತ ಆರೋಪಿಗಳಾಗಿದ್ದು, ಪೊಲೀಸ್‌ ಕಾರ್ಯಾಚರಣೆ ವೇಳೆ ಆರೋಪಿ ಶರೀಫ್‌ ಪರಾರಿಯಾಗಿದ್ದನು. ಆರೋಪಿಗಳಿಂದ 500 ರೂ. ಮುಖಬೆಲೆಯ 46 ಖೋಟಾ ನೋಟುಗಳು, 5,300 ರೂ.ನಗದು ಹಾಗೂ 3 ಮೊಬೈಲ್‌ ಗಳನ್ನು ವಶಪಡಿಕೊಂಡಿದ್ದರು.

ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದು, ಪ್ರಸ್ತುತ ಆರೋಪಿಗಳಿಂದ 500 ರೂ. ಮುಖಬೆಲೆಯ 460 ಖೋಟಾ ನೋಟುಗಳನ್ನು ವಶ ± ‌ಡಿಸಿಕೊಂಡಿದ್ದಾರೆ. ಹಿಂದಿನ ನೋಟುಗಳು ಸೇರಿ ಒಟ್ಟು ವಶಪಡಿಸಿಕೊಂಡ ನೋಟುಗಳ ಸಂಖ್ಯೆ 506 ಆಗಿದೆ.

ಆರೋಪಿಗಳು ಕೇರಳದಿಂದ ಖೋಟಾ ನೋಟುಗಳನ್ನು ತಂದು ಬಿ.ಸಿ.ರೋಡು ಭಾಗದ ಸಣ್ಣ ಅಂಗಡಿಗಳಿಗೆ ತೆರಳಿ ವಿನಿಮಯ ಮಾಡುತ್ತಿರುವ ಸತ್ಯವನ್ನು ಪೊಲೀಸ್‌ ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದರು. ಇಲ್ಲಿನ ಸಣ್ಣ ಅಂಗಡಿ ಗಳಿಗೆ ಗ್ರಾಹಕರ ಸೋಗಿನಲ್ಲಿ ತೆರಳಿ ಕಡಿಮೆ ಬೆಲೆಯ ಸಣ್ಣಪುಟ್ಟ ವಸ್ತುಗಳನ್ನು ಖರೀದಿಸಿ 500 ರೂ. ಮುಖ ಬೆಲೆಯ ಖೋಟಾ ನೋಟುಗಳನ್ನು ನೀಡುತ್ತಿದ್ದರು.

ಬಳಿಕ ಅವರಿಂದ ಬಾಕಿ ಮೊತ್ತವನ್ನು ಪಡೆದು ಅಲ್ಲಿಂದ ಪರಾರಿಯಾಗುತ್ತಿದ್ದರು. ಹೀಗೆ ಹಲವು ಭಾಗಕ್ಕೆ ತೆರಳಿ ತಮ್ಮಲ್ಲಿರುವ ಖೋಟಾ ನೋಟುಗಳನ್ನು ಖಾಲಿ ಮಾಡಿ ಹಿಂದಿರುವ ಯೋಜನೆ ಅವರದ್ದಾಗಿತ್ತು. ಪ್ರಸ್ತುತ ಬಂಟ್ವಾಳ ನಗರ ಪೊಲೀಸರು ಅವರ ಖೋಟಾ ನೋಟು ದಂಧೆಯನ್ನು ಭೇದಿಸಿದ್ದು, ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.

ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌, ಅಡಿಷನಲ್‌ ಎಸ್ಪಿಗಳಾದ ಜಗದೀಶ್‌, ರಾಜೇಂದ್ರ ಕೆ.ವಿ., ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್‌ ಮಾರ್ಗದರ್ಶನದಲ್ಲಿ ಬಂಟ್ವಾಳ ನಗರ ಪೊಲೀಸ್‌ ಇ‌ನ್‌ಸ್ಪೆಕ್ಟರ್‌ಅನಂತಪದ್ಮನಾಭ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಖೋಟಾ ನೋಟು ದಂಧೆಯ ತಂಡವನ್ನು ಭೇದಿಸಿದ ಪೊಲೀಸ್‌ ತಂಡಕ್ಕೆ ಎಸ್ಪಿಯವರು ನಗದು ಬಹುಮಾನ ಘೋಷಿಸಿದ್ದಾರೆ.

 

ಟಾಪ್ ನ್ಯೂಸ್

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

ತನ್ನಿಂತಾನೆ ಚಲಿಸಿದ ಲಾರಿ; ತಪ್ಪಿದ ಭಾರಿ ಅನಾಹುತ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

World Tourism Day: ಕುತ್ಲೂರಿಗೆ ಅತ್ಯುತ್ತಮ ಪ್ರವಾಸಿ ಹಳ್ಳಿ ಪ್ರಶಸ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.