Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ


Team Udayavani, Jun 26, 2024, 11:44 PM IST

Bantwal: ಮೇಲ್ಪತ್ತರ ಶಾಲಾ ಬಾವಿ ಕುಸಿತ

ಪುಂಜಾಲಕಟ್ಟೆ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸುಮಾರು 60 ವರ್ಷ ಹಳೆಯ ಬಾವಿಯೊಂದು ಸಂಪೂರ್ಣ ಕುಸಿದ ಘಟನೆ ಬುಧವಾರ ಸಂಭವಿಸಿದೆ.

ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಮೇಲ್ಪತ್ತರ ಸ.ಕಿ.ಪ್ರಾ.ಶಾಲೆಯ ಮೈದಾನದಲ್ಲಿದ್ದ ಈ ಬಾವಿ ಮಧ್ಯಾಹ್ನ ಸುಮಾರು 11 ಗಂಟೆಯ ಹೊತ್ತಿಗೆ ದಿಢೀರನೆ ಕುಸಿದಿದೆ.

ಬಾವಿ ಸುಮಾರು 75 ಅಡಿ ಆಳವಿದ್ದು, ಹಿಂದೆ ಊರವರೆಲ್ಲರೂ ಈ ಬಾವಿಯನ್ನು ಆಶ್ರಯಿಸಿದ್ದರು. ಬಾವಿ ಕುಸಿದಿರುವುದರಿಂದ ಶಾಲೆಯ ಅಗತ್ಯಕ್ಕೆ ನೀರಿನ ಆತಂಕ ಎದುರಾಗಿದೆ ಎಂದು ಮುಖ್ಯ ಶಿಕ್ಷಕ ಸೀತಾರಾಮ ಬಿ.ಕೆ. ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಈ ಪ್ರದೇಶದಲ್ಲಿ ಬಿರುಗಾಳಿ ಸಹಿತ ಸಿಡಿಲು ಬಂದಿದ್ದು, ಹತ್ತಿರದ ತೋಟಕ್ಕೆ ಸಿಡಿಲು ಬಡಿದಿತ್ತು. ಇದರಿಂದ ಬಾವಿಯ ಅಡಿ ಭಾಗದ ಕಲ್ಲು ಸಡಿಲಗೊಂಡಿದ್ದು, ಕಲ್ಲುಗಳು ಕದಲಿದಂತೆ ಕಾಣುತ್ತಿತ್ತು. ಘಟನೆ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನರಿಕೊಂಬು: ಮನೆಗೆ ನುಗ್ಗಿದ ನೀರು
ಬಂಟ್ವಾಳ: ನರಿಕೊಂಬು ಗ್ರಾಮದ ಮೊಗರ್ನಾಡು ರಥಬೀದಿ ಪರಿಸರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಯ ಪರಿಣಾಮ ಗುಡ್ಡದ ನೀರು ಮನೆ ಹಾಗೂ ಇತರ ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದೆ.

ರಥಬೀದಿಯಲ್ಲಿ ಬಾಡಿಗೆ ಮನೆ ಯೊಂದರಲ್ಲಿ ವಾಸವಾಗಿದ್ದ ಶ್ರೀಕಾಂತ್‌ ಅವರ ಮನೆಗೆ ನೀರು ನುಗ್ಗಿದ್ದು, ಮನೆಯಲ್ಲಿ ಶ್ರೀಕಾಂತ್‌ ದಂಪತಿ, ಇಬ್ಬರು ಮಕ್ಕಳು ಹಾಗೂ ತಂದೆ- ತಾಯಿ ಸಹಿತ ಹಲವರಿದ್ದರು. ಅವರೆಲ್ಲರೂ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಅಲ್ಲೇ ಪಕ್ಕದ ಆಹಾರ ಉತ್ಪನ್ನ ಗೋದಾಮು ಹಾಗೂ ಹಲವು ಅಂಗಡಿಗಳಿಗೂ ನೀರು ನುಗ್ಗಿದೆ. ದಿವಾಕರ ಭಂಡಾರಿ ಅವರ ಮನೆಯ ಆವರಣಕ್ಕೂ ನೀರು ನುಗ್ಗಿದೆ.

ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸರಕಾರಿ ಶಾಲೆಯ ಹಿಂಬದಿಯ ಬರೆ ಹಾಗೂ ಆವರಣ ಗೋಡೆ ಕುಸಿದು ಹಾನಿಯಾಗಿದ್ದು, ಶಾಲಾ ಕಟ್ಟಡಕ್ಕೆ ಆತಂಕ ಎದುರಾಗಿದೆ.

ನೇತ್ರಾವತಿ: ಹೆಚ್ಚಿದ ನೀರಿನ ಹರಿವು
ಉಪ್ಪಿನಂಗಡಿ: ಬುಧವಾರದ ಭಾರೀ ಮಳೆಗೆ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯು ಮೈ ತುಂಬಿ ಹರಿಯುತ್ತಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲೂ ತೀವ್ರ ಭಾರೀ ಮಳೆ ಆಗುತ್ತಿರುವುದರಿಂದ ನದಿಯ ನೀರಿನ ಮಟ್ಟದಲ್ಲಿ ಭಾರೀ ಹೆಚ್ಚಳ ಕಂಡು ಬಂದಿದೆ. ಸಮುದ್ರ ಮಟ್ಟಕ್ಕಿಂತ 26.1 ಮೀಟರ್‌ ಎತ್ತರದಲ್ಲಿ ನದಿಯ ನೀರಿನ ಹರಿವು ದಾಖಲಾಗಿದ್ದು, ಒಂದೇ ದಿನದಲ್ಲಿ 2 ಮೀಟರ್‌ನಷ್ಟು ನೀರು ಹೆಚ್ಚಳ ಕಂಡಿದೆ.

ಟಾಪ್ ನ್ಯೂಸ್

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

Valmiki Corporation case: CM should resign on moral responsibility: Prahlada Joshi

Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-ptr-bus

Puttur: ಅನುಮತಿ ಇಲ್ಲದ ಕಡೆ ಏರಿಯಾ ಸ್ಕೀಂನಲ್ಲಿ ಬಸ್‌

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Uppinangady ಮನೆಯೊಡತಿಯ ಆತ್ಮಹತ್ಯೆ ತಡೆದ ಶ್ವಾನ!

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!

Valmiki Corporation case: CM should resign on moral responsibility: Prahlada Joshi

Valmiki Corporation case: ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

ಚಿಕ್ಕಮಗಳೂರು: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Mudigere: ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು… ನಾಲ್ವರಿಗೆ ಸಣ್ಣ ಪುಟ್ಟ ಗಾಯ

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Chikkamagaluru: ಮಹಾಮಾರಿ ಡೆಂಗ್ಯೂಗೆ ಬಾಲಕಿ ಬಲಿ, ಸರ್ಕಾರಕ್ಕೆ ಛೀಮಾರಿ ಹಾಕಿದ ಪೋಷಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.