Karnataka: ಬಾರದ ಸಚಿವರು: ಕಳೆಗುಂದಲಾರಂಭಿಸಿದೆ ಶಕ್ತಿಸೌಧ

ಸರಕಾರದ ಶತದಿನೋತ್ಸವದ ಸಂಭ್ರಮ ಮುಗಿಯುವ ಹೊತ್ತಿಗೆ ಬಣಗುಡುತ್ತಿದೆ ವಿಧಾನಸೌಧ

Team Udayavani, Sep 7, 2023, 5:35 AM IST

vidhana soudha

ಬೆಂಗಳೂರು: ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಸಾರ್ವಜನಿಕರು ಹಾಗೂ ಕಾರ್ಯಕರ್ತರಿಂದ ವಿಧಾನಸೌಧ ಗಿಜಿಗುಡುತ್ತಿತ್ತು. ಶಕ್ತಿಕೇಂದ್ರದಲ್ಲಿ ತಮ್ಮ ಸಂಕಷ್ಟಗಳಿಗೆ ಪರಿಹಾರ ಸಿಗಬಹುದೆಂಬ ಆಶಾವಾದದೊಂದಿಗೆ ಸಾವಿರಾರು ಜನರು ವಿಧಾನಸೌಧಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಶತದಿನೋತ್ಸವದ ಸಂಭ್ರಮ ಮುಗಿಯುವ ಹೊತ್ತಿಗೆ ಶಕ್ತಿಸೌಧದಲ್ಲಿ ಈಗ ಮೊದಲಿನ ಉತ್ಸಾಹ ಉಳಿದಿಲ್ಲ.

ಐದು ವರ್ಷಗಳ ಬಳಿಕ ಅಧಿಕಾರಕ್ಕೆ ಬಂದ ಸಂಭ್ರಮದಲ್ಲಿ ವಿಧಾನಸೌಧದಲ್ಲಿ ವಿಶೇಷ ಪೂಜೆ ಮಾಡಿ ಕಚೇರಿಗೆ ಆಗಮಿಸಿದ್ದ ಸಚಿವರು ಈಗ ವಿಧಾನಸೌಧಕ್ಕೆ ಆಗಮಿಸುವುದೇ ವಿರಳವಾಗಿದೆ. ಸಚಿವ ಸಂಪುಟ ಸಭೆ, ಉಪಸಮಿತಿ ಸಭೆ, ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆಯೋಜನೆಯಾದ ಸಭೆಗಳಿಗೆ ಮಾತ್ರ ಸಂಬಂಧಪಟ್ಟ ಸಚಿವರು ಮಾತ್ರ ಆಗಮಿಸುತ್ತಿದ್ದು, ಉಳಿದಂತೆ ಸಚಿವರ ಕಚೇರಿ ಈಗ ಭಣಗುಟ್ಟುತ್ತಿದೆ. ಸಚಿವರು ಪ್ರವಾಸದಲ್ಲಿದ್ದಾಗ ಅಥವಾ ಕ್ಷೇತ್ರದಲ್ಲಿ ಇದ್ದಾಗ ಆಪ್ತ ಕಾರ್ಯದರ್ಶಿಗಳು (ಪಿಎಸ್‌) ಕಚೇರಿಯ ಮೇಲ್ವಿಚಾರಣೆಯ ಜವಾಬ್ದಾರಿ ಹೊತ್ತಿರುತ್ತಾರೆ. ಆದರೆ ಎಷ್ಟೋ ಕಚೇರಿಗಳಲ್ಲಿ ಈಗ ಆಪ್ತ ಕಾರ್ಯದರ್ಶಿಗಳೂ ಸಾರ್ವಜನಿಕರಿಗೆ ಲಭ್ಯರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಅವಧಿ ಮುಕ್ತಾಯದ ಹಂತದಲ್ಲಿರುವ ಸರಕಾರ ಅಸ್ತಿತ್ವದಲ್ಲಿದೆಯೋ ಎಂಬ ಭಾವನೆ ಮೂಡುತ್ತಿದೆ.

ನವೀಕರಣ ಮುಗಿದಿಲ್ಲ
ಕೆಲವು ಸಚಿವರು ವಿಧಾನಸೌಧಕ್ಕೆ ಬರುವ ಆಸಕ್ತಿಯನ್ನು ಕಳೆದುಕೊಳ್ಳುತ್ತಿದ್ದರೆ, ಇನ್ನು ಕೆಲವರ ಕಚೇರಿ ನವೀಕರಣ ಕಾರ್ಯ ಪ್ರಗತಿಯಲ್ಲಿದೆ. ಮೂರನೇ ಮಹಡಿಯಲ್ಲಿರುವ ಮೂರು ಪ್ರಮುಖ ಸಚಿವರ ಕಚೇರಿ ಇನ್ನೂ ನವೀಕರಣವಾಗುತ್ತಲೇ ಇದೆ. ಮೂರನೇ ಮಹಡಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಡಾ| ಜಿ.ಪರಮೇಶ್ವರ, ಕೆ.ಜೆ.ಜಾರ್ಜ್‌ ಹೊರತುಪಡಿಸಿದರೆ ಉಳಿದ ಸಚಿವರ ಕಚೇರಿಗಳು ಬಹುತೇಕ ಸಂದರ್ಭದಲ್ಲಿ ಭಣಗುಡುತ್ತಿವೆ. ಸಂಪುಟ ಸಭೆಯ ದಿನ ಮಾತ್ರ ವಿಧಾನಸೌಧದಲ್ಲಿ ಕೊಂಚ ಚಟುವಟಿಕೆ ಕಾಣುತ್ತಿದೆ.

ಸಚಿವರು ವಿಧಾನಸೌಧದಲ್ಲಿ ಲಭ್ಯವಾಗದಿರುವ ಬಗ್ಗೆ ಕಾಂಗ್ರೆಸ್‌ ಶಾಸಕರಿಂದಲೂ ಬೇಸರ ವ್ಯಕ್ತವಾಗುತ್ತಿದೆ. ಶಾಸಕಾಂಗ ಸಭೆ ಸಂದರ್ಭದಲ್ಲಿ ಸೃಷ್ಟಿಯಾದ ವಿವಾದದ ಬಳಿಕವೂ ಸಚಿವರು ಕೈಗೆ ಸಿಗುತ್ತಿಲ್ಲ. ಈ ಬಗ್ಗೆ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ವರ್ಗಾವಣೆ ಸಂದರ್ಭದಲ್ಲಾದರೂ ಸಚಿವರ ಕಚೇರಿಯಲ್ಲಿ ಕಾಣುತ್ತಿದ್ದ ಚಟುವಟಿಕೆ ಈಗ ಮಾಯವಾಗಿದೆ.

ಸಚಿವರಿಂದ ತಮ್ಮ ಅಹವಾಲುಗಳಿಗೆ ಬೆಲೆ ಇಲ್ಲ ಎಂಬುದನ್ನು ಮನಗಂಡಿರುವ ಶಾಸಕರು ಈಗ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಭೇಟಿ ಮಾಡುತ್ತಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ, ಪೊಲೀಸ್‌ ಮಹಾನಿರ್ದೇಶಕರು, ಗುಪ್ತದಳದ ಐಜಿಪಿ ಜತೆಗೆ ಮುಖ್ಯಮಂತ್ರಿಗಳ ಮುಂಜಾನೆಯ ಸಭೆ ಮುಕ್ತಾಯವಾಗುವ ಹೊತ್ತಿಗೆ ಶಾಸಕರು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ತೋಡಿಕೊಳ್ಳುತ್ತಿದ್ದಾರೆ.

ಹಿಂದಿನ ಆದೇಶದ ಕತೆ ಏನಾಯಿತು ?
ಈ ಹಿಂದೆ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿದ್ದಾಗಲೂ ಸಚಿವರು ವಿಧಾನಸೌಧದಲ್ಲಿ ಲಭ್ಯರಿಲ್ಲ ಎಂಬ ಕೂಗು ಬಲವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ಭೇಟಿಗೆ ಸಚಿವರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸಮಯ ನಿಗದಿ ಮಾಡುವಂತೆ ನಿರ್ದೇಶನ ನೀಡಲಾಗಿತ್ತು. ಈಗ ಮತ್ತೆ ಹಳೆಯ ಸನ್ನಿವೇಶ ನಿರ್ಮಾಣವಾಗಿದ್ದು, ವಿಧಾನಸೌಧ ಬಿಟ್ಟು ಬೇರೆಡೆ ಕಾರ್ಯಕ್ಷೇತ್ರ ಬದಲಾಯಿಸಿಕೊಂಡಿರುವ ಸಚಿವರಿಗೆ ಖುದ್ದು ಮುಖ್ಯಮಂತ್ರಿಯೇ ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

 ರಾಘವೇಂದ್ರ ಭಟ್‌

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.