ಯಾರಿಗೆ ಬೊಮ್ಮಾಯಿ ಮಿಠಾಯಿ? ಚುನಾವಣ ವರ್ಷವಾದ್ದರಿಂದ ನಿರೀಕ್ಷೆ
ಹೆಚ್ಚು ಕಾಂಗ್ರೆಸ್ ಯೋಜನೆಗೆ ಪ್ರತಿ ಯೋಜನೆ ಸಾಧ್ಯತೆ
Team Udayavani, Feb 16, 2023, 7:10 AM IST
ಬೆಂಗಳೂರು: ಹಾಲಿ ಸರಕಾರದ ಕೊನೆಯ ಬಜೆಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಲಿದ್ದಾರೆ. ಇದು ಬೊಮ್ಮಾಯಿ ಮಂಡಿಸುವ 2ನೇ ಬಜೆಟ್ ಆಗಿದ್ದು, ಚುನಾವಣ ವರ್ಷವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಸಮುದಾಯವನ್ನೂ ಸಂತೃಪ್ತಿಪಡಿಸುವ ನಿರೀಕ್ಷೆಯಿದೆ.
ರಾಜ್ಯದ ಆದಾಯ ಉತ್ತಮವಾಗಿದೆ ಎಂದು ಪದೇಪದೆ ಹೇಳುವ ಮೂಲಕ ಸಿಎಂ “ಸರ್ವಸ್ಪರ್ಶಿ’ ಬಜೆಟ್ನ ಮುನ್ಸೂ ಚನೆ ನೀಡಿದ್ದಾರೆ. ಕಾಂಗ್ರೆಸ್ ನ ಗ್ಯಾರಂಟಿ ಸರಣಿ ಯೋಜನೆಗೂ ಬಜೆಟ್ನಲ್ಲಿ ಉತ್ತರ ನೀಡಲು ಮುಂದಾಗಿದ್ದಾರೆ.
ರೈತಾಪಿ ವರ್ಗಕ್ಕೆ ಖುಷಿ
ಒಂದು ಮೂಲದ ಪ್ರಕಾರ, ಈ ವರ್ಷ ರೈತಾಪಿ ವರ್ಗವನ್ನು ಮೆಚ್ಚಿಸಲು ಬೊಮ್ಮಾಯಿ ಲೆಕ್ಕಾಚಾರ ಹಾಕಿದ್ದಾರೆ. ಈ ಮೂಲಕ ಬಹುದೊಡ್ಡ ಮತವರ್ಗದ ಮೇಲೆ ಪ್ರಭಾವ ಬೀರಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಪ್ರಮಾಣವನ್ನು 3ರಿಂದ 5 ಲಕ್ಷ ರೂ.ಗೆ ಏರಿಸುವ ನಿರೀಕ್ಷೆ ಇದೆ. ಜತೆಗೆ ಫಲಾನುಭವಿಗಳ ಸಂಖ್ಯೆಯನ್ನು 33 ಲಕ್ಷದಿಂದ 40 ಲಕ್ಷಕ್ಕೆ ವಿಸ್ತರಿಸುವ ಬಗ್ಗೆಯೂ ಅಧಿಕಾರಿಗಳ ಜತೆಗಿನ ಸಭೆಯಲ್ಲಿ ಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸರಕಾರಿ ನೌಕರರಿಗೆ ಬಂಪರ್
ಸರಕಾರಿ ನೌಕರರಿಗೆ ಬಂಪರ್ ಹೊಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಳೆ ಪಿಂಚಣಿ ವ್ಯವಸ್ಥೆಗಾಗಿ ಆಗ್ರಹಿಸುತ್ತಿರುವ ನೌಕರ ರನ್ನು 7ನೇ ವೇತನ ಆಯೋಗ ಜಾರಿ ಮೂಲಕ ತೃಪ್ತಿಪಡಿಸಲು ಬೊಮ್ಮಾಯಿ ಪ್ರಯತ್ನಿಸುವ ಸಾಧ್ಯತೆ ಇದೆ. ಜತೆಗೆ ಈಗಾಗಲೇ ಘೋಷಣೆ ಮಾಡಿರುವ “ಗೃಹ ಲಕ್ಷಿ$¾à’ ಯೋಜನೆಗೆ ಬಜೆಟ್ನಲ್ಲಿ ಆರ್ಥಿಕ ವ್ಯವಸ್ಥೆ ಕಲ್ಪಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ನಾಳೆ ಬೆಳಗ್ಗೆ 10.15ಕ್ಕೆ ಬಜೆಟ್ ಮಂಡನೆ
ಶುಕ್ರವಾರ ಬೆಳಗ್ಗೆ 10.15ಕ್ಕೆ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ತಮಗೆ ಅನುಕೂಲ ಕಲ್ಪಿಸಬೇಕೆಂದು ಈಗಾಗಲೇ ಹಲವು ಸಮುದಾಯದವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಹೀಗಾಗಿ ಕುಲಕಸುಬು ಆಧರಿತ ವೃತ್ತಿ ನಂಬಿಕೊಂಡ ಸಮುದಾಯಕ್ಕೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಒಂದಿಷ್ಟು ಹೊಸ ನಿಗಮಗಳ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.