![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 9, 2021, 1:51 PM IST
ಚಳ್ಳಕೆರೆ: ತಾಲೂಕಿನ ತಳಕು ಠಾಣಾ ವ್ಯಾಪ್ತಿಯ ಗುಡಿಹಳ್ಳಿ, ಮೈಲನಹಳ್ಳಿ ಮತ್ತು ಸಿರಿವಾಳ ಓಬಳಾಪುರ ಗ್ರಾಮಗಳ ಸುತ್ತಮುತ್ತ ಕರಡಿಗಳ ಓಡಾಟದ ಬಗ್ಗೆ ಪತ್ರಿಕೆ ಸಾರ್ವಜನಿಕರ ಗಮನ ಸೆಳೆದಿದ್ದು, ತಳಕು ಸಬ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಗ್ರಾಮಕ್ಕೆ ಭೇಟಿ
ನೀಡಿ ಮಾಹಿತಿ ಕಲೆ ಹಾಕಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಸಹ ಕರಡಿ ಸೆರೆ ಹಿಡಿಯುವ ನಿಟ್ಟಿನಲ್ಲಿ ಕಾರ್ಯಚರಣೆ ಪ್ರಾರಂಭಿಸುವ ನಿಟ್ಟಿನಲ್ಲಿ ಗುಡಿಹಳ್ಳಿ, ಮೈಲನಹಳ್ಳಿಗೆ ತೆರಳಿ ಅಲ್ಲಿನ ಗ್ರಾಮಸ್ಥರದೊಂದಿಗೆ ಕರಡಿ ಓಡಾಟದ ಬಗ್ಗೆ ಮಾಹಿತಿ ಪಡೆದರು. ಗ್ರಾಮದ ತೋಟಗಳ
ಸಮೀಪದಲ್ಲಿ ಕರಡಿ ವಾಸವಿದ್ದು, ಸಂಜೆಯ ವೇಳೆ ನೀರು, ಆಹಾರ ಅರಸಿ ಗ್ರಾಮಗಳದತ್ತ ಕರಡಿಗಳು ಬರುವುದನ್ನು ಕಣ್ಣಾರೆ ಕಂಡಿರುವ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ವಿದ್ಯುತ್ ಬಿಲ್ ಕಟ್ಟಲು ಯಾವೆಲ್ಲಾ ಆಪ್ಲಿಕೇಶನ್ ಗಳಿವೆ ? ಇಲ್ಲಿದೆ ಮಾಹಿತಿ
ಕರಡಿಗಳನ್ನು ಬೋನ್ನಲ್ಲಿ ಸೆರೆ ಹಿಡಿಯಲು ಉಪಅರಣ್ಯಾಧಿಕಾರಿ ವಸಂತ, ರಾಜೇಶ್ ಹಾಗೂ ಸಿಬ್ಬಂದಿ ಈಗಾಗಲೇ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಕರಡಿಗಳನ್ನು ಸೆರೆ ಹಿಡಿದು ಬೋನ್ಗೆ ತಳ್ಳುವ ಮೂಲಕ ಈ ಭಾಗದ ಜನರಿಗೆ ನೆಮ್ಮದಿಮೂಡಿಸಲು ಕಾರ್ಯತಂತ್ರ ಪ್ರಾರಂಭಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.