ಥಿಯೇಟರ್‌ ತೆರೆಯುವ ಮುನ್ನ ಲೆಕ್ಕಾಚಾರ ಶುರು

ಬಿಗ್‌ ಬಜೆಟ್‌ ಸಿನಿಮಾ ನಿರ್ಮಾಪಕರ ಸಭೆ

Team Udayavani, Jun 13, 2020, 4:17 AM IST

theatre-big-badget

ಒಂದೆಡೆ ಕೋವಿಡ್‌ 19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೆ, ಮತ್ತೂಂದೆಡೆ ಸರ್ಕಾರ ನಿಧಾನವಾಗಿ ಲಾಕ್‌ ಡೌನ್‌ ಸಡಿಲಗೊಳಿಸಲು ಮುಂದಾಗುತ್ತಿದೆ. ಇನ್ನು ಎಲ್ಲ ಲಾಕ್‌ ಡೌನ್‌ ಗಳೂ ತೆರೆಯುತ್ತಿದ್ದಂತೆ, ಚಿತ್ರರಂಗದ ಚಟುವಟಿಕೆಗಳಿಗೆ ಬಿದ್ದಿದ್ದ ಬ್ರೇಕ್‌ ಕೂಡ ತೆರವಾಗುವ ಲಕ್ಷಣಗಳು ಕಂಡು ಬರುತ್ತಿದೆ. ಈಗಾಗಲೇ ಕಿರುತೆರೆಯ ಚಟುವಟಿಕೆಗಳು ಶುರುವಾಗಿರುವುದರಿಂದ, ಚಿತ್ರರಂಗದ ಚಟುವಟಿಕೆಗಳೂ ಶೀಘ್ರದಲ್ಲಿಯೇ ಶುರುವಾಗಬಹುದು ಎಂಬ ನಿರೀಕ್ಷೆ ಚಿತ್ರರಂಗದ ಮಂದಿಯಲ್ಲಿದೆ. ಅಲ್ಲದೆ ಜುಲೈ ತಿಂಗಳ ಮೊದಲ ವಾರದಲ್ಲಿ ಚಿತ್ರಮಂದಿರಗಳ ಓಪನ್ಗೆ ಮತ್ತು ಚಿತ್ರೀಕರಣಕ್ಕೆ ಅನುಮತಿ ನೀಡಬಹುದು ಎಂಬ ಮಾತೂ ಚಿತ್ರರಂಗದಲ್ಲಿ ಕೇಳಿಬರುತ್ತಿದೆ.

ಇದರ ಬೆನ್ನಲ್ಲೇ, ಸದ್ಯ ಕನ್ನಡದಲ್ಲಿ ಈಗಾಗಲೇ ರೆಡಿಯಾಗಿರುವ ದೊಡ್ಡ ದೊಡ್ಡ ಸ್ಟಾರ್‌ಗಳ ಚಿತ್ರಗಳ ಪೈಕಿ ಯಾವುದು ಮೊದಲು ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಸಿನಿಪ್ರಿಯರಲ್ಲಿ, ಚಿತ್ರರಂಗದಲ್ಲಿ ಹೆಚ್ಚಾಗಿಯೇ ಇದೆ. ಸದ್ಯ “ಸಲಗ’, “ರಾಬರ್ಟ್‌…’, “ಪೊಗರು’, “ಕೋಟಿಗೊಬ್ಬ 3′ ರಿಲೀಸ್‌ಗೆ ರೆಡಿ ಇದ್ದು, “ಯುವರತ್ನ’, “ಕೆಜಿಎಫ್ ಚಾಪ್ಟರ್‌ 2′ ಚಿತ್ರಗಳ ಕೊನೆ ಹಂತದ ಕೆಲಸಗಳು ಬಾಕಿ ಇವೆ. ಇದೇ ವೇಳೆ ಈ ಸ್ಟಾರ್‌ ನಟರ ಚಿತ್ರಗಳ ನಿರ್ಮಾಪಕರು ಇತ್ತೀಚೆಗೆ ಸಭೆ ನಡೆಸಿ ಬಿಡುಗಡೆಯ ಬಗ್ಗೆ ಒಂದಷ್ಟು ಚರ್ಚಿಸಿದ್ದಾರೆ ಎನ್ನಲಾಗಿದೆ.

ಕೋವಿಡ್‌ 19 ಲಾಕ್‌ ಡೌನ್‌ ಬಳಿಕ ಥಿಯೇಟರ್‌ ತೆರೆದಾಗ ಸಿನಿಮಾ ರಿಲೀಸ್‌ ಮಾಡುವ ರೀತಿ, ಪ್ರಚಾರ, ಪ್ರೇಕ್ಷಕರನ್ನು ಥಿಯೇರ್ಟ ಕಡೆಗೆ ಸೆಳೆಯುವ ಬಗೆ ಮೊದಲಾದ ವಿಷಯಗಳ ಬಗ್ಗೆ ನಿರ್ಮಾಪಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಚಿತ್ರರಂಗದ ಮೂಲಗಳ ಮಾಹಿತಿ ಪ್ರಕಾರ, ಸದ್ಯ ಕನ್ನಡದ ಆರು ಸ್ಟಾರ್ಸ್‌ ಗಳ ಚಿತ್ರಗಳು ಬಿಡುಗಡೆಗೆ ರೆಡಿ ಇದ್ದು ಇವನ್ನು ಒಂದರ ಹಿಂದೊಂದರಂತೆ, ಸರದಿಯಲ್ಲಿ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿದೆ.

ನಿರ್ಮಾಪಕರಾದ ಗಂಗಾಧರ್‌, ಕೆ. ಪಿ ಶ್ರೀಕಾಂತ್‌, ಜಾಕ್‌ ಮಂಜು, ಉಮಾಪತಿ ಶ್ರೀನಿವಾಸಗೌಡ, ಕಾರ್ತಿಕ್‌ ಗೌಡ, ಯೋಗಿ ಜಿ ರಾಜ್, ಜಯಣ್ಣ, ಸೂರಪ್ಪ ಬಾಬು ಮೊದಲಾದವರು ಈಗಾಗಲೇ ಎರಡು ಬಾರಿ ಸಭೆ ನಡೆಸಿ, ಸದ್ಯ ಚಿತ್ರರಂಗದ ಆಗುಹೋಗುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಚಿತ್ರರಂಗದ ಮೂಲಗಳ ಮಾಹಿತಿ ಪ್ರಕಾರ ಚಿತ್ರಮಂದಿರಗಳು ತೆರೆದ ಮೇಲೆ ಮೊದಲು ಚಿತ್ರ ಬಿಡುಗಡೆ ಮಾಡುವವರಾರು, ಒಂದು ಚಿತ್ರಕ್ಕೂ ಮತ್ತೂಂದು ಚಿತ್ರದ ರಿಲೀಸ್‌ಗೂ ಮಧ್ಯೆ ಗ್ಯಾಪ್‌ ಕೊಡುವ ಮತ್ತು ಈ ನಡುವೆ ಬೇರೆ ಬೇರೆ ಚಿತ್ರಗಳನ್ನು ಬಿಡುಗಡೆ ಮಾಡುವವರಿಗೂ ಅನುಕೂಲ ಮಾಡಿಕೊಡುವುದು ಇತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಒಟ್ಟೊಟ್ಟಿಗೆ ಸ್ಟಾರ್‌ಗಳ ಚಿತ್ರಗಳನ್ನು ಬಿಡುಗಡೆ ಮಾಡುವ ಬದಲಿಗೆ ಸಮಯ ನೊಡಿಕೊಂಡು ಮಾಡಬೇಕು. ಎಷ್ಟು ದಿನಗಳ ಗ್ಯಾಪ್‌ ಕೊಡಬೇಕು ಎಂಬೆಲ್ಲ ವಿಷಯಗಳು ಈ ಸಭೆಯಲ್ಲಿ ಚರ್ಚೆಯಾಗಿವೆ. ಇನ್ನು, ಸೆನ್ಸಾರ್‌ ಆಗಿರುವ ರಿಲೀಸ್‌ಗಗೆ ರೆಡಿ ಇರುವ ಸುಮಾರು 60ಕ್ಕೂ ಹೆಚ್ಚಿನ ಚಿತ್ರಗಳಿದ್ದು, ಅವರೇನಾದರೂ ಚಿತ್ರಮಂದಿರಗಳು ಓಪನ್‌ ಆದ ತಕ್ಷಣ ರಿಲೀಸ್‌ ಮಾಡುತ್ತೇವೆ ಅಂದರೆ ಅವರಿಗೂ ಚಿತ್ರಮಂದಿರಗಳಲ್ಲಿ ಅನುವು ಮಾಡಿಕೊಡಲಾಗವುದು ಎಂದು ಹಿರಿಯ ನಿರ್ಮಾಪಕರೊಬ್ಬರು ಹೇಳುತ್ತಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.