![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Oct 4, 2023, 10:23 PM IST
ಬೆಂಗಳೂರು: ಒಟ್ಟು 12 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸುವುದಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯ ಮುಂದೆ ಈ ವಿಚಾರ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.
ಸದ್ಯಕ್ಕೆ ಸ್ಪೀಕರ್ ಯು.ಟಿ. ಖಾದರ್, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿದೇಶ ಪ್ರವಾಸದಲ್ಲಿದ್ದು, ಅ.19ರ ನಂತರ ರಾಜ್ಯಕ್ಕೆ ಮರಳಲಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಸರ್ಕಾರದೊಂದಿಗೆ ಅಧಿವೇಶನದ ಬಗ್ಗೆ ಚರ್ಚೆಗಳು ನಡೆದಿದ್ದು, ಎಷ್ಟು ದಿನ, ಎಲ್ಲಿ ಕಲಾಪ ನಡೆಸಬೇಕೆಂಬ ಮೊದಲ ಹಂತದ ಚರ್ಚೆ ನಡೆದಿತ್ತು.
ನವೆಂಬರ್ ಕೊನೇ ವಾರದಲ್ಲಿ ಅಧಿವೇಶನ ಆರಂಭಿಸಿ, ಬೆಂಗಳೂರಿನಲ್ಲಿ 10 ದಿನ ಹಾಗೂ ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನ ಕಲಾಪ ನಡೆಸುವ ಬಗ್ಗೆ ಚಿಂತನೆ ನಡೆದಿದ್ದು, ಎರಡು ಕಡೆ ನಡೆಸಬೇಕೇ ಬೇಡವೇ ಎಂಬ ಚರ್ಚೆಗಳಿವೆ. ವರ್ಷದಲ್ಲಿ ಕನಿಷ್ಠ 60 ದಿನ ಕಲಾಪ ನಡೆಸಬೇಕೆನ್ನುವ ಆಶಯದಲ್ಲಿ ಸರ್ಕಾರವಿದೆಯಾದರೂ ಬೆಂಗಳೂರು ಹಾಗೂ ಬೆಳಗಾವಿ ಎರಡೂ ಕಡೆ 20 ದಿನ ನಡೆಸುವುದು ಕಷ್ಟ ಎಂಬುದನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಕಡೆ ಕಲಾಪ ನಡೆಸುವುದರಿಂದ ಖರ್ಚು ಹೆಚ್ಚಾಗಲಿದೆ. ಇಡೀ ವಿಧಾನಮಂಡಲ ಹಾಗೂ ಸರ್ಕಾರಿ ವ್ಯವಸ್ಥೆಯನ್ನು ಎರಡೂ ಕಡೆ ಬಳಸಿಕೊಳ್ಳುವುದು, ಸ್ಥಳಾಂತರಿಸುವುದು ಸುಲಭವಿಲ್ಲ. ಹೀಗಾಗಿ ಎಲ್ಲಾದರೂ ಒಂದು ಕಡೆ ಮಾಡುವುದು ಸೂಕ್ತ ಮತ್ತು 10-12 ದಿನಗಳಿಗೆ ಇಳಿಸಿದರೆ ಉತ್ತಮ ಎಂಬ ಸಲಹೆಗಳನ್ನು ನೀಡಿದ್ದಾರೆ.
ನವೆಂಬರ್ ಕೊನೆಯ ವಾರದಿಂದ ಡಿಸೆಂಬರ್ ಮೊದಲ ವಾರದವರೆಗೆ ಚಳಿಗಾಲದ ಅಧಿವೇಶನ ನಡೆದರೆ, ಮತ್ತೆ ಜನವರಿ ತಿಂಗಳಲ್ಲಿ ಜಂಟಿ ಅಧಿವೇಶನ, ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನ ನಡೆಸಬೇಕಾಗುತ್ತದೆ. ಆನಂತರ ಲೋಕಸಭೆ ಚುನಾವಣಾ ತಯಾರಿ ನಡೆಸಬೇಕಿದೆ. ವರ್ಷದ ಕೊನೆಯ ಕಲಾಪವು ನವೆಂಬರ್-ಡಿಸೆಂಬರ್ನಲ್ಲಿ ನಡೆಯುವುದರಿಂದ ಹೆಚ್ಚು ದಿನ ನಡೆಸಬೇಕೆಂಬ ಚಿಂತನೆ ಸರ್ಕಾರದಲ್ಲಿದೆ. ಎರಡೂ ಕಡೆ ಸದನ ನಡೆದರೆ ಅಷ್ಟು ಸುದೀರ್ಘ ದಿನಗಳು ಚರ್ಚಿಸಬಹುದಾದ ವಿಷಯಗಳ ಪಟ್ಟಿಯನ್ನೂ ನೀಡುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮತ್ತೂಮ್ಮೆ ಚರ್ಚಿಸಿ, ಎಲ್ಲಿ, ಎಷ್ಟು ದಿನ ಕಲಾಪ ನಡೆಸಬೇಕೆಂಬುದು ತೀರ್ಮಾನ ಆಗಬಹುದು. ಇಲ್ಲದಿದ್ದರೆ, ಸ್ಪೀಕರ್, ಸಭಾಪತಿ ವಿದೇಶ ಪ್ರವಾಸದಿಂದ ಮರಳಿದ ನಂತರ ಮತ್ತೂಮ್ಮೆ ಚರ್ಚಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಬಹುದು ಎಂದು ಮೂಲಗಳು ಹೇಳಿವೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.