Belthangady: ಹಕ್ಕುಚ್ಯುತಿ ಪ್ರಕರಣ- ಸದನದಲ್ಲಿ ಗದ್ದಲ

ಬೆಳ್ತಂಗಡಿ ಶಾಸಕರ ಮೇಲಿನ ಎಫ್ಐಆರ್‌ ಪ್ರಕರಣ ಹಕ್ಕುಬಾಧ್ಯತಾ ಸಮಿತಿಗೆ

Team Udayavani, Dec 5, 2023, 10:52 PM IST

sadana belthangady

ಬೆಳಗಾವಿ: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಎಫ್ಐಆರ್‌ ದಾಖಲಿಸಿಕೊಂಡು ಮುಚ್ಚಳಿಕೆ ಬರೆಯಿಸಿಕೊಂಡ ವಿಚಾರ ವಿಧಾನಸಭೆಯಲ್ಲಿ ಭಾರೀ ಗದ್ದಲ ಸೃಷ್ಟಿಸಿದ್ದು, ಬಿಜೆಪಿ ಶಾಸಕರ ಒತ್ತಡಕ್ಕೆ ಮಣಿದು ಸ್ಪೀಕರ್‌ ಯು.ಟಿ. ಖಾದರ್‌ ಪ್ರಕರಣವನ್ನು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಿದ್ದಾರೆ.

ಭೋಜನ ವಿರಾಮದ ಬಳಿಕ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಶಾಸಕರಾದ ವಿ. ಸುನಿಲ್‌ ಕುಮಾರ್‌, ಡಾ| ಭರತ್‌ ಶೆಟ್ಟಿ ವೈ., ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ವೇದವ್ಯಾಸ್‌ ಕಾಮತ್‌ ಅವರು ವಿಚಾರ ಪ್ರಸ್ತಾವಿಸಿ, ಹಕ್ಕುಚ್ಯುತಿ ವಿಚಾರ ಪ್ರಸ್ತಾವಿಸಲು ಹರೀಶ್‌ ಪೂಂಜಾ ಅವರಿಗೆ ಅವಕಾಶ ನೀಡುವಂತೆ ಪಟ್ಟು ಹಿಡಿದರು. ಆದರೆ ಗಮನ ಸೆಳೆಯುವ ಸೂಚನೆ ಸಂದರ್ಭದಲ್ಲಿ ವಿಷಯ ತೆಗೆದುಕೊಳ್ಳೋಣ ಎಂದು ಸ್ಪೀಕರ್‌ ಮನವೊಲಿಸಲು ಪ್ರಯತ್ನ ನಡೆಸಿದರು. ಇದಕ್ಕೆ ಒಪ್ಪದ ಬಿಜೆಪಿ ಶಾಸಕರು ಸದನದ ಬಾವಿಗೆ ಧಾವಿಸಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದರು.

ಅಧಿವೇಶನ ನಡೆಸಲು ಬಿಡೆವು
ಸ್ಪೀಕರ್‌ ನಿರ್ಣಯದಿಂದ ಕುಪಿತಗೊಂಡ ಸುನಿಲ್‌ ಕುಮಾರ್‌, ಡಿ.ಕೆ. ಶಿವಕುಮಾರ್‌ ಪ್ರಕರಣವನ್ನು ಸಂಪುಟ ಸಭೆಯಲ್ಲಿ ವಾಪಸ್‌ ಪಡೆದುಕೊಂಡಿದ್ದೀರಿ. ಆದರೆ ಒಬ್ಬ ಶಾಸಕನ ಮೇಲೆ ಪ್ರಕರಣ ದಾಖಲಿಸಿದರೆ ಹಕ್ಕುಚ್ಯುತಿ ಮಂಡನೆಗೂ ಅವಕಾಶ ನೀಡುತ್ತಿಲ್ಲ. ಈ ಕ್ಷಣವೇ ಚರ್ಚೆಗೆ ಅನುಮತಿ ನೀಡದೇ ಇದ್ದರೆ ಅಧಿವೇಶನ ನಡೆಸಲು ಸಾಧ್ಯವಾಗುವುದಿಲ್ಲ. ಶಾಸಕರ ರಕ್ಷಣೆಗೆ ನೀವಲ್ಲದೇ ಇನ್ಯಾರು ಬರುವುದಕ್ಕೆ ಸಾಧ್ಯ ಎಂದು ಎಚ್ಚರಿಕೆ ನೀಡಿದರು. ಈ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾವಿಸಲು ಸ್ಪೀಕರ್‌ ಹರೀಶ್‌ ಪೂಂಜಾ ಅವರಿಗೆ ಅವಕಾಶ ನೀಡಿದರು.

ಪೂಂಜಾ ವಾದವೇನು?
ಬೆಳ್ತಂಗಡಿಯ ಕಳಂಜಾ ಗ್ರಾಮದಲ್ಲಿ ದೇವಣ್ಣ ಗೌಡ ಅವರು ಹಲವು ವರ್ಷಗಳಿಂದ ವಾಸಿಸುತ್ತಿದ್ದು, 4-10-2023ರಂದು ಅವರಿದ್ದ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಹೊಸದಾಗಿ ಮನೆ ಕಟ್ಟಲು ಪಾಯ ಹಾಕುವುದಕ್ಕೆ ವಿರೋಧ ವ್ಯಕ್ತಪಡಿಸಿ ನಿರ್ಮಾಣದ ಪಾಯ ಕಿತ್ತು ಹಾಕಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ನಾನು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದೆ. ತತ್‌ಕ್ಷಣ ಅರಣ್ಯ ಸಚಿವರಿಗೆ ಕರೆ ಮಾಡಿದಾಗ ಅವರು ಜಂಟಿ ಸರ್ವೇ ಪ್ರಕ್ರಿಯೆ ನಡೆಸುವುದಾಗಿ ಭರವಸೆ ನೀಡಿದ್ದರು. ಇದಾದ ಮೂರು ದಿನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು 4 ಕೆಎಸ್‌ಆರ್‌ಪಿ ವಾಹನದೊಂದಿಗೆ ಸ್ಥಳಕ್ಕೆ ಬಂದು ಕಟ್ಟಡ ನಿರ್ಮಾಣ ತೆರವು ಮಾಡಲು ಮುಂದಾಗಿದ್ದಾರೆ. ಆಗ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರು ಅಲ್ಲಿಗೆ ತೆರಳಿ ವಿರೋಧ ವ್ಯಕ್ತಪಡಿಸಿದಾಗ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕರನ್ನು ಅಧಿಕಾರಿಗಳು ಅಕ್ಷರಶಃ ತಳ್ಳಿದ್ದಾರೆ. ಮಾತ್ರವಲ್ಲ, ನನ್ನ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡು ಮುಚ್ಚಳಿಕೆ ಬರೆಯಿಸಿಕೊಂಡು ಕಳುಹಿಸಿದ್ದಾರೆ. ಈ ಪ್ರಕರಣದಲ್ಲಿ ಅಧಿಕಾರಿಗಳು ನನ್ನ ವಿರುದ್ಧ ಅಸಭ್ಯವಾಗಿ ವರ್ತಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆ ನಿಯಮ ಪಾಲಿಸಿಲ್ಲ. ಉಡಾಫೆ ವರ್ತನೆ ಜತೆಗೆ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದೆಲ್ಲದರ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಅಮಾನತಿನಲ್ಲಿಟ್ಟು ಪ್ರಕರಣವನ್ನು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದರು.

ಅಮಾನತು ಸಾಧ್ಯವಿಲ್ಲ ಎಂದಾಗ ಗದ್ದಲ
ಕಾನೂನು-ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ. ಪಾಟೀಲ್‌ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದರು. ಮೀಸಲು ಅರಣ್ಯ ಪ್ರದೇಶದಲ್ಲಿ ಈ ರೀತಿ ಅತಿಕ್ರಮಣಕ್ಕೆ ಅವಕಾಶ ನೀಡಿದರೆ ಭವಿಷ್ಯದಲ್ಲಿ ಅರಣ್ಯ ಸಂಪೂರ್ಣ ನಾಶವಾಗುತ್ತದೆ. ದಿನನಿತ್ಯ ನಡೆಯುವ ಮಾನವ-ವನ್ಯಜೀವಿ ಸಂಘರ್ಷ ಮುಂದುವರಿಯುತ್ತದೆ. ಹೀಗಾಗಿ ಅಧಿಕಾರಿಗಳ ಅಮಾನತು ಸಾಧ್ಯವಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕರು ಮತ್ತೆ ಪ್ರತಿಭಟನೆ ನಡೆಸಿದಾಗ ಪ್ರಕರಣವನ್ನು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಲು ಸ್ಪೀಕರ್‌ ಖಾದರ್‌ ಒಪ್ಪಿಗೆ ಸೂಚಿಸಿದರು. ಪ್ರಕರಣವನ್ನು ವಾಪಸ್‌ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಖಂಡ್ರೆ ಭರವಸೆ ನೀಡಿದ ಬಳಿಕ ಬಿಜೆಪಿ ಪ್ರತಿಭಟನೆ ವಾಪಸ್‌ ಪಡೆದುಕೊಂಡಿತು.

ಜಾಲತಾಣದಲ್ಲಿ ಹಾಕಿದ್ದೇಕೆ? ಸಚಿವರ ಪ್ರಶ್ನೆ
ಸ್ಪಷ್ಟನೆ ನೀಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಲೋಲಾಕ್ಷ ದೇವಣ್ಣ ಗೌಡ ಅವರು ಮನೆ ಕಟ್ಟಲು ಹೋದ ಜಾಗ ಮೀಸಲು ಅರಣ್ಯದ ಸರ್ವೇ ನಂಬರ್‌ 309/1ರಲ್ಲಿದೆ. ಇಲ್ಲಿದ್ದ ರಬ್ಬರ್‌ ಮರ ಕಡಿದು ಅವರು ಮನೆ ಕಟ್ಟಲು ಮುಂದಾದಾಗ ಅಧಿಕಾರಿಗಳು ವಿರೋಧಿಸಿದ್ದಾರೆ. ಇದು ಅತಿಕ್ರಮಣ ನಿರ್ಮಾಣವಾಗಿದೆ. ಈ ಬಗ್ಗೆ ಶಾಸಕರು ನನಗೆ ಕರೆ ಮಾಡಿದಾಗ ಜಂಟಿ ಸರ್ವೇ ಮಾಡಿ ಕ್ರಮ ತೆಗೆದುಕೊಳ್ಳೋಣ. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳೋಣ ಎಂದು ತಿಳಿಸಿದ್ದೆ. ಆದರೆ ಶಾಸಕ ಪೂಂಜಾ ಅವರು ನಮ್ಮ ನಡುವಿನ ಮೊಬೈಲ್‌ ಸಂಭಾಷಣೆಯನ್ನು ರೆಕಾರ್ಡ್‌ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಸರಿಯಾದ ಕ್ರಮ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸುನಿಲ್‌ ಕುಮಾರ್‌ ನಿಯಮ ಪ್ರಕಾರ ಹಕ್ಕುಚ್ಯುತಿ ಮಂಡನೆ ಸಂದರ್ಭದಲ್ಲಿ ಸಚಿವರು ಉತ್ತರ ನೀಡುವುದಕ್ಕೆ ಅವಕಾಶವಿಲ್ಲ. ಸ್ಪೀಕರ್‌ ನಿರ್ಧಾರ ತೆಗೆದುಕೊಳ್ಳಬೇಕೆಂದು ಕ್ರಿಯಾಲೋಪ ಎತ್ತಿದರು. ತಿರುಗೇಟು ನೀಡಿದ ಸಚಿವ ಕೃಷ್ಣ ಬೈರೇಗೌಡ ನಿಯಮ 195ರ ಪ್ರಕಾರ ಸದನ ಪರಿಶೀಲಿಸಿದ ಅನಂತರ ಹಕ್ಕುಚ್ಯುತಿ ಸಮಿತಿಗೆ ಪರಿಶೀಲನೆಗೆ ನೀಡಬಹುದು ಎಂಬ ಪ್ರಸ್ತಾವವಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಸಚಿವರು ಉತ್ತರ ನೀಡುವುದರಲ್ಲಿ ತಪ್ಪಿಲ್ಲ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.