Belthangady:ಗಣೇಶ ಹಬ್ಬದಂದು ಪ್ರಚೋದನಾಕಾರಿ ಭಾಷಣ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದೂರು
Team Udayavani, Sep 13, 2024, 6:55 AM IST
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್ ಶೆಟ್ಟಿ ತಿಮರೊಡಿ ಅವರು ಸೆ. 8ರಂದು ಉಜಿರೆಯಲ್ಲಿ ನಡೆದ ಸಾರ್ವಜನಿಕ ಗಣೇಶ ಚತುರ್ಥಿ ಹಬ್ಬದ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ಇದು ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಸೆ. 12ರಂದು ಜೈನ ಸಮುದಾಯ ದೂರು ನೀಡಿದೆ.
ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ (55) ಅವರು ಸಾರ್ವಜನಿಕ ಸಂಸ್ಥೆಗಳ ವಿರುದ್ಧ ಅವಹೇಳನ ಮಾಡಿ ಅವಾಚ್ಯ ಮತ್ತು ಕೀಳು ಶಬ್ದಗಳನ್ನು ಬಳಸಿದ್ದಾರೆ. ಯೂಟ್ಯೂಬ್ ಚಾನೆಲ್ಗಳಲ್ಲಿ ಇದರ ವೀಡಿಯೋಗಳು ಪ್ರಸಾರಗೊಂಡಿದ್ದು, ಆದುದರಿಂದ ಅವರ ವಿರುದ್ಧ ತತ್ಕ್ಷಣ ಕ್ರಮ ಕೈಗೊಳ್ಳಬೇಕು. ಧಾರ್ಮಿಕ ಸಮಾರಂಭದಲ್ಲಿ ಜೈನ ಸಮುದಾಯಕ್ಕೆ ಬೆದರಿಕೆ ಹಾಕಿ ಟೀಕೆ ಮಾಡಿದ್ದಲ್ಲದೆ ಜಾತಿ ಮತ್ತು ಧಾರ್ಮಿಕ ಸಾಮರಸ್ಯ ಭಂಗ ಮಾಡುವ ಉದ್ದೇಶದಿಂದ ಅವಹೇಳನಕಾರಿ ಭಾಷಣ ಮಾಡಿದ್ದಾರೆ.
ಜೈನ ಮತ್ತು ಹಿಂದೂ ಧರ್ಮ/ಸಮುದಾಯಗಳ ನಡುವೆ ಹಿಂಸಾತ್ಮಕ ಘಟನೆಗಳನ್ನು ಉಂಟುಮಾಡಲು ಮತ್ತು ಜನರು ದಂಗೆ ಏಳುವಂತೆ ಆರೋಪಿತನು ಪ್ರಯತ್ನಿಸಿದ್ದು, ಈ ಮೂಲಕ ಜೈನ ವರ್ಗದ ಜನರ ಮತ್ತು ಜೈನ ಸಮುದಾಯಗಳ ಸಂಸ್ಥೆಗಳ ಮೇಲಿನ ಗೌರವವನ್ನು ಕುಗ್ಗಿಸಲು ಮತ್ತು ಅವಹೇಳನವನ್ನು ಉಂಟು ಮಾಡಲು ಪ್ರಯತ್ನಿಸಿದ್ದಾರೆ ಎಂದು ಪೆನ್ಡ್ರೈವ್ ಇತರ ದಾಖಲೆ ಸಹಿತ ಠಾಣೆಗೆ ದೂರು ನೀಡಲಾಗಿದೆ. ಆರೋಪಿ ವಿರುದ್ಧ ತ್ವರಿತವಾಗಿ ತನಿಖೆ ನಡೆಸಿ ಸಾರ್ವಜನಿಕ ಶಾಂತಿ ಮತ್ತು ನ್ಯಾಯಕ್ಕಾಗಿ ಅಗತ್ಯವಾದ ಕಾನೂನು ಕ್ರಮ ಜರುಗಿಸಿ ಎಂದು ಜೈನ ಸಮುದಾಯದಿಂದ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.