ಬಹುಪಯೋಗಿ ಕಪ್ಪು ಉಪ್ಪು 


Team Udayavani, May 28, 2020, 10:59 AM IST

ಬಹುಪಯೋಗಿ ಕಪ್ಪು ಉಪ್ಪು 

ಭಾರತೀಯ ಕುಟುಂಬಗಳು ತಮ್ಮ ಅಡುಗೆ ಮನೆಯಲ್ಲಿಯೇ ಹಲವಾರು ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಂತ್ರವನ್ನು ಹೊಂದಿದ್ದಾರೆ. ಕಪ್ಪು ಉಪ್ಪು ಅಥವಾ ಬ್ಲಾಕ್ ಸಾಲ್ಟ್‌ ಸಾಮನ್ಯವಾಗಿ ಎಲ್ಲರ ಮನೆಯಲ್ಲಿ ಕಂಡುಬರುವ ಅಡುಗೆ ಪದಾರ್ಥಗಳಲ್ಲಿ ಒಂದಾಗಿದ್ದು, ಇದು ಆಯುರ್ವೇದ ಮತ್ತು ಚಿಕಿತ್ಸಕ ಗುಣಗಳಿಗೆ ಹೆಸರುವಾಸಿಯಾಗಿದೆ. ಹೊಟ್ಟೆ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಕಾಯಿಲೆಗಳನ್ನು ಗುಣಪಡಿಸಲು ಕಪ್ಪು ಉಪ್ಪಿನ ಬಳಕೆ ಉತ್ತಮವಾಗಿದೆ. ಖನಿಜಗಳು ಮತ್ತು ಜೀವಸತ್ವಗಳ ಉತ್ತಮತೆಯೊಂದಿಗೆ ಇರುವ ಕಪ್ಪು ಉಪ್ಪಿನ ಪ್ರಯೋಜನಗಳನ್ನು ಅದರ ನಿಯಮಿತ ಬಳಕೆಯಿಂದ ಪಡೆಯಬಹುದಾಗಿದೆ. ಇದು ಕರುಳಿನ ಸಮಸ್ಯೆ ಮತ್ತು ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ ಹಾಗೂ ಹಲವಾರು ಕಾಯಿಲೆಗಳನ್ನು ಎದುರಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ: ಕಪ್ಪು ಉಪ್ಪಿನ ಕ್ಷಾರಿಯ ಗುಣಗಳು ಹೊಟ್ಟೆ ಉಬ್ಬುವುದು ಮತ್ತು ಮಲಬದ್ದತೆಯನ್ನು ತಡೆದು ಹೊಟ್ಟೆಯ ತೊಂದರೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಮತ್ತು ಆಸಿಡ್‌ ರಿಫ್ಲಕ್ಸ್‌ಗಳನ್ನು ನಿವಾರಿಸುತ್ತದೆ. ಇದರಲ್ಲಿ ಸೋಡಿಯಂ ಕ್ಲೋರೈಡ್‌ , ಸಲ್ಫೆಟ್‌, ಕಬ್ಬಿಣ ಮತ್ತು ಮ್ಯಾಂಗನೀಸ್‌ ಅಂಶ ಇರುವುದರಿಂದ ಜೀರ್ಣಕ್ರಿಯೆಯಲ್ಲಿನ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ.

ಸ್ನಾಯು ಸೆಳೆತವನ್ನು ನಿಯಂತ್ರಿಸುತ್ತದೆ: ಈ ದ್ರಾವಣದಲ್ಲಿರುವ ಅಧಿಕ ಪೊಟ್ಯಾಶಿಯಂ ನಮ್ಮ ಸ್ನಾಯುಗಳ ಕಾರ್ಯನಿರ್ವಹಣೆಗೆ ಅವಶ್ಯಕವಾಗಿದೆ. ಕಪ್ಪು ಉಪ್ಪು ಸ್ನಾಯು ಸೆಳೆತವನ್ನು ನಿಯಂತ್ರಿಸುತ್ತದೆ. ಜತೆಗೆ ಇದು ನಮ್ಮ ದೇಹದಲ್ಲಿನ ಆಹಾರದಿಂದ ಅಗತ್ಯವಾದ ಖನಿಜಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

ಮಧುಮೇಹವನ್ನು ನಿಯಂತ್ರಿಸುತ್ತದೆ: ಆಹಾರದಲ್ಲಿ ಕಪ್ಪು ಉಪ್ಪಿನ ಬಳಕೆಯಿಂದ ಮಧುಮೇಹವನ್ನು ನಿಯಂತ್ರಿಸಬಹುದಾಗಿದೆ.

ರಕ್ತ ಪರಿಚಲನೆಯನ್ನು ಸರಾಗಗೊಳಿಸುತ್ತದೆ: ಕಪ್ಪು ಉಪ್ಪಿನ ಪ್ರಯೋಜನವೆಂದರೆ ಅದು ಸರಿಯಾದ ರಕ್ತ ಪರಿಚಲನೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಕಡಿಮೆ ಸೋಡಿಯಂ ಮಟ್ಟದಿಂದಾಗಿ ಕಪ್ಪು ಉಪ್ಪು ರಕ್ತವನ್ನು ತೆಳುವಾಗಿಸಲು ಸಹಾಯ ಮಾಡುತ್ತದೆ. ಇದು ಸರಿಯಾದ ರಕ್ತ ಪರಿಚಲನೆಗೆ ಸಹಕರಿಸುವುದಲ್ಲದೆ ರಕ್ತದೊತ್ತಡದ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಜತೆಗೆ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆದು ಹಾಕುತ್ತದೆ ಮತ್ತು ಕೊಲೆಸ್ಟ್ರಾಲ್‌ ಸಮಸ್ಯೆಯೊಂದಿಗೆ ಪರಿಣಾಮಕಾರಿಯಾಗಿ ವ್ಯವಹರಿಸುತ್ತದೆ.

ಕೀಲು ನೋವಿಗೆ ಸಹಕಾರಿ: ಕಪ್ಪು ಉಪ್ಪು ಬಳಸಿ ಶಾಖ ನೀಡುವುದರಿಂದ ಕೀಲು ನೋವು ನಿವಾರಣೆಗೆ ಸಹಾಯ ಮಾಡುತ್ತದೆ.

ಎದೆಉರಿ ನಿಯಂತ್ರಿಸಲು ಸಹಕಾರಿ: ಹೊಟ್ಟೆಯಲ್ಲಿನ ಆಮ್ಲ ಉತ್ಪಾದನೆಯನ್ನು ಸಮತೋಲನಗೊಳಿಸಲು ಸಹಾಯ ಮಾಡುವುದರ ಜತೆಗೆ ಎದೆ ಉರಿಯನ್ನು ಗುಣಪಡಿಸಲು ಸಹಕರಿಸುತ್ತದೆ. ಆಮ್ಲೀಯತೆ ಮತ್ತು ಮಲಬದ್ದತೆಯನ್ನು ಗುಣಪಡಿಸಲು ಕಪ್ಪು ಉಪ್ಪು ಸಹಕಾರಿಯಾಗಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.