Bengaluru: ಅಕ್ರಮ ಸಂಬಂಧವೇ ನೇಪಾಲಿ ಮಹಿಳೆಯ ಕೊಲೆಗೆ ಕಾರಣ

ಪ್ರಿಯಕರನ ಜೊತೆಗೆ ಸಂಬಂಧ ಹೊಂದಿದ್ದ ಮಹಾಲಕ್ಷ್ಮೀ, ಇದೇ ವಿಚಾರವಾಗಿ ಕೊಲೆಗೈದಿದ್ದ ಪ್ರಿಯಕರ: ತನಿಖೆಯಲ್ಲಿ ಮಾಹಿತಿ

Team Udayavani, Sep 24, 2024, 7:25 AM IST

Murder-Represent

ಬೆಂಗಳೂರು: ಮೂರು ದಿನಗಳ ಹಿಂದೆ ವೈಯಾಲಿಕಾವಲ್‌ನಲ್ಲಿ ನಡೆದ ಮಹಾಲಕ್ಷಿ$¾à ಭೀಕರ ಹತ್ಯೆಗೆ ಅಕ್ರಮ ಸಂಬಂಧವೇ ಕಾರಣ ಎಂಬುದು ಇದುವರೆಗಿನ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪಶ್ಚಿಮ ಬಂಗಾಳ ಅಥವಾ ಒಡಿಶಾ ಮೂಲದ ಆಕೆಯ ಪ್ರಿಯಕರನೇ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂಬುದು ಗೊತ್ತಾಗಿದೆ. ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಹಾಲಕ್ಷ್ಮೀ ಕೃತ್ಯ ಎಸಗಿದ ಆರೋಪಿ ಜತೆ ಅಕ್ರಮ ಸಂಬಂಧ ಹೊಂದಿರುವುದು ಪತ್ತೆಯಾಗಿದ್ದು, ಈಕೆ ಈ ಮಧ್ಯೆ ಬೇರೊಬ್ಬ ವ್ಯಕ್ತಿ ಜತೆ ಓಡಾಡುತ್ತಿದ್ದಳು ಎಂದು ಹೇಳಲಾಗಿದೆ. ಅದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಅದು ವಿಕೋಪಕ್ಕೆ ಹೋದಾಗ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇನ್ನು ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಮಿಷನರ್‌ ಬಿ.ದಯಾನಂದ, ಕೊಲೆ ಆರೋಪಿಯ ಗುರುತು ಪತ್ತೆಯಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಕೊಲೆ ಆರೋಪಿಯು ಹೊರರಾಜ್ಯದವನು ಎಂಬುದು ಗೊತ್ತಾಗಿದೆ. ಆತ ನಗರದಲ್ಲಿ ವಾಸವಾಗಿದ್ದ. ಮಹಾಲಕ್ಷ್ಮೀಯನ್ನು ಆತನೇ ಕೊಲೆ ಮಾಡಿರುವ ಕೆಲ ಸಾಕ್ಷ್ಯಗಳು ಲಭ್ಯವಾಗಿದೆ. ಕೊಲೆ ನಂತರ ಆತ ಹೊರರಾಜ್ಯಕ್ಕೆ ಪರಾರಿಯಾಗಿದ್ದಾನೆ. ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಒಂದು ತಂಡ ಹೊರರಾಜ್ಯಕ್ಕೆ ಹೋಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುತ್ತಿದ್ದೇವೆ. ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ವರದಿ ಕೈ ಸೇರಿದ ನಂತರ ಇನ್ನಷ್ಟು ಮಾಹಿತಿಗಳು ಲಭ್ಯವಾಗಲಿದೆ ಎಂದು ಹೇಳಿದರು.

ವರದಿ ಕೇಳಿದ ಮಹಿಳಾ ಆಯೋಗ:
ಮಹಾಲಕ್ಷ್ಮೀ ಹತ್ಯೆ ಹಂತಕನನ್ನು ಶೀಘ್ರವೇ ಬಂಧಿಸುವಂತೆ ಮತ್ತು ಪ್ರಕರಣ ಸಂಬಂಧ 3 ದಿನದೊಳಗೆ ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಬೆಂಗಳೂರು ಪೊಲೀಸರಿಗೆ ಕೋರಿದೆ ಎಂದು ತಿಳಿದು ಬಂದಿದೆ. ಕಾಲಮಿತಿಯೊಳಗೆ ತನಿಖೆ ಪೂರ್ಣಗೊಳಿಸಬೇಕೆಂದು ಆಯೋಗವು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.

ಆಕ್ಸೆ„ಲ್‌ ಬ್ಲೇಡ್‌, ಮಾಂಸ ಕತ್ತರಿಸುವ ಚಾಕು ಬಳಕೆ!
ನೇಪಾಳಿ ಮೂಲದ ಮಹಿಳೆ ಮಹಾಲಕ್ಷ್ಮೀಯನ್ನು ಪ್ರಿಯಕರ ಆಕ್ಸೆ„ಲ್‌ ಬ್ಲೇಡ್‌, ಮಾಂಸ ಕತ್ತರಿಸುವ ಚೂರಿಯಿಂದ ಆಕೆಯ ದೇಹವನ್ನು 50 ತುಂಡು ಮಾಡಿದ್ದಾನೆ. ಬಳಿಕ ಸೂಟ್‌ಕೇಸ್‌ನಲ್ಲಿ ದೇಹದ ತುಂಡುಗಳನ್ನು ಕೊಂಡೊಯ್ಯಲು ಪ್ರಯತ್ನಿಸಿದ್ದಾನೆ. ಇದು ಸಾಧ್ಯವಾಗದಿದ್ದಾಗ ಫ್ರಿಡ್ಜ್ನಲ್ಲಿ ಇರಿಸಿ, ಪರಾರಿಯಾಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಎಫ್‌ಎಸ್‌ಎಲ್‌ಗೆ ಫ್ರಿಜ್‌ ರವಾನೆ
ಮಹಾಲಕ್ಷ್ಮೀಯ ಮೃತದೇಹಗಳನ್ನು ಇಟ್ಟಿರುವ ಫ್ರಿಡ್ಜ್ ಅನ್ನು ಸೋಮವಾರ ಎಫ್ಎಸ್‌ಎಲ್‌ ಅಧಿಕಾರಿಗಳು ಕೊಂಡೊಯ್ದಿದ್ದಾರೆ. ತನಿಖೆಗೆ ಪೂರಕವಾಗಿ ಎಲ್ಲಾ ರೀತಿಯ ಸ್ಯಾಂಪಲ್‌ ಮತ್ತು ಸಾಕ್ಷ್ಯಧಾರ ಸಂಗ್ರಹಿಸಿದ್ದ ತಜ್ಞರು, ಮನೆಯಲ್ಲಿ ರಕ್ತದ ಕಲೆಗಳು ಸಿಕ್ಕಿಲ್ಲ. ಕೊಲೆ ಆರೋಪಿ ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವತ್ಛ ಮಾಡಿ, ಪರಾರಿಯಾಗಿದ್ದಾನೆ. ಹೀಗಾಗಿ ಫ್ರಿಡ್ಜ್ ಕೊಂಡೊಯ್ಯಲಾಗಿದೆ.

ಎಫ್‌ಎಸ್‌ಎಲ್‌ ತಜ್ಞರು ಲುಮಿನಾಲ್‌ ಎಂಬ ರಾಸಾಯನಿಕ ಬಳಸಿ ರಕ್ತದ ಕಲೆಗಳನ್ನು ಪತ್ತೆ ಹಚ್ಚುತ್ತಾರೆ. ಆದರೆ, ಕೊಲೆ ಪ್ರಕರಣದಲ್ಲಿ ಲುಮಿನಾಲ್‌ ರಾಸಾಯನಿಕ ಬಳಸಿದರೂ ರಕ್ತದ ಕಲೆಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. ಹೀಗಾಗಿ, ಕೊಲೆ ಆರೋಪಿಯು ಯಾವುದೊ ರಾಸಾಯನಿಕ ಬಳಸಿ ಮನೆ ಸ್ವತ್ಛ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

1

Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಪತ್ತೆ ಮಾಡಲಾಗಿದೆ ಎಂದ ಗೃಹ ಸಚಿವರು

Mahalakshmi Case: ಪ್ರಮುಖ ಆರೋಪಿಯನ್ನು ಪ.ಬಂಗಾಳದಲ್ಲಿ ಗುರುತಿಸಲಾಗಿದೆ ಎಂದ ಗೃಹ ಸಚಿವರು

6

Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ

5

Tragic: ರೀಲ್ಸ್ ಮಾಡಲು ಕೆರೆಗೆ ಇಳಿದ ಯುವಕ ಸಾವು

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Bengaluru: ಡಿಜೆ ವಿಚಾರ; ಎಸಿಪಿ ಚಂದನ್‌, ಮುತಾಲಿಕ್‌ ವಾಗ್ವಾದ

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ಕಳವು

Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

ಅಂತಾರಾಷ್ಟ್ರೀಯ ಪಂಜ ಕುಸ್ತಿ:ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Aranthodu : ಸ್ಕೂಟಿ- ಕಂಟೈನರ್ ನಡುವೆ ಭೀಕರ ಅಪಘಾತ… ಸ್ಕೂಟಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.