Bengaluru ಒಳಚರಂಡಿ: 3000 ಅನಧಿಕೃತ ಸಂಪರ್ಕ ಪತ್ತೆ

ಅನಧಿಕೃತ ಒಳಚರಂಡಿ ಸಂಪರ್ಕ ಪತ್ತೆಗೆ 2,929 ಕಡೆ ಸರ್ವೆ, ತ್ಯಾಜ್ಯ ನೀರು ಹರಿಸುತ್ತಿದ್ದವರಿಂದ 24.27 ಕೋಟಿ ಶುಲ್ಕ ಸಂಗ್ರಹ

Team Udayavani, Jun 25, 2024, 1:04 PM IST

Drainage

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅನಧಿಕೃತವಾಗಿ ತ್ಯಾಜ್ಯ ನೀರನ್ನು ಒಳಚರಂಡಿಗೆ ಹರಿಸುವವರ ವಿರುದ್ಧ ಹದ್ದಿನ ಕಣ್ಣಿಟ್ಟಿರುವ ಜಲ ಮಂಡಳಿಯು, ಕಳೆದೊಂದು ತಿಂಗಳಲ್ಲಿ 24.27 ಕೋಟಿ ರೂ. ಶುಲ್ಕ ವಸೂಲಿ ಮಾಡಿದೆ. ಈ ಮೂಲಕ ಮಂಡಳಿಯ ಆದಾಯ ಹೆಚ್ಚಿಸಿಕೊಳ್ಳಲು ಮುಂದಾಗಿದೆ.

ತ್ಯಾಜ್ಯ ನೀರು ವಿಲೇವಾರಿ ಮಾಡುವುದೇ ಮಂಡಳಿಗೆ ದೊಡ್ಡ ಸವಾಲಾಗಿದೆ. ಅನಧಿಕೃತವಾಗಿ ಒಳಚರಂಡಿ ಸಂಪರ್ಕ ಹೊಂದಿರುವವರಿಂದ ಈ ಸಮಸ್ಯೆ ಇನ್ನಷ್ಟು ಉಲ್ಬಣಿಸಿದೆ. ಹೀಗಾಗಿ ಜಲಮಂಡಳಿಯು ಅನಧಿಕೃತ ಒಳಚರಂಡಿ ಸಂಪರ್ಕಗಳ ಮೂಲಕ ತ್ಯಾಜ್ಯ ನೀರು ಹರಿಸುತ್ತಿ ರುವು ದನ್ನು ಪತ್ತೆ ಹಚ್ಚಲು ನಗರದ 18,367 ಕಡೆ ಸರ್ವೆ ನಡೆಸಿದೆ. ಆ ವೇಳೆ 2,929 ಕಡೆ ಅನಧಿಕೃತ ಸಂಪರ್ಕ ಹೊಂದಿರುವುದು ಪತ್ತೆಯಾಗಿದೆ. ಇಂತಹ ಮನೆ, ಕಟ್ಟಡ ಮಾಲಿಕರಿಂದ ಇದುವರೆಗೆ ಒಟ್ಟು 24.27 ಕೋಟಿ ರೂ. ಶುಲ್ಕ ಸಂಗ್ರಹಿಸಿ, ತ್ಯಾಜ್ಯ ನೀರನ್ನು ಅಧಿಕೃತವಾಗಿ ಒಳಚರಂಡಿಗೆ ಹರಿಸಲು ಜಲಮಂಡಳಿಯು ಕ್ರಮ ಕೈಗೊಂಡಿದೆ.

 ಶುಲ್ಕದ ದುಡ್ಡಲ್ಲಿ ಮಂಡಳಿ ನಿರ್ವಹಣೆ: ಮುಂದಿನ ದಿನಗಳಲ್ಲಿ ನಗರಾದ್ಯಂತ ಇದೇ ಮಾದರಿಯಲ್ಲಿ ಸರ್ವೆ ನಡೆಸಿ ಅನಧಿಕೃತ ಒಳಚರಂಡಿ ಸಂಪರ್ಕ ಹೊಂದಿರುವವರಿಂದ ಶುಲ್ಕ ಪಡೆದು ಜಲಮಂಡಳಿಯೇ ಅಧಿಕೃತಗೊಳಿಸಲಿದೆ. ಶುಲ್ಕದಿಂದ ಬಂದ ದುಡ್ಡನ್ನು ಭಾರಿ ನಷ್ಟದಲ್ಲಿದ್ದ ಮಂಡಳಿಯ ನಿರ್ವಹಣೆಗೆ ವಿನಿಯೋಗಿಸಲು ನಿರ್ಧರಿಸಲಾಗಿದೆ. ನಗರದಲ್ಲಿ ಸಾವಿರಾರು ಅನಧಿಕೃತ ಒಳಚರಂಡಿ ಸಂಪರ್ಕ ಹೊಂದಿರುವ ಬಗ್ಗೆ ಕೆಲ ವರ್ಷಗಳ ಹಿಂದೆಯೇ ಮಂಡಳಿ ಅಧಿಕಾರಿಗಳಿಗೆ ಸುಳಿವು ಸಿಕ್ಕಿದ್ದರೂ ತಲೆಕೆಡಿಸಿಕೊಂಡಿರಲಿಲ್ಲ. ಪರಿಣಾಮ ಜಲಮಂಡಳಿಗೆ ಶುಲ್ಕ ಪಾವತಿಸದೇ ನಿಯಮ ಉಲ್ಲಂ  ಸಿ ತ್ಯಾಜ್ಯ ನೀರನ್ನು ಚರಂಡಿಗೆ ಹರಿಸುವವರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿತ್ತು. ಇದೀಗ ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ನೇತೃತ್ವದಲ್ಲಿ ಅನಧಿಕೃತ ಒಳಚರಂಡಿ ಸಂಪರ್ಕಗಳ ಮೇಲೆ ಜಲಮಂಡಳಿ ಅಧಿಕಾರಿಗಳು ನಿಗಾ ಇರಿಸಲು ಮುಂದಾಗಿದ್ದಾರೆ.

ಜಲಮಂಡಳಿ ನಿಯಮದಲ್ಲೇನಿದೆ?:

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964 ಕಲಂ 65 ಮತ್ತು 72ರನ್ವಯ ಬಿಬಿಎಂಪಿ ವ್ಯಾಪ್ತಿಯ ನಾಗರಿಕರು ತಮ್ಮ ಕಟ್ಟಡದ ಒಳಚರಂಡಿ ನೀರನ್ನು ಕಡ್ಡಾಯವಾಗಿ ಜಲಮಂಡಳಿ ಸಂಪರ್ಕ ಪಡೆದು ಮಂಡಳಿಯ ಒಳಚರಂಡಿ ಕೊಳವೆ ಮಾರ್ಗಕ್ಕೆ ಹರಿಸಬೇಕಾಗಿದೆ ಎಂದು ನಿಯಮವಿದೆ. ಬೃಹತ್‌ ಕಟ್ಟಡ ಹೊಂದಿರುವವರು ಎಸ್‌ಟಿಪಿ ಅಳವಡಿಸಿಕೊಂಡು ಸಂಸ್ಕರಿಸಿದ ನೀರನ್ನು ಅನ್ಯ ಉದ್ದೇಶಗಳಿಗೆ ಬಳಸಬೇಕು ಎಂದು ಸೂಚಿಸಲಾಗಿದೆ

ಅನಧಿಕೃತ ಸಂಪರ್ಕದಿಂದ ತೊಡಕೇನು?

ಕಾವೇರಿ ನೀರಿನ ಸಂಪರ್ಕ ಪಡೆದವರಿಂದ ಜಲಮಂಡಳಿ ಮೊದಲೇ ಶುಲ್ಕ ಸಂಗ್ರಹಿಸಿ ಒಳಚರಂಡಿ ಸಂಪರ್ಕ ವ್ಯವಸ್ಥೆ ಕಲ್ಪಿಸಿಕೊಡುತ್ತದೆ. ಆದರೆ, ಕಾವೇರಿ ನೀರಿನ ಸಂಪರ್ಕ ಹೊಂದದೇ ಇರುವವರು ಜಲಮಂಡಳಿಗೆ ಅರ್ಜಿ ಸಲ್ಲಿಸಿ ಅಧಿಕೃತ ಒಳಚರಂಡಿ ಸಂಪರ್ಕ ಪಡೆದುಕೊಳ್ಳಬೇಕು. ಇದರ ಆಧಾರದಲ್ಲಿ ಜಲಮಂಡಳಿ ಎಸ್‌ಟಿಪಿ ನಿರ್ಮಿಸಿ ತ್ಯಾಜ್ಯ ನೀರು ಸಂಸ್ಕರಿಸುತ್ತದೆ. ಅನಧಿಕೃತ ಒಳಚರಂಡಿ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ತ್ಯಾಜ್ಯ ನೀರು ಹರಿದು ಒಳಚರಂಡಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ತೊಡಕಾಗುತ್ತದೆ. ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗಿ ರಸ್ತೆಗಳಲ್ಲಿ ತ್ಯಾಜ್ಯ ನೀರು ಹರಿಯುತ್ತದೆ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೂ ಪರಿಣಾಮ ಭೀರುವ ಸಾಧ್ಯತೆಗಳಿವೆ.

ಅನಧಿಕೃತ ಒಳಚರಂಡಿ ಸಂಪರ್ಕಗಳನ್ನು ಜನ ಸ್ವಯಂ ಪ್ರೇರಿತರಾಗಿ ಸಕ್ರಮಗೊಳಿಸಿಕೊಳ್ಳಬೇಕು. ಮನೆ ಬಳಕೆ ನೀರನ್ನು ಅಕ್ರಮವಾಗಿ ಒಳಚರಂಡಿ ಕೊಳವೆ ಮಾರ್ಗಕ್ಕೆ ಅಥವಾ ಮಳೆ ನೀರು ಕಾಲುವೆಗೆ ಹರಿಸುತ್ತಿರುವುದು ಕಂಡು ಬಂದಲ್ಲಿ ಅಂತಹ ಪ್ರಕರಣ ಗಂಭೀರವಾಗಿ ಪರಿಗಣಿಸಲಾಗುವುದು. -ಡಾ.ವಿ.ರಾಮ್‌ಪ್ರಸಾತ್‌ ಮನೋಹರ್‌, ಅಧ್ಯಕ್ಷ, ಜಲಮಂಡಳಿ.

ಟಾಪ್ ನ್ಯೂಸ್

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

Bengaluru: ಟ್ರಾಫಿಕ್‌ ಜಾಮ್‌ ಪರಿಹಾರಕ್ಕೆ ಕೇಂದ್ರದ ಮೊರೆ ಹೋದ ರಾಜ್ಯ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

BBMP: ಬಿಬಿಎಂಪಿಯಲ್ಲಿ ಅಕ್ರಮದ ಕುರಿತು ವರದಿ ಕೇಳಿದ ಸಿಎಂ ಕಚೇರಿ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.