Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Team Udayavani, Apr 20, 2024, 12:44 AM IST
ಬೆಳ್ತಂಗಡಿ: ಈ ಚುನಾವಣೆ ನಮ್ಮ ಪಾಲಿಗೆ ಖಂಡಿತಾ ಸವಾಲು. ಬಹಳ ವರ್ಷಗಳಿಂದ ಜಿಲ್ಲೆ ಯಲ್ಲಿ ಕಾಂಗ್ರೆಸ್ಗೆ ಅವಕಾಶ ಸಿಕ್ಕಿಲ್ಲ. ಆದರೆ ಈ ಬಾರಿ ಕಾಂಗ್ರೆಸ್ ಅಲೆ ಇದ್ದು ಗೆಲ್ಲಲು ಉತ್ತಮ ಅವಕಾಶವಿದೆ. ಇದಕ್ಕೆ ಕಾರ್ಯಕರ್ತರ ಪ್ರಾಮಾಣಿಕ ಶ್ರದ್ಧೆ, ನಾಯಕರ ಒಗ್ಗಟ್ಟೇ ಶಕ್ತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೀಳುಮಟ್ಟದ ದ್ವೇಷದ ರಾಜಕಾರಣದಿಂದ ಬಿಜೆಪಿ ರಾಮರಾಜ್ಯದ ಬದಲು ರಾವಣ ರಾಜ್ಯವನ್ನು ಸೃಷ್ಟಿಸುತ್ತಿದೆ. ಪ್ರಧಾನಿ ಮೋದಿ ಪಕ್ಷವನ್ನು ಬೆಳೆಸದೇ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುತ್ತಿದ್ದಾರೆ. ಹತ್ತು ವರ್ಷಗಳಲ್ಲಿ ಕೇಂದ್ರ ಸರಕಾರದಿಂದ ಮಧ್ಯಮ ವರ್ಗದ ಜನರಿಗೆ ಯಾವುದೇ ಅನುಕೂಲ ದೊರಕಿಲ್ಲ ಎಂದರು.
400ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿಯವರ ಅಬ್ಬರದ ಪ್ರಚಾರದಿಂದ ಕಾಂಗ್ರೆಸ್ನ ಆತ್ಮಸ್ಥೈರ್ಯ ಕುಗ್ಗದು. ಈ ಬಾರಿ ಬಿಜೆಪಿ 200 ಸೀಟು ಗಳನ್ನೂ ಗೆಲ್ಲದು. ಪ್ರಧಾನಿ ಮೋದಿ ಕರ್ನಾಟಕದ ಸಮಸ್ಯೆಗಳ ಬಗ್ಗೆಯಾಗಲೀ, ರಾಜ್ಯಕ್ಕೆ ನೆರವು ನೀಡುವ ಬಗ್ಗೆ ಹೇಳುತ್ತಿಲ್ಲ. ಕೇವಲ ಭಾವನಾತ್ಮಕ ವಿಷ ಯಗಳಲ್ಲಿ ಭಾಷಣ ಮಾಡುತ್ತಿದ್ದಾರೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಮಾತನಾಡಿ, ಎ. 21ರಂದು ನನ್ನ ಬೂತ್ ನನ್ನ ಜವಾಬ್ದಾರಿ ಎಂಬ ಧ್ಯೇಯದೊಂದಿಗೆ ಕಾರ್ಯಕರ್ತರು ತಮ್ಮ ಬೂತ್ ಮಟ್ಟದ ಮನೆ ಮನೆ ಭೇಟಿ ಮಾಡಿ ರಾಜ್ಯ ಸರಕಾರದ ಗ್ಯಾರಂಟಿಗಳ ಬಗ್ಗೆ ಮತದಾರರಿಗೆ ವಿವರಿಸಲಿದ್ದಾರೆ ಎಂದರು.
ಪಡಿತರ ಚೀಟಿ ಸಮಸ್ಯೆಯಿಂದ ಗ್ಯಾರಂಟಿ ಯೋಜನೆ ಕೈತಪ್ಪಿದ್ದು, ಸರಿಪಡಿಸಬೇಕು. ಬಸವ ವಸತಿ, ಇಂದಿರಾ ಗಾಂಧಿ ವಸತಿ ಯೋಜನೆ ಲಭ್ಯವಾಗುವಂತೆ ಮಾಡಬೇಕು. ಆದಾಯ ಪಾವತಿದಾರ ಮನೆಮಂದಿಗೆ ಗೃಹಲಕ್ಷ್ಮಿ ಯೋಜನೆ ಸಿಗದಂತಾಗಿದ್ದು, ತಾಂತ್ರಿಕ ದೋಷ ಸರಿಪಡಿಸಬೇಕು ಎಂದು ಕಾರ್ಯಕರ್ತರು ಕೋರಿದರು.
ಬಳಿಕ ಸಚಿವರು ಲಾೖಲ ವೆಂಕಟರಮಣ ದೇವಸ್ಥಾನ, ಬೆಳ್ತಂಗಡಿ ಧರ್ಮಪ್ರಾಂತದ ಬಿಷಪ್ ರೈ| ರೆ| ಡಾ| ಲಾರೆನ್ಸ್ ಮುಕ್ಕುಯಿ, ಗುರುವಾಯನಕೆರೆಯ ಮಸೀದಿ ಸೇರಿದಂತೆ ತುಮಕೂರಿನಲ್ಲಿ ಕೊಲೆಯಾದ ಉಜಿರೆ ನಿವಾಸಿ ಮನೆಗೆ ಭೇಟಿ ನೀಡಿದರು. ಮಾಜಿ ಶಾಸಕ ಜೆ. ಆರ್.ಲೋಬೋ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್
Bantwala: ಹಿರಿಯ ವಿದ್ವಾಂಸರಾದ ಡಾ.ಪ್ರಭಾಕರ ಜೋಶಿಗೆ ಪೊಳಲಿ ಯಕ್ಷೋತ್ಸವ ಪ್ರಶಸ್ತಿ ಪ್ರದಾನ
Hunger Strike: ಸರಕಾರದ ಹಿಡಿತದಿಂದ ದೇಗುಲ ಮುಕ್ತಗೊಳಿಸಿ, ಸ್ವಾಯತ್ತ ಮಂಡಳಿ ರಚಿಸಲಿ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.