![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jan 7, 2024, 9:34 PM IST
ಮುಂಬೈ: “ಜೀವನದ ಬಗ್ಗೆ ಭರವಸೆಯನ್ನೇ ಕಳೆದುಕೊಂಡಿದ್ದೇನೆ. ನಾನು ಈ ಸ್ಥಿತಿಯಲ್ಲಿ ಬದುಕಿರುವುದಕ್ಕಿಂತ ಜೈಲಿನಲ್ಲೇ ಸಾಯುವುದು ಉತ್ತಮ’ ಎಂದು ವಿಶೇಷ ನ್ಯಾಯಾಲಯವೊಂದರ ಮುಂದೆ ಕೈಕಟ್ಟಿಕೊಂಡು, ಭಾವುಕರಾಗಿ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ನುಡಿದರು.
ಕೆನರಾ ಬ್ಯಾಂಕ್ಗೆ 538 ಕೋಟಿ ರೂ. ವಂಚಿಸಿದ ಆರೋಪ ಮೇಲೆ ಕಳೆದ ವರ್ಷ ಸೆ.1ರಂದು ಜಾರಿ ನಿರ್ದೇಶನಾಲಯ(ಇಡಿ) ಗೋಯಲ್ ಅವರನ್ನು ಬಂಧಿಸಿದ್ದು, ಸದ್ಯ ಅವರು ಮುಂಬೈನ ಆರ್ಥರ್ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಇಡಿ ವಿಶೇಷ ನ್ಯಾಯಾಲಯಕ್ಕೆ ಗೋಯೆಲ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಗಾಗಿ ಅವರನ್ನು ಶನಿವಾರ ಕೋರ್ಟ್ ಎದುರು ಹಾಜರುಪಡಿಸಲಾಗಿತ್ತು.
“ಅಂತಿಮ ಹಂತದ ಕ್ಯಾನ್ಸರ್ನಿಂದ ಪತ್ನಿ ಅನಿತಾ ಬಳಲುತ್ತಿದ್ದಾಳೆ. ನನ್ನ ಆರೋಗ್ಯ ಸ್ಥಿರವಾಗಿಲ್ಲ. ಆರೋಗ್ಯ ತಪಾಸಣೆಗಾಗಿ ನನ್ನನ್ನು ಮುಂಬೈನ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಗೆ ತೆರಳಿ, ಸರದಿಯಲ್ಲಿ ಕಾಯಲು ಕೂಡ ನನ್ನಲ್ಲಿ ಶಕ್ತಿ ಇಲ್ಲ. ತಪಾಸಣೆಗಾಗಿ ಪದೇ ಪದೆ ಆಸ್ಪತ್ರೆಗೆ ಹೋಗುವುದು ದುಸ್ತರವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವ ಬದಲು ನನ್ನನ್ನು ಜೈಲಿನÇÉೇ ಸಾಯಲು ಬಿಟ್ಟುಬಿಡಿ,’ ಎಂದು ಗೋಯೆಲ್ ಹತಾಶೆ ವ್ಯಕ್ತಪಡಿಸಿದರು. ಮುಂದಿನ ವಿಚಾರಣೆ ಜ.16ರಂದು ನಡೆಯಲಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.