Paytm: ಬೇರೆ ಪ್ಲಾಟ್ಫಾರಂ ನೋಡಿಕೊಳ್ಳಿ: ಪೇಟಿಎಂ ಗ್ರಾಹಕರಿಗೆ CAIT ಸೂಚನೆ
ಹಣಕಾಸು ವಹಿವಾಟಿಗೆ ತೊಂದರೆ ಆಗದಂತೆ ತಡೆಯಲು ಈ ಸಲಹೆ
Team Udayavani, Feb 4, 2024, 8:57 PM IST
ನವದೆಹಲಿ: ಪೇಟಿಎಂ ಬದಲು ಆದಷ್ಟು ಬೇಗೆ ಪಾವತಿ ಸೇವೆಗೆ ಬೇರೆ ಪ್ಲಾಟ್ಫಾರಂಗಳನ್ನು ನೋಡಿಕೊಳ್ಳಿ ಎಂದು ವ್ಯಾಪಾರಸ್ಥರಿಗೆ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಶನಿವಾರ ಸಲಹೆ ನೀಡಿದೆ.
ಪೇಟಿಎಂ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ ಹೇರಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸಣ್ಣ ಪುಟ್ಟ ವ್ಯಾಪಾರಿಗಳು, ಬೀದಿಬದಿ ವರ್ತಕರು, ಮಹಿಳೆಯರು ಸೇರಿದಂತೆ ದೊಡ್ಡ ಸಂಖ್ಯೆಯ ಜನರು ಪೇಟಿಎಂ ಮೂಲಕ ವಹಿವಾಟು ನಡೆಸುತ್ತಾರೆ. ಹೀಗಾಗಿ, ನಿಮ್ಮ ಹಣವನ್ನು ರಕ್ಷಿಸಿಕೊಳ್ಳಬೇಕೆಂದರೆ ಮತ್ತು ಹಣಕಾಸು ವಹಿವಾಟಿಗೆ ಯಾವುದೇ ಅಡೆತಡೆಯಾಗದಂತೆ ತಡೆಯಬೇಕೆಂದರೆ ಬಳಕೆದಾರರು ಬೇರೆ ಪಾವತಿ ಸೇವೆಗಳನ್ನು ಆಯ್ಕೆ ಮಾಡುವುದು ಒಳಿತು ಎಂದು ಒಕ್ಕೂಟ ಸಲಹೆ ನೀಡಿದೆ.
1,000 ಖಾತೆಗಳಿಗೆ 1 ಪ್ಯಾನ್ ಸಂಖ್ಯೆ!
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ನಲ್ಲಿ ಸಮರ್ಪಕ ಗುರುತಿನ ಮಾಹಿತಿಗಳಿಲ್ಲದೇ, ದೃಢೀಕರಣವನ್ನೂ ಮಾಡದೇ ಸಾವಿರಾರು ಖಾತೆಗಳನ್ನು ತೆರೆದಿರುವುದೇ ಈ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ ಹೇರಲು ಪ್ರಮುಖ ಕಾರಣ. ಕೆವೈಸಿ ಪ್ರಕ್ರಿಯೆಯನ್ನೂ ನಡೆಸದೇ ಕೋಟಿಗಟ್ಟಲೆ ವಹಿವಾಟು ನಡೆದಿರುವುದು, ಒಂದು ಸಾವಿರಕ್ಕೂ ಅಧಿಕ ಖಾತೆಗಳಿಗೆ ಒಂದೇ ಪ್ಯಾನ್ ಸಂಖ್ಯೆಯನ್ನು ಲಿಂಕ್ ಮಾಡಿರುವುದು ಬೆಳಕಿಗೆ ಬಂದಿದೆ. ಇವೆಲ್ಲವೂ ಅಕ್ರಮ ಹಣಕಾಸು ವರ್ಗಾವಣೆ ನಡೆದಿದೆಯೇ ಎಂಬ ಪ್ರಶ್ನೆ ಹುಟ್ಟುಹಾಕಿರುವ ಕಾರಣ, ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತನಿಖೆಗೆ ಇ.ಡಿ. ಎಂಟ್ರಿ?
ಪೇಟಿಎಂ ಬ್ಯಾಂಕ್ನಲ್ಲಿ ನಡೆದಿದೆಯೆನ್ನಲಾದ ಅಕ್ರಮಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಜಾರಿ ನಿರ್ದೇಶನಾಲಯದ ಗಮನಕ್ಕೆ ತಂದಿದ್ದು, ಅಕ್ರಮ ಹಣಕಾಸು ವರ್ಗಾವಣೆ ಕುರಿತ ಹೊಸ ಆರೋಪಗಳು ಕೇಳಿಬಂದರೆ ಈ ಪ್ರಕರಣದ ವಿಚಾರಣೆಯನ್ನು ಇ.ಡಿ.ಯೇ ಆರಂಭಿಸುವ ಸಾಧ್ಯತೆಯಿದೆ ಎಂದು ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.