Bidar: 16 ಬಂಗಾರದ ಪದಕ- ಚಿನ್ನದ ಬೆಳೆ ತೆಗೆದ ಕೃಷಿಕನ ಪುತ್ರ!

ರಾಘವೇಶ್‌ ಅವರ ಅಕ್ಕ ಹರ್ಷಿಕಾ ನರ್ಸ್‌ ಆಗಿದ್ದಾರೆ.

Team Udayavani, Oct 17, 2023, 5:34 PM IST

Bidar: 16 ಬಂಗಾರದ ಪದಕ- ಚಿನ್ನದ ಬೆಳೆ ತೆಗೆದ ಕೃಷಿಕನ ಪುತ್ರ!

ಬೀದರ: ಅಪ್ಪಟ ಗ್ರಾಮೀಣ ಪ್ರತಿಭೆ, ಕೃಷಿಕನ ಮಗ ಈ ಬಾರಿಯ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿವಿ ಘಟಿಕೋತ್ಸವದಲ್ಲಿ ಗರಿಷ್ಠ ಚಿನ್ನದ ಪದಕ ಬಾಚಿಕೊಳ್ಳುವ ಮೂಲಕ ಎಲ್ಲರೂ ಹುಬ್ಬೇರಿಸುವಂತಹ ಸಾಧನೆ ಮಾಡಿದ್ದಾರೆ. ಭವಿಷ್ಯದಲ್ಲಿ ಸಂಶೋಧನಾ ಕ್ಷೇತ್ರದಲ್ಲಿ ಸಾಧನೆ ಮಾಡಿ ರೈತರಿಗೆ ನೆರವಾಗುವ ಆಶಯ ಹೊಂದಿದ್ದಾರೆ.

ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ರಾಘವೇಶ್‌ ಎ.ಎನ್‌ ತಮ್ಮ ಸಾಧನೆಯ ಹೊಂಬೆಳಕಿನಲ್ಲಿ ಚಿನ್ನಕ್ಕೆ ಮುತ್ತಿಟ್ಟವರು. ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅವಸರದಹಳ್ಳಿ ಗ್ರಾಮದ ರಾಘವೇಶ್‌, 2021-22ನೇ ಸಾಲಿನ ಬ್ಯಾಚುಲರ್‌ ಆಫ್‌ ವೆಟರ್ನರಿ ಸೈನ್ಸ್‌ ಆ್ಯಂಡ್‌ ಆ್ಯನಿಮಲ್‌ ಹಸ್ಬೆಂ ಡರಿ (ಬಿವಿಎಸ್‌ಸಿ ಮತ್ತು ಎಎಚ್‌) ಸ್ನಾತಕ ಪದವಿಯ ವಿಭಾಗದಲ್ಲಿ ಬರೋಬ್ಬರಿ 16 ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ.

ರಾಘವೇಶ್‌ ಅವರ ಅಕ್ಕ ಹರ್ಷಿಕಾ ನರ್ಸ್‌ ಆಗಿದ್ದಾರೆ. ಕೃಷಿಕರಾಗಿರುವ ತಂದೆ ನಾಗರಾಜು ಮತ್ತು ಗೃಹಿಣಿಯಾಗಿರುವ ತಾಯಿ ನಾಗಮ್ಮ ಅವರು ಮಕ್ಕಳ ಪ್ರತಿಭೆಗೆ ನೀರೆರೆದಿದ್ದಾರೆ. ಸದ್ಯ ಉತ್ತರ ಪ್ರದೇಶದ ರಾಯ್‌ ಬರೇಲಿಯ ಐವಿಆರ್‌ಐನಲ್ಲಿ ಸ್ನಾತಕೋತ್ತರ
ವೈರಾಣುಶಾಸ್ತ್ರ ಕೋರ್ಸ್‌ ಪದವಿ ಅಧ್ಯಯನ ಮಾಡುತ್ತಿದ್ದು, ಮುಂದೆ ಎಂಎಸ್‌ (ಕೃಷಿ ಸಂಶೋಧನಾ ವಿಜ್ಞಾನ) ಆಗುವ ಕನಸು ಕಟ್ಟಿಕೊಂಡಿದ್ದಾರೆ.

ಸೋಮವಾರ ನಡೆದ 13ನೇ ಘಟಿಕೋತ್ಸದಲ್ಲಿ ವಿವಿ ಕುಲಪತಿಗಳಾದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋತ್‌ ಮತ್ತು ಪಶು ಸಂಗೋಪನಾ ಸಚಿವ ವೆಂಕಟೇಶ್‌ ಅವರಿಂದ ಚಿನ್ನದ ಪದಕ ಮತ್ತು ಪದವಿ ಸ್ವೀಕರಿಸಿ ಯುವಜನತೆಗೆ‌ ಪ್ರೇರಣೆಯಾಗಿ ಗಮನ ಸೆಳೆದರು.

ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ್ದರಿಂದ ರಾಘವೇಶ್‌ ಅವರಿಗೆ ಎಂಬಿಬಿಎಸ್‌ ಮಾಡಿ, ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಬೇಕೆಂಬ ಬಯಕೆ ಇತ್ತು. ಆದರೆ, ತಂದೆಗೆ ತನ್ನ ಮಗ ಕೃಷಿ ವಿಜ್ಞಾನಿಯಾಗಿ ರೈತರಿಗೆ ಕೊಡುಗೆ ನೀಡಬೇಕೆಂಬುದು ಮತ್ತು
ವೈದ್ಯಕೀಯ ಸೀಟು ಸಿಗದೇ ಇರುವುದಕ್ಕೆ ಪಶು ವೈದ್ಯಕೀಯದತ್ತ ಮುಖ ಮಾಡಿ, ಇಂದು ಉತ್ತಮ ಫಸಲು ತೆಗೆದಿದ್ದಾರೆ.

ಆ ಮೂಲಕ ತಂದೆಯ ಆಸೆಯನ್ನು ಈಡೇರಿಸುವತ್ತ ಹೆಜ್ಜೆಯನ್ನಿಟ್ಟಿದ್ದಾರೆ. ಐವಿಆರ್‌ಐನಲ್ಲಿ ಪಿಜಿ ಕೋರ್ಸ್‌ ಮುಗಿಸಿ ಮುಂದೆ ಸಂಶೋಧನಾ ಕ್ಷೇತ್ರದಲ್ಲಿ ಹೊಸತನ ಸಾಧಿಸುವ ಕನಸು ಹೊತ್ತಿದ್ದೇನೆ. ಬಡತನದ ಮಧ್ಯೆಯೂ ಉನ್ನತ ಶಿಕ್ಷಣ ಕೊಡಿಸಿರುವ ಅಪ್ಪನಂಥ ರೈತ ವರ್ಗದವರ ಕಲ್ಯಾಣಕ್ಕೆ ಜೀವನ ಮುಡುಪಾಗಿಡುತ್ತೇನೆ. ನನ್ನೆಲ್ಲ ಆಶಯಗಳಿಗೆ ತಂದೆ-ತಾಯಿ ಬೆನ್ನಲು ಬಾಗಿ ನಿಂತಿದ್ದಾರೆ. ಗುರುಗಳು ನನ್ನ ಕಲಿಕೆಗೆ ಮಾರ್ಗದರ್ಶನ ಮಾಡಿದ್ದಾರೆ. ಇದರಿಂದ ಈ ಸಾಧನೆ ಸಾಧ್ಯವಾಯಿತು ಎನ್ನುತ್ತಾರೆ ರಾಘವೇಶ್‌.

ಸಚಿನ್‌ ಮುಡಿಗೇರಿದ ಐದು ಚಿನ್ನ

ಕೃಷಿ ಕುಟುಂಬದ ಬೆಳಗಾವಿ ಜಿಲ್ಲೆ ಕುನ್ನಾಳ ಗ್ರಾಮದ ಸಚಿನ್‌ ಹುದ್ದಾರ್‌ ಸಹ ಬಿವಿಎಸ್‌ಸಿ ಮತ್ತು ಎಎಚ್‌ ಸ್ನಾತಕ ಪದವಿಯಲ್ಲಿ 5 ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಬೀದರ ಪಶು ವೈದ್ಯಕೀಯ ಮಹಾವಿದ್ಯಾಲಯದ ಸಚಿನ್‌ ಸ್ನಾತಕೋತ್ತರ ಪದವಿಗಾಗಿ ತಯಾರಿ ನಡೆಸುತ್ತಿದ್ದಾರೆ.

ವೆಟರ್ನರಿ ಸರ್ಜರಿ ಮತ್ತು ರೆಡಿಯಾಲಜಿಯಲ್ಲಿ ಪದವಿ ಪಡೆದು ಭವಿಷ್ಯದಲ್ಲಿ ವಿಜ್ಞಾನಿಯಾಗುವುದು ಅಥವಾ ಭಾರತೀಯ ಆಡಳಿತ ಸೇವೆ ಮೂಲಕ ಜನರ ಸೇವೆ ಮಾಡುವ ಆಶಯ ಹೊಂದಿದ್ದಾರೆ. ಧಾರವಾಡದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.92 ಮತ್ತು ಪಿಯುಸಿಯಲ್ಲಿ ಶೇ.96 ಅಂಕ ಗಳಿಸಿದ್ದ ಸಚಿನ್‌ ತಮ್ಮ ಹೆತ್ತವರ ಬಯಕೆಯಂತೆ ಪಶು ವಿಜ್ಞಾನ ಶಿಕ್ಷಣ ಪಡೆದಿದ್ದಾರೆ. ಈಗ ಸ್ನಾತಕ ಪದವಿಯಲ್ಲಿ 8.319 ಅಂಕ ಪಡೆದು ಚಿನ್ನದ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಚಿನ್ನದ ಪದಕ ಬರುವ ನಿರೀಕ್ಷೆ ಇತ್ತು. ಆದರೆ, 16 ಪದಕ ಸಿಗುತ್ತವೆ ಎಂದುಕೊಂಡಿರಲಿಲ್ಲ. ನನ್ನ ಪರಿಶ್ರಮಕ್ಕೆ ಫಲ ಸಿಕ್ಕಿದ್ದು, ಬಹಳ ಖುಷಿ ತಂದಿದೆ. ಗದಗ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಓದಿಗೆ ಪೂರಕವಾದ ವಾತಾವರಣ ಇತ್ತು. ನನ್ನ ಪರಿಶ್ರಮದ ಹಿಂದೆ ಪಾಲಕರು, ಗುರುವೃಂದದ ಪಾತ್ರ ಇದೆ. ಅಂಕಗಳಿಕೆಗಾಗಿ ಎಂದೂ ಓದದೇ ಆತ್ಮತೃಪ್ತಿಗಾಗಿ ಓದಿದರೆ ಪದಕಗಳು ಹುಡುಕಿಕೊಂಡು ಬರುತ್ತವೆ ಎಂಬುದಕ್ಕೆ ನಾನೇ ಸಾಕ್ಷಿ.
ರಾಘವೇಶ್‌, ಎ.ಎನ್‌., 16 ಚಿನ್ನದ ಪದಕ ಪಡೆದ ವಿದ್ಯಾರ್ಥಿ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.