BJP: ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಬಿಜೆಪಿ ಉದ್ದೇಶ: ವಿಜಯೇಂದ್ರ


Team Udayavani, Nov 26, 2023, 9:44 PM IST

VIJAYENDRA 1

ಬೆಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡುವುದು ಬಿಜೆಪಿ ಉದ್ದೇಶವಾಗಿದೆ. ಆದರೆ ಕಾಂಗ್ರೆಸ್‌ ಉದ್ದೇಶ ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ನೀಡುವುದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಎಸ್ಸಿ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಸಂವಿಧಾನ ಸಮರ್ಪಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರೂ ಸ್ಮಾರಕಕ್ಕೆ 30 ಎಕ್ರೆ, ಇಂದಿರಾ ಗಾಂಧಿ ಸ್ಮಾರಕಕ್ಕೆ 20 ಎಕ್ರೆ ಭೂಮಿ ನೀಡಿದ ಕಾಂಗ್ರೆಸ್‌, ದೇಶಕ್ಕೆ ಸಂವಿಧಾನ ನೀಡಿದವರ ರಾಷ್ಟ್ರೀಯ ಸ್ಮಾರಕವನ್ನೇಕೆ ಮಾಡಿಲ್ಲ? ಅವರ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಹೆಸರನ್ನು ನುಡಿಮುತ್ತಾಗಿ ಬಳಸುವ ಕಾಂಗ್ರೆಸ್‌ ಪಕ್ಷ, ಅವರ ಶವಸಂಸ್ಕಾರವನ್ನೂ ಗೌರವಯುತವಾಗಿ ಮಾಡಲಿಲ್ಲ. ಆ ಪಕ್ಷಕ್ಕೆ ಬಾಬಾಸಾಹೇಬ್‌ ಅಂಬೇಡ್ಕರರ ಹೆಸರು ಹೇಳುವ ನೈತಿಕತೆಯೂ ಇಲ್ಲ ಎಂದು ಟೀಕಿಸಿದರು.

ಬಿಜೆಪಿ ಸರಕಾರವು ಪಂಚತೀರ್ಥಗಳನ್ನು ಅಭಿವೃದ್ಧಿ ಮಾಡಿದ್ದನ್ನು ನೆನಪಿಸಿದ ಅವರು, ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್‌. ಆದರೆ ನ.26ನ್ನು ಸಂವಿಧಾನ ಸಮರ್ಪಣ ದಿನ ಎಂದು ಘೋಷಿಸುವ ಮೂಲಕ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರಿಗೆ ಗೌರವ ಸೂಚಿಸಿದ್ದು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಎಂದರು.
ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಜಿ.ವಿ. ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್‌ನವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಅಂಬೇಡ್ಕರ್‌ ಬಯಸಿದಂತೆ ಅಸ್ಪೃಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಅಂಬೇಡ್ಕರ್‌ ಶಿಕ್ಷಣಕ್ಕೆ ಆದ್ಯತೆ ಕೊಡಲು ಹೇಳಿದ್ದರು. ಸಿದ್ದರಾಮಯ್ಯನವರು ಅಕ್ಕಿ ಕೊಡುತ್ತೇನೆ, ಕೋಳಿ, ಕುರಿ ಕೊಡುತ್ತೇನೆ ಎನ್ನುತ್ತಾರೆ. ದೇಶದ ಜನಸಂಖ್ಯೆಯ ಶೇ.50ರಷ್ಟಿರುವ ನಾವು ದಲಿತರು ಕೋಳಿ, ಕುರಿ, ಅಕ್ಕಿ ಬೇಡ; ಶಿಕ್ಷಣ ಕೊಡಿ ಎಂದು ಒತ್ತಾಯಿಸಬೇಕು.
ಗೋವಿಂದ ಕಾರಜೋಳ, ಮಾಜಿ ಡಿಸಿಎಂ

ಅಂಬೇಡ್ಕರರು ಬದುಕಿದ್ದಾಗಲೇ ಅವರಿಗೆ ಭಾರತರತ್ನ ಕೊಡಬಹುದಿತ್ತು. ಕಾಂಗ್ರೆಸ್‌ ಆಳ್ವಿಕೆಯಲ್ಲಿ ತಮ್ಮವರಿಗೆ ಭಾರತರತ್ನ ಕೊಟ್ಟುಕೊಂಡರೆ ಹೊರತು, ಅಂಬೇಡ್ಕರರಿಗೆ ಕೊಡಲಿಲ್ಲ. ವಾಜಪೇಯಿ ಅವರ ಪ್ರಸ್ತಾವನೆಗೆ ಅಂದಿನ ಪ್ರಧಾನಿ ವಿ.ಪಿ.ಸಿಂಗ್‌ ಅವರು ಅಂಬೇಡ್ಕರರಿಗೆ ಭಾರತರತ್ನ ಘೋಷಿಸಿದರು. ಅಂಬೇಡ್ಕರರ ಪಂಚತೀರ್ಥಗಳನ್ನು ಪಿಎಂ ಮೋದಿ ಅವರ ಸರಕಾರ ನಿರ್ಮಿಸಿದೆ. ಕುರಿ, ಕೋಳಿ ಆಸೆಗೆ ಮೈಮರೆತರೆ ಅದು ರಾಷ್ಟ್ರವಿನಾಶಕ್ಕೆ ದಾರಿ. ಸಂವಿಧಾನ ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ.
ಸಿ.ಟಿ. ರವಿ, ಮಾಜಿ ಸಚಿವ

ಅಂಬೇಡ್ಕರರ ತಪಸ್ಸಿನ ಫ‌ಲವಾಗಿ ಸಂವಿಧಾನ ಸಿಕ್ಕಿದೆ. ಸಂವಿಧಾನದ ಅರಿವು ಈಗ ಹೆಚ್ಚಾಗಿದೆ. ಸಂವಿಧಾನದ ಆಶಯವನ್ನು ನಾವು ಅಳವಡಿಸಿಕೊಳ್ಳಬೇಕು. ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದು ನಮ್ಮ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕಿ. ಮೋದಿ ಸರಕಾರದಿಂದ ಮನೆಮನೆಗೆ ಸೌಕರ್ಯಗಳು ಲಭಿಸಿವೆ. ಮನೆಗಳು, ಶೌಚಾಲಯಗಳು, ಗ್ಯಾಸ್‌, ರಸ್ತೆ, ರೈಲ್ವೆ ಸಹಿತ ಅನೇಕ ಮೂಲಸೌಕರ್ಯಗಳನ್ನು ನೀಡಲಾಗಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸ್ಪೀಕರ್‌

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.