BJP ಅನಂತ್‌ಕುಮಾರ್‌ ಹೆಗಡೆಗೆ ಟಿಕೆಟ್‌ ಸಿಕ್ಕೀತೋ? ಇಲ್ಲವೋ?

ಹೆಗಡೆ ವಿರುದ್ಧ ವರಿಷ್ಠರಿಗೆ ಸಾಲುಸಾಲು ದೂರು; 5 ಸಮೀಕ್ಷೆಯಲ್ಲೂ ಹೆಗಡೆ ಪರ ಒಲವು

Team Udayavani, Mar 16, 2024, 7:00 AM IST

BJP ಅನಂತ್‌ಕುಮಾರ್‌ ಹೆಗಡೆಗೆ ಟಿಕೆಟ್‌ ಸಿಕ್ಕೀತೋ? ಇಲ್ಲವೋ?

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಉತ್ತರ ಕನ್ನಡದತ್ತ ಈಗ ಎಲ್ಲರ ದೃಷ್ಟಿ ನೆಟ್ಟಿದ್ದು, ಹಾಲಿ ಸಂಸದ ಅನಂತಕುಮಾರ್‌ ಹೆಗಡೆಯವರಿಗೆ ಈ ಬಾರಿ ಟಿಕೆಟ್‌ ಸಿಗುತ್ತದೋ, ಇಲ್ಲವೋ ಎಂಬ ಕುತೂಹಲ ಹೆಚ್ಚಾಗಿದೆ.

ಒಟ್ಟು ಏಳು ಬಾರಿ ಲೋಕಸಭೆಗೆ ಸ್ಪರ್ಧಿಸಿದ ಹೆಗಡೆಯನ್ನು ಒಮ್ಮೆ ಮಾತ್ರ ಕಾಂಗ್ರೆಸ್‌ನ ಮಾರ್ಗರೆಟ್‌ ಆಳ್ವ ಸೋಲಿಸಿದ್ದರು. ಉಳಿದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸುವುದಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಸಾಧ್ಯವಾಗಿಲ್ಲ. ಆದಾಗಿಯೂ ಕಳೆದ ಮೂರು ಚುನಾವಣೆಗಳಲ್ಲೂ ಅನಂತಕುಮಾರ್‌ಗೆ ಟಿಕೆಟ್‌ ಇಲ್ಲ ಎಂಬ ವದಂತಿಯ ಮಧ್ಯೆಯೇ ಅವರಿಗೇ ಟಿಕೆಟ್‌ ನೀಡಲಾಗಿತ್ತು. ಈಗಲೂ ಪರಿಸ್ಥಿತಿ ಅದಕ್ಕಿಂತ ಭಿನ್ನವಾಗಿಲ್ಲ.

ಆದರೆ ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಯಡಿಯೂರಪ್ಪ ಹೊರತುಪಡಿಸಿ ಬೇರೆ ಯಾವ ಪ್ರಮುಖರೂ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ಅನಂತ್‌ ಪರ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎನ್ನಲಾಗಿದೆ. ಪ್ರಧಾನಿ ಮೋದಿ ಉತ್ತರ ಕನ್ನಡಕ್ಕೆ ಬಂದಾಗ ಹೆಗಡೆ ವೇದಿಕೆಗೆ ಬಾರದೇ ಶಿಷ್ಟಾಚಾರ ಉಲ್ಲಂ ಸಿದರು ಸಹಿತ ಹಲವು ದೂರುಗಳನ್ನು ಅವರ ವಿರುದ್ಧ ನೀಡಲಾಗಿತ್ತು ಎನ್ನಲಾಗಿದೆ.

ಮೊದಲ ಪಟ್ಟಿಯಲ್ಲಿ ಉತ್ತರ ಕನ್ನಡಕ್ಕೆ ಬದಲಿ ಅಭ್ಯರ್ಥಿಯನ್ನು ನೀಡದೇ ಇರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಎರಡು ತಿಂಗಳಿಂದ ಮತ್ತೆ ಅಖಾಡಕ್ಕೆ ಇಳಿದಿರುವ ಹೆಗಡೆ, ಈ ಕುರಿತು ತಮ್ಮ ಆಕ್ಷೇಪವನ್ನು ವರಿಷ್ಠರಿಗೆ ರವಾನಿಸಿದ್ದಾರೆ.

ಕರೆಯೇ ಬಂದಿಲ್ಲ
ಈ ಮಧ್ಯೆ ದಿಲ್ಲಿಗೆ ಬಂದು ವರಿಷ್ಠರನ್ನು ಭೇಟಿಯಾಗುವಂತೆ ಅನಂತ್‌ಕುಮಾರ್‌ ಹೆಗಡೆಗೆ ಸೂಚನೆ ನೀಡಲಾಗಿತ್ತು ಎಂಬ ವದಂತಿ ಕಳೆದ ಎರಡು ದಿನಗಳಿಂದ ಗಾಢವಾಗಿ ಹಬ್ಬಿತ್ತು. ಆದರೆ ಅವರು ಶಿರಸಿಯಲ್ಲೇ ಉಳಿದುಕೊಂಡಿದ್ದು, ಸಂಘಟನಾತ್ಮಕ ಚಟುವಟಿಕೆ ನಡೆಸಿದ್ದಾರೆ. ದಿಲ್ಲಿಗೆ ಬರುವಂತೆ ಯಾವ ಸೂಚನೆಯೂ ಬಂದಿರಲಿಲ್ಲ ಎಂದು ಅವರ ಆಪ್ತವರ್ಗ ತಿಳಿಸಿದೆ. ಈ ನಡುವೆ ರಾಜ್ಯ ಚುನಾವಣ ಉಸ್ತುವಾರಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌ ಅವರು ಹೆಗಡೆಯವರನ್ನು ಸಂಪರ್ಕಿಸಿ ಅರ್ಧ ಗಂಟೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಮಾತುಕತೆ ವಿವರ ಲಭ್ಯವಿಲ್ಲ.

ಬದಲಿ ಯಾರು ?
ಈ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಹೈಕಮಾಂಡ್‌ ಐದು ಸಮೀಕ್ಷೆ ನಡೆಸಿದ್ದು, ಎಲ್ಲದರಲ್ಲೂ ಗೆಲ್ಲುವ ಕುದುರೆ ಹೆಗಡೆ ಎಂಬ ವರದಿ ಲಭಿಸಿದೆ. ಅಭ್ಯರ್ಥಿಯನ್ನು ಬದಲಿಸಿದರೆ ಕ್ಷೇತ್ರ ಕೈ ತಪ್ಪುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ನೀವು ಸೂಚಿಸಿದ ಅಭ್ಯರ್ಥಿ ನಿಲ್ಲಿಸೋಣ ಎಂಬ ಪ್ರಸ್ತಾವವನ್ನು ಹೆಗಡೆ ಮುಂದಿಡಲಾಗಿದೆ ಎಂದೂ ಹೇಳಲಾಗುತ್ತಿದೆ. ಒಂದೊಮ್ಮೆ ಅನಂತ್‌ಗೆ ಟಿಕೆಟ್‌ ಸಿಗದಿದ್ದರೆ ಶಶಿಭೂಷಣ್‌ ಹೆಗಡೆ ಪರ ಅನಂತಕುಮಾರ್‌ ಹೆಗಡೆ ನಿಲ್ಲಬಹುದು ಎನ್ನಲಾಗುತ್ತಿದೆ.ಇವೆಲ್ಲದರ ಮಧ್ಯೆ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆಯವರ ಹೆಸರು ಪ್ರಮುಖವಾಗಿ ಕೇಳಿ ಬಂದಿದೆ. ಆದರೆ ರಾಜ್ಯಮಟ್ಟದ ಪ್ರಮುಖರೊಬ್ಬರು ಈ ಹೆಸರಿಗೆ ಅಡ್ಡಗಾಲು ಹಾಕಿದ್ದಾರೆಂಬ ಮಾತು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

– ರಾಘವೇಂದ್ರ ಭಟ್‌

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.