ಫೆ.9 ರಿಂದ ಮೂರು ದಿನ BJP ಗ್ರಾಮ ಚಲೋ ಅಭಿಯಾನ

ಬಿಜೆಪಿಯಿಂದ ಬೃಹತ್‌ ಸಂಘಟನಾತ್ಮಕ ಕಾರ್ಯತಂತ್ರ; ಮನೆ-ಮನೆಗೆ ಬಿಜೆಪಿ, ಮನ-ಮನಕ್ಕೆ ಮೋದಿ ಘೋಷವಾಕ್ಯ

Team Udayavani, Jan 25, 2024, 9:47 PM IST

BJP FLAG 1

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆ.9ರಿಂದ ಮೂರು ದಿನ ರಾಜ್ಯಾದ್ಯಂತ ಮೊದಲ ಹಂತದ ಗ್ರಾಮ ಚಲೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 40 ಸಾವಿರ ಕಾರ್ಯಕರ್ತರನ್ನು ಇದಕ್ಕಾಗಿ ನಿಯೋಜಿಸಲಾಗುತ್ತಿದೆ ಎಂದು ಅಭಿಯಾನದ ಸಂಚಾಲಕರೂ ಆಗಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ ಕುಮಾರ್‌ ತಿಳಿಸಿದರು.
ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಬೂತ್‌ಗಳಲ್ಲಿ ಗಳಿಸಿದ್ದ ಮತಗಳಿಗಿಂತ ಈ ಬಾರಿ ಶೇ.10ರಷ್ಟು ಮತವನ್ನು ಹೆಚ್ಚಿಸಿಕೊಳ್ಳುವ ಗುರಿ ಹೊಂದಿದ್ದು, ಅಭಿಯಾನದಲ್ಲಿ ತೊಡಗಿಕೊಳ್ಳುವ ಪ್ರತಿ ಕಾರ್ಯಕರ್ತರಿಗೂ ಸೂಕ್ತ ತರಬೇತಿ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಜನಪರ ಕಾರ್ಯಕ್ರಮ ತಿಳಿಸುತ್ತೇವೆ. ರಾಜ್ಯ ಸರಕಾರದ ವೈಫಲ್ಯಗಳ ಬಗ್ಗೆಯೂ ಅರಿವು ಮೂಡಿಸುತ್ತೇವೆ. ಶುಕ್ರವಾರದಿಂದಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ತಯಾರಿ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಇದೊಂದು ಬೃಹತ್‌ ಸಂಘಟನಾತ್ಮಕ ಕಾರ್ಯತಂತ್ರವಾಗಿದ್ದು, ತಳಮಟ್ಟದಲ್ಲಿ ಪ್ರತಿಯೊಬ್ಬರನ್ನೂ ಈ ಅಭಿಯಾನದ ಮೂಲಕ ತಲುಪಲಾಗುತ್ತದೆ ಎಂದು ವಿವರಿಸಿದರು.

ಬೂತ್‌ ಸಶಕ್ತೀಕರಣ, ಕಾರ್ಯಕರ್ತರಿಗೆ ಬಲ
ರಾಜ್ಯದ 28 ಸಾವಿರ ಕಂದಾಯ ಗ್ರಾಮಗಳು ಹಾಗೂ 19 ಸಾವಿರ ನಗರ ಬೂತ್‌ಗಳನ್ನು ಅಭಿಯಾನದ ಮೂಲಕ ತಲುಪುತ್ತೇವೆ. ನಿಯೋಜಿತ 40 ಸಾವಿರ ಕಾರ್ಯಕರ್ತರು ಆಯಾ ಗ್ರಾಮಗಳಿಗೆ ಎಪ್ರಿಲ್‌ವರೆಗೆ 6 ಬಾರಿ ಭೇಟಿ ನೀಡಿ ಲೋಕಸಭಾ ಚುನಾವಣೆಯ ಸಿದ್ಧತಾ ಸಭೆಗಳನ್ನು ಮಾಡಬೇಕಾಗುತ್ತದೆ. ತಾಲೂಕು ಮಟ್ಟದಲ್ಲಿ 350 ಕಾರ್ಯಾಗಾರ ನಡೆಯಲಿದ್ದು, ನಿಯುಕ್ತಿಗೊಂಡಿರುವ ಕಾರ್ಯಕರ್ತರು ತಮ್ಮ ಗ್ರಾಮಗಳನ್ನು ಬಿಟ್ಟು ಇತರ ಗ್ರಾಮಗಳಿಗೆ ತೆರಳಿ ಕೇಂದ್ರ ಸರಕಾರದ ಪ್ರಮುಖ ಯೋಜನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಮನೆ-ಮನೆಗೆ ಮೋದಿ ಸರಕಾರದ ಸಾಧನೆಯ ಪ್ರಚಾರ, ಮೋದಿ ಗ್ಯಾರಂಟಿಯ ಫ‌ಲಾನುಭವಿಗಳನ್ನು ತಲುಪುವ ಅಭಿಯಾನ, ಬೂತ್‌ ಸಶಕ್ತೀಕರಣದ ಜತೆಗೆ ಕಾರ್ಯಕರ್ತರಿಗೆ ಬಲ ತುಂಬುವ ಕಾರ್ಯ ಆಗಲಿದೆ. ಅಲ್ಲದೆ, ರಾಜ್ಯ ಕಾಂಗ್ರೆಸ್‌ ಸರಕಾರದ ದುರಾಡಳಿತದ ವಿರುದ್ಧವೂ ಅರಿವು ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.