NEP: ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರುದ್ಧ ಆ. 22ಕ್ಕೆ ಬಿಜೆಪಿ ಸಭೆ


Team Udayavani, Aug 18, 2023, 10:14 PM IST

BJP FLAG 1

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ರದ್ದುಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಸೈದ್ಧಾಂತಿಕವಾಗಿ ವಿರೋಧಿಸಲು ನಿರ್ಧರಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಇದೇ 22ರಂದು ಮಹತ್ವದ ಸಭೆ ಆಯೋಜಿಸಲಾಗಿದೆ.

ವಿಶ್ರಾಂತ ಕುಲಪತಿಗಳು, ಶಿಕ್ಷಣ ತಜ್ಞರು, ಸಿಂಡಿಕೇಟ್‌ನ ಮಾಜಿ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಸುರೇಶ್‌ ಕುಮಾರ್‌, ಅಶ್ವತ್ಥನಾರಾಯಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಎನ್‌.ಮಹೇಶ್‌, ಬಿ.ಸಿ.ನಾಗೇಶ್‌, ಶಿಕ್ಷಕ-ಪದವಿಧರ ಕ್ಷೇತ್ರದ ಹಾಲಿ ಹಾಗೂ ಮಾಜಿ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಶುಕ್ರವಾರ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ-2020’ರ ಕುರಿತು ಯಾವುದೇ ಚರ್ಚೆ ನಡೆಸದೆ, ಲೋಪ ದೋಷಗಳು ಏನಿದೆ ಎಂಬುದನ್ನು ಸಾರ್ವಜನಿಕವಾಗಿ ತಿಳಿಸದೆಯೇ ಮುಂದಿನ ವರ್ಷದಿಂದ ರದ್ದುಗೊಳಿಸುವುದಾಗಿ ಹೇಳಿರುವುದು ರಾಜ್ಯ ಸರ್ಕಾರದ ಬೇಜವಾಬ್ದಾರಿ ನಡೆ ಎಂದು ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಇಪಿ-2020 ರೂಪಿಸಲು ಸುಮಾರು ಒಂದು ದಶಕದ ಕಾಲ ಅನೇಕ ವಿಜ್ಞಾನಿಗಳು, ಶಿಕ್ಷಣ ತಜ್ಞರು, ಮಕ್ಕಳ ತಜ್ಞರು, ಶೈಕ್ಷಣಿಕ ತರಬೇತುದಾರರು ಶ್ರಮಿಸಿದ್ದಾರೆ. ಸಮಾಜದ ಪ್ರತಿಯೊಂದು ವಲಯದಿಂದ ಸುಮಾರು 2 ಲಕ್ಷ ಅಭಿಪ್ರಾಯಗಳನ್ನು ಸಂಗ್ರಹಿಸಿ ಪರಿಗಣಿಸಲಾಗಿದೆ. ಕರ್ನಾಟಕದಿಂದಲೂ ಅನೇಕ ಶಿಕ್ಷಣ ತಜ್ಞರು, ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು, ಸಂಘ-ಸಂಸ್ಥೆಗಳು ಕೊಡುಗೆ ನೀಡಿವೆ. ದಿಲ್ಲಿಯಿಂದ ಗ್ರಾಮದ ವರೆಗೆ ಪ್ರತಿಯೊಂದು ಹಂತದಲ್ಲಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದರು.

ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು, ಉಳ್ಳವರ ಮಕ್ಕಳು ಸಿಬಿಎಸ್‌ಇ ಶಾಲೆಗಳಲ್ಲಿ ಕಲಿಯುತ್ತಿದ್ಧಾರೆ. ಇಂಥ ಶಾಲೆಗಳು ರಾಜಕಾರಣಿಗಳು, ಉದ್ಯಮಿಗಳ ನೇರ ಮಾಲೀಕತ್ವ ಅಥವಾ ಪರೋಕ್ಷವಾಗಿ ನಿಯಂತ್ರಣದಲ್ಲಿವೆ. ಸಿಬಿಎಸ್‌ ಇಯಲ್ಲಿ ಕಳೆದ 2 ವರ್ಷಗಳಿಂದ ಎನ್‌ಇಪಿ-2020 ಅನುಷ್ಠಾನಗೊಂಡಿದೆ. ನೂತನ ಪಠ್ಯಕ್ರಮವನ್ನು ಈ ಶಾಲೆಗಳು ಪಾಲಿಸುತ್ತಿವೆ. ರಾಜಕಾರಣಿಗಳು ತಮ್ಮ ಒಡೆತನದ ಶಾಲೆಗಳಲ್ಲಿ ಎನ್‌ಇಪಿ-2020 ಅನುಷ್ಠಾನಗೊಳಿಸಿದ್ಧಾರೆ. ಆದರೆ, ಸರ್ಕಾರಿ ಶಾಲೆಗಳು ಹಾಗೂ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಮಾತ್ರ ರಾಜ್ಯ ಶಿಕ್ಷಣ ನೀತಿ’ ಅನುಷ್ಠಾನ ಮಾಡುವುದಾಗಿ ಹೇಳಿರುವುದನ್ನು ನೋಡಿದರೆ, ಈ ಸರ್ಕಾರಕ್ಕೆ ಬಡ ಮಕ್ಕಳು ಉತ್ತಮ ಶಿಕ್ಷಣ ಪಡೆಯಬಾರದು ಎಂಬ ದುರುದ್ದೇಶ ಸ್ಪಷ್ಟವಾಗಿ ಕಾಣಿಸುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.