![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 20, 2020, 10:05 PM IST
ಮುಂಬಯಿ: ಕೋವಿಡ್ ವೈರಸ್ನಿಂದ ಲಾಕ್ಡೌನ್ ಆಗಿದ್ದರೂ ಸ್ವಚ್ಛತಾ ಕಾರ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲಸಕ್ಕೆ ಬಾಲಿವುಡ್ನ ಮೇರು ನಟ ಅಮಿತಾಬ್ ಬಚ್ಚನ್ ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರತಿ ಭಾನುವಾರವೂ ಅಭಿಮಾನಿಗಳು ಜಲ್ಸಾದ ನಿವಾಸಕ್ಕೆ ಭೇಟಿ ಕೊಟ್ಟು ಅಮಿತಾಬ್ ಬಚ್ಚನ್ ಅವರಿಗೆ ಶುಭಾಶಯ ಕೋರುತ್ತಿದ್ದರು. ಕಳೆದ ಹಲವು ವರ್ಷಗಳಿಂದ ಇದು ನಡೆದುಕೊಂಡೇ ಬಂದಿತ್ತು.
ಆದರೆ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಅಭಿಮಾನಿಗಳ ಭೇಟಿಯನ್ನು ನಿಲ್ಲಿಸಲಾಗಿದೆ, ಹೀಗಿದ್ದರೂ ಸ್ವಚ್ಛತಾ ಕಾರ್ಯಕರ್ತರು ಮಾತ್ರ ಅವರ ಬಂಗಲೆ ಮುಂದೆ ತಮ್ಮ ನಿತ್ಯ ಕೆಲಸ ಮಾಡುತ್ತಿದ್ದಾರೆ.
ಈ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಅಮಿತಾಬ್ ಬಚ್ಚನ್, ‘ಯಾರೋ ಹೇಳುತ್ತಿದ್ದರು ಜಲ್ಸಾ ಗೇಟಿನ ಮುಂದೆ ರವಿವಾರದ ಅಭಿಮಾನಿಗಳ ಭೇಟಿ ಬಂದ್ ಆಗಿದೆ ಅಂತ…ಆದರೆ ಇಲ್ಲಿ ನೋಡಿ…’ ಎಂದು ಟ್ವಿಟ್ಟರ್ನಲ್ಲಿ ಫೋಟೊ ಸಹಿತ ಪ್ರಕಟಿಸಿದ್ದಾರೆ.
ಈ ಕೋವಿಡ್ ಸಂಬಂಧಿ ಲಾಕ್ ಡೌನ್ ಸಂದರ್ಭದಲ್ಲಿ ನಟ ಅಮಿತಾಬ್ ಬಚ್ಚನ್ ಅವರು ಒಂದು ಲಕ್ಷಕ್ಕೂ ಅಧಿಕ ದಿನಗೂಲಿ ನೌಕರರಿಗೆ ಆಹಾರ ಧಾನ್ಯಗಳನ್ನು ಪೂರೈಸಿದ್ದಾರೆ ಮತ್ತು ಆ ಮೂಲಕ ಕೋವಿಡ್ ಹೋರಾಟದಲ್ಲಿ ತಮ್ಮ ಭಾಗಿದಾರಿಕೆಯನ್ನು ನೀಡಿದ್ದಾರೆ.
T 3534 – kaun kehta hai Sunday ki well wisher meetings band ho gayi Jalsa gate pe .. ye dekhiye .. !! pic.twitter.com/9jjreZziCO
— Amitabh Bachchan (@SrBachchan) May 17, 2020
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.