Oct.9: ಕಾಂಗ್ರೆಸ್‌ ಕಾಲ್ನಡಿಗೆ ಜಾಥಾ, ಪ್ರತಿಭಟನೆ ಸಭೆ

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ವಂಚನೆ ಆರೋಪ

Team Udayavani, Oct 7, 2023, 11:32 PM IST

Oct.9: ಕಾಂಗ್ರೆಸ್‌ ಕಾಲ್ನಡಿಗೆ ಜಾಥಾ, ಪ್ರತಿಭಟನೆ ಸಭೆ

ಉಡುಪಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ರೂಪಾಯಿ ಹಗರಣ ನಡೆದಿದ್ದು, ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌, ಉಡುಪಿ, ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಆಶ್ರಯದಲ್ಲಿ ಅ. 9ರಂದು ಬ್ರಹ್ಮಾವರದಲ್ಲಿ ಕಾಲ್ನಡಿಗೆ ಜಾಥಾ, ಪ್ರತಿಭಟನೆ ಸಭೆ ನಡೆಯಲಿದೆ ಎಂದು ಶನಿವಾರ ಕಾಂಗ್ರೆಸ್‌ ಮುಖಂಡ ಪ್ರಸಾದ್‌ರಾಜ್‌ ಕಾಂಚನ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅ. 9ರಂದು ಬೆಳಗ್ಗೆ 10ಕ್ಕೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಿಂದ ಬ್ರಹ್ಮಾವರ ಬಸ್‌ ನಿಲ್ದಾಣದವರೆಗೆ ಸಾವಿರಾರು ಮಂದಿ ಜನರು ಕಾಲ್ನಡಿಗೆ ಜಾಥಾ ನಡೆಸಿ ಪ್ರತಿಭಟಿಸಲಿದ್ದೇವೆ. ಮಾಜಿ ಸಚಿವರು, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ. 3. ಕೋ.ರೂ. ಜಿಎಸ್‌ಟಿ ಸಹಿತ 14 ಕೋ.ರೂ.ಗೂ ಅಧಿಕ ವಂಚನೆ ಮಾಡಲಾಗಿದೆ. ಈ ಅವ್ಯವಹಾರದ ಸಂಪೂರ್ಣ ಸತ್ಯ ಆರ್‌ಟಿಐ ಮಾಹಿತಿಯಿಂದ ಬಯಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದರು.

ಗುಜರಿ ಖರೀದಿ ಗುತ್ತಿಗೆ ಪಡೆದ ಮೆ| ನ್ಯೂ ರಾಯಲ್‌ ಟ್ರೇಡರ್ಸ್‌ ಚೆನ್ನೈ ಸಂಸ್ಥೆಯು ಟೆಂಡರ್‌ನಲ್ಲಿ ಜಿ.ಎಸ್‌.ಟಿ. ಹೊರತುಪಡಿಸಿ ಕೆ.ಜಿ.ಗೆ 82 ರೂ. ದರ ನಮೂದಿಸಿದೆ. ಆದರೆ ಮಾಹಿತಿ ಪ್ರಕಾರ ಸಾಗಾಟದ ಇ-ವೇ ಬಿಲ್‌ ಮತ್ತು ಹೊಸದಾಗಿ ಇನ್ವಾಯ್ಸ ರಚಿಸಿ ಸರಕಾರದ ಬೊಕ್ಕಸಕ್ಕೆ (ಜಿಎಸ್‌ಟಿ.) ಮತ್ತು ಕಾರ್ಖಾನೆಗೆ ವಂಚನೆ ಮಾಡಲು ಟೆಂಡರ್‌ನಲ್ಲಿ ನಮೂದಿಸಿದ ದರಕ್ಕಿಂತ ಕಡಿಮೆ ಮೊತ್ತ ಕೆ.ಜಿ.ಗೆ 30 ರೂ. ನಮೂದಿಸಿ ಕಾರ್ಖಾನೆ ಅವರು ಪಾವತಿಸಿದ ಜಿ.ಎಸ್‌.ಟಿ. ಮೊತ್ತಕ್ಕೆ ಸರಿದೂಗಿಸಿ ಬ್ರಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಪ್ರಸಾದ್‌ರಾಜ್‌ ಹೇಳಿದರು.

ಎಲ್ಲ ಹಗರಣಗಳು ಉಡುಪಿ ಜಿಲ್ಲಾ ರೈತ ಸಂಘದ ಗಮನಕ್ಕೆ ಬಂದ ದಿನಾಂಕದಿಂದ ಬೇರೆ ಬೇರೆ ಮೂಲಗಳಿಂದ ಮಾಹಿತಿ ಕಲೆಹಾಕಿ ಪೊಲೀಸ್‌ ಹಾಗೂ ಸಂಬಂಧಪಟ್ಟ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದರು.

50 ಸಾವಿರ ರೂ. ಮೇಲ್ಪಟ್ಟ ಯಾವುದೇ ಸರಕು ಸಾಮಗ್ರಿ ಮಾರಾಟ ಮಾಡುವಾಗ ಇ-ವೇ ಬಿಲ್‌, ವೇ ಬ್ರಿಜ್‌ ರಶೀದಿ, ಇನ್ವಾಯ್ಸ್, ಗೇಟ್‌ ಪಾಸ್‌ ಇವುಗಳನ್ನು ಮಾರಾಟ ಮಾಡುವ ಸಂಸ್ಥೆ ಕಡ್ಡಾಯ ದಾಖಲಿಸಿಕೊಳ್ಳಬೇಕು. ಆದರೆ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸರಕಾರಕ್ಕೆ ಯಾವುದೇ ಮಾಹಿತಿ ನೀಡದೆ ಎಲ್ಲ ನಿಯಮ ಉಲ್ಲಂ ಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲು ತಿಳಿಸಿದರು.

ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌, ಬ್ರಹ್ಮಾವರ ಬ್ಲಾಕ್‌ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಪ್ರಖ್ಯಾತ್‌ ಶೆಟ್ಟಿ ತೆಂಕನಿಡಿಯೂರು, ಜ್ಯೋತಿ ಹೆಬ್ಟಾರ್‌, ಕುಶಲ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.