ಆಂಧ್ರ ಬಸ್‌ನಲ್ಲಿ ಇಟ್ಟಿಗೆ ಸಾಗಾಟ!


Team Udayavani, May 5, 2020, 12:02 PM IST

ಆಂಧ್ರ ಬಸ್‌ನಲ್ಲಿ ಇಟ್ಟಿಗೆ ಸಾಗಾಟ!

ಸಾಂದರ್ಭಿಕ ಚಿತ್ರ

ಮೊಳಕಾಲ್ಮೂರು: ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಪ್ರಯಾಣಿಕರು ಸಂಚರಿಸುವ ಆಂಧ್ರದ ಸರ್ಕಾರಿ ಬಸ್‌ನಲ್ಲಿ ಪಟ್ಟಣದಿಂದ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಸರ್ಕಾರಿ ಬಸ್‌ ಸೀಜ್‌ ಮಾಡಲಾಗಿದೆ. ಆಂಧ್ರಪ್ರದೇಶ ಸಾರಿಗೆ ಇಲಾಖೆ ಅನುಮತಿ ಪತ್ರವನ್ನು ಸರ್ಕಾರಿ ಬಸ್‌ಗೆ ಅಂಟಿಸಿಕೊಂಡು ಚೆಕ್‌ಪೋಸ್ಟ್‌ ಮೂಲಕ ನಿರಾಂತಕವಾಗಿ ಮೊಳಕಾಲ್ಮೂರು ಪಟ್ಟಣಕ್ಕೆ ಪ್ರವೇಶಿಸಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ವಿಷಯ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ಸರ್ಕಾರಿ ಬಸ್‌ನಲ್ಲಿ ಸುಮಾರು

3-4 ದಿನಗಳಿಂದಲೂ ನಿತ್ಯವೂ 6 ಸಾವಿರ ಇಟ್ಟಿಗೆಗಳನ್ನು ಸಾಗಿಸಲಾಗುತ್ತಿತ್ತು. ಪಟ್ಟಣದಲ್ಲಿನ ಇಟ್ಟಿಗೆ ಭಟ್ಟಿಯೊಂದರಲ್ಲಿ ಇಟ್ಟಿಗೆಯನ್ನು ಲೋಡ್‌ ಮಾಡಿಕೊಂಡು ಆಂಧ್ರದ ರಾಯದುರ್ಗ ಮಾರ್ಗವಾಗಿ ಹೋಗಲಾಗುತ್ತಿತ್ತು. ಪಟ್ಟಣದ ಪ್ರಯಾಣಿಕರು ಬಸ್‌ ನಿಲ್ಲಿಸಿ ಪರಿಶೀಲಿಸಿದಾಗ ಬಸ್‌ನಲ್ಲಿ ಇಟ್ಟಿಗೆ ತುಂಬಿಕೊಂಡಿರುವುದು ಪತ್ತೆಯಾಗಿದೆ. ಈ ಬಸ್‌ ಅನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಯಿತು. ಬಸ್‌ ಚಾಲಕ ಮತ್ತು ಎಪಿಎಸ್‌ ಆರ್‌ಟಿಸಿ ಬಸ್‌ ಅಧಿಕಾರಿಯನ್ನು ವಿಚಾರಣೆಗೊಳಪಡಿಸಿದಾಗ ಅನಂತಪುರ ಜಿಲ್ಲೆ

ಉರುವಕೊಂಡ ಪ್ರದೇಶದ ಬಸ್‌ ನಿಲ್ದಾಣದ ಕಾಮ ಗಾರಿಗೆ ಇಟ್ಟಿಗೆಯನ್ನು ಕೊಂಡೊಯ್ಯಲಾಗುತ್ತಿತ್ತು. ಈ ಬಗ್ಗೆ ಆಂಧ್ರದ ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪತ್ರ ಪಡೆಯಲಾಗಿತ್ತು. ಈ ಬಗ್ಗೆ ತಹಶೀಲ್ದಾರ್‌ ಎಂ.ಬಸವರಾಜ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

MUDA CASE: ಪೊಲಿಟಿಕಲ್‌ ನ್ಯೂಸ್‌ಗಾಗಿ ಇಡಿ ಯತ್ನ: ಹರಿಪ್ರಸಾದ್‌

MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್‌ ಆರೋಪ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.