ಸರ್ಕಾರ ಪಡೆಯಲಿದೆ 15.4 ಲಕ್ಷ ಕೋಟಿ ಸಾಲ
Team Udayavani, Feb 2, 2023, 7:20 AM IST
ದೇಶದ ಅರ್ಥ ವ್ಯವಸ್ಥೆ ಮತ್ತು ಖರ್ಚು ವೆಚ್ಚಗಳನ್ನು ಸರಿತೂಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2023-24ನೇ ವಿತ್ತೀಯ ವರ್ಷದಲ್ಲಿ 15.4 ಲಕ್ಷ ಕೋಟಿ ರೂ. ಸಾಲ ಮಾಡಲು ಮುಂದಾಗಿದೆ. ಮಾ.31ಕ್ಕೆ ಮುಕ್ತಾಯವಾಗಲಿರುವ ಹಾಲಿ ವಿತ್ತ ವರ್ಷದಲ್ಲಿ ಸರ್ಕಾರ ಮಾಡಿರುವ ಸಾಲಕ್ಕಿಂತ ಇದು ಹೆಚ್ಚಿನ ಪ್ರಮಾಣದ್ದೇ ಆಗಿದೆ ಎನ್ನುವುದು ಗಮನಾರ್ಹ.
ಹಾಲಿ ವಿತ್ತ ವರ್ಷಕ್ಕಾಗಿ ಕೇಂದ್ರ ಸರ್ಕಾರ 14.21 ಲಕ್ಷ ಕೋಟಿ ರೂ.ಗಳನ್ನು ಸಾಲವಾಗಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಕಳೆದ ಬಜೆಟ್ನಲ್ಲಿ ಪ್ರಸ್ತಾಪ ಸಲ್ಲಿಸಿತ್ತು.
ಸೆಕ್ಯುರಿಟಿಗಳಿಂದ 11.8 ಲಕ್ಷ ಕೋಟಿ ರೂ. ಸಾಲ ಪಡೆದುಕೊಂಡು 2023-24ನೇ ಸಾಲಿನಲ್ಲಿ ಉಂಟಾಗಲಿರುವ ವಿತ್ತೀಯ ಕೊರತೆಯನ್ನು ನೀಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಉಳಿದ ಮೊತ್ತವನ್ನು ಸಣ್ಣ ಉಳಿತಾಯ ಮತ್ತು ಇತರ ಆದಾಯದ ಮೂಲಗಳಿಂದ ಹೊಂದಿಸಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಒಟ್ಟು 15.4 ಲಕ್ಷ ಕೋಟಿ ರೂ. ಸಾಲದ ಮೊತ್ತವನ್ನು ಪಡೆಯಲಿದೆ.
ಜ.27ರ ವರೆಗೆ ಕೇಂದ್ರ ಸರ್ಕಾರ 12.93 ಲಕ್ಷ ಕೋಟಿ ರೂ. ಮೊತ್ತವನ್ನು ಕೇಂದ್ರ ಸರ್ಕಾರ ಈಗಾಗಲೇ ಜಮೆ ಮಾಡಿದೆ. ಅದು 2022-23ನೇ ಸಾಲಿನ ಒಟ್ಟು 14.21 ಲಕ್ಷ ಕೋಟಿ ರೂ. ಮೊತ್ತದ ಪೈಕಿ ಶೇ.91 ಆಗಿದೆ ಎಂದು ಬಜೆಟ್ ದಾಖಲೆಗಳಲ್ಲಿ ಕೇಂದ್ರ ಸರ್ಕಾರ ಉಲ್ಲೇಖಿಸಿದೆ. 2022-23ನೇ ಸಾಲಿನಲ್ಲಿ ಡೇಟೆಡ್ ಸೆಕ್ಯುರಿಟಿಗಳ ಮೂಲಗಳಿಂದ 14,95,000 ಕೋಟಿ ರೂ. ಸಂಗ್ರಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.