Byndoor ಶಾಸಕರ ಅಹೋರಾತ್ರಿ ಧರಣಿ; ಜಿಲ್ಲಾಧಿಕಾರಿ ಭೇಟಿ; ಧರಣಿ ಅಂತ್ಯ


Team Udayavani, Aug 13, 2024, 5:11 PM IST

Byndoor ಶಾಸಕರ ಧರಣಿ: ಜಿಲ್ಲಾಧಿಕಾರಿ ಭೇಟಿ ಅಂತ್ಯಗೊಂಡ ಧರಣಿ

ಬೈಂದೂರು: ಜಿಲ್ಲಾಡಳಿತ ಶಾಸಕರ ಸಂವಿಧಾನಿಕ ಹಕ್ಕುಗಳನ್ನು ಹತ್ತಿಕ್ಕುತ್ತಿದೆ.ಅಧಿಕಾರಿಗಳಿಗೆ ಶಾಸಕರ ಸಭೆಗೆ ತೆರಳಬಾರದೆಂದು ಶಾಸಕರ ಹಕ್ಕುಗಳನ್ನು ಕಸಿಯುತ್ತಿದ್ದಾರೆ.ಕಾಂಗ್ರೆಸ್ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರುಗಡೆ ಶಾಸಕ ಗುರುರಾಜ್‌ ಗಂಟಿಹೊಳೆ ನಡೆಸುತ್ತಿದ್ದ ಧರಣಿ ಮಂಗಳವಾರ ಬೆಳಿಗ್ಗೆ ಅಂತ್ಯಗೊಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಭೇಟಿ: ಸೋಮವಾರ ಸಂಜೆಯಿಂದ ಕಾರ್ಯಕರ್ತರೊಂದಿಗೆ ಧರಣಿ ಆರಂಭಿಸಿದ ಬಳಿಕ ತಹಶೀಲ್ದಾರರು,ಸಹಾಯಕ ಕಮಿಷನರ್‌ ಶಾಸಕರ ಮನ ಒಲಿಸುವ ಪ್ರಯತ್ನ ಮಾಡಿದರು ಕೂಡ ಪ್ರಯೋಜನವಾಗಿಲ್ಲ. ಮಾತ್ರವಲ್ಲದೆ ಜಿಲ್ಲಾ ಬಿಜೆಪಿ ಮುಖಂಡರು ಕಾಪು,ಉಡುಪಿ,ಕುಂದಾಪುರ ಶಾಸಕರು ಕೂಡ ಆಗಮಿಸಿ ಬೆಂಬಲ ನೀಡಿದ್ದರು.

ಮಂಗಳವಾರ ಬೆಳಿಗ್ಗೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿಗಳ ಜೊತೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಮುಖಂಡರು ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಜಿಲ್ಲಾಡಳಿತದಿಂದ ಶಾಸಕರ ಹಕ್ಕುಚ್ಯುತಿ ಆಗಿಲ್ಲ.ಸಾಂವಿಧಾನಿಕ ನಿಯಮಗಳನ್ನು ಬಿಟ್ಟು ನಾವು ಕೆಲಸ ಮಾಡಲು ಸಾಧ್ಯವಿಲ್ಲ. ಶಾಸಕರ ಖಾಸಗಿ ಕಛೇರಿಯಲ್ಲಿ ಅಧಿಕೃತ ಸಭೆಗೆ ಸರಕಾರದ ನಿಯಮದಲ್ಲಿ ಅವಕಾಶವಿಲ್ಲ. ಶಾಸಕರು ಅಧಿಕಾರಿಗಳ ಸಭೆ ಮಾಡಬಾರದೆಂದು ನಾವು ಹೇಳಿಲ್ಲ.ಬದಲಾಗಿ ಸರಕಾರಿ ಕಛೇರಿ,ಶಾಸಕರ ಭವನದಲ್ಲಿ ನಡೆಯುವ ಅಧಿಕೃತ ಸಭೆಯಲ್ಲಿ ಮಾತ್ರ ಭಾಗವಹಿಸಲು ತಿಳಿಸಿದ್ದೇವೆ.

ಬೈಂದೂರು ಶಾಸಕರ ಮನವಿಯನ್ನು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.ಸರಕಾರದ ಸ್ಪಷ್ಟನೆ ಬಂದ ಬಳಿಕ ಮಾಹಿತಿ ನೀಡುವುದಾಗಿ ತಿಳಿಸಿದರು. ಮಂಗಳವಾರ ಬೆಳಿಗ್ಗೆಯಿಂದ ಶಾಸಕರು ನಡೆಸುತ್ತಿರುವ ಅಹೋರಾತ್ರಿ ಧರಣಿ ಯನ್ನು ಕೈಬಿಡಲಾಯಿತು.

ಮಾಜಿ ಶಾಸಕರ ಮೇಲೆ ಆರೋಪ: ಬೈಂದೂರಿನ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಯವರು ಬೈಂದೂರಿನ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ.ಹಿಂಬಾಗಿಲಿನ ಅಧಿಕಾರ ಶೋಭೆಯಲ್ಲ.ಪಶು ವೈದ್ಯರು ಸೇರಿದಂತೆ ಉತ್ತಮ ಅಧಿಕಾರಿಗಳ ವರ್ಗಾವಣೆ ಮೂಲಕ ಮಾಜಿ ಶಾಸಕರ ನೇತ್ರತ್ವದಲ್ಲಿ ಕಾಂಗ್ರೆಸ್ ತಂಡ ವರ್ಗಾವಣೆ ದಂಧೆಯಲ್ಲಿ ಹಣ ಮಾಡುತ್ತಿದ್ದಾರೆ. ಜನರು ಆರಿಸಿ ಕಳುಹಿಸಿದ ಶಾಸಕ ನಾನು.ಇಂತಹ ಯಾವುದೇ ದಬ್ಟಾಳಿಕೆಗೆ ಬಗ್ಗುವುದಿಲ್ಲ ಮತ್ತು ಶಾಸಕರ ಅಧಿಕಾರ ನನಗೆ ತಿಳಿಸುವ ಅಗತ್ಯವಿಲ್ಲ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ,ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್‌ ಕುಮಾರ್‌,ರಾಜೇಶ ಕಾವೇರಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ,ಸುರೇಶ ಶೆಟ್ಟಿ,ಮಹೇಂದ್ರ ಪೂಜಾರಿ,ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ, ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.