![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 15, 2019, 3:08 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಮೂರು ವಾರ ಸಮೀಪಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ರಾತ್ರಿ ದೆಹಲಿಗೆ ತೆರಳಿ, ವರಿಷ್ಠರ ಭೇಟಿ ಸಾಧ್ಯತೆಯಿದ್ದು, ಸಂಪುಟ ವಿಸ್ತರಣೆ ಕಾಲ ಸನ್ನಿಹಿತವಾದಂತಾಗಿದೆ. ಮೊದಲ ಹಂತದಲ್ಲಿ 15 ಸಚಿವರು ಆಯ್ಕೆಯಾಗುವ ಸಾಧ್ಯತೆ ಇದ್ದು, ಹಿರಿಯ- ಅನುಭವಿ ಶಾಸಕರ ಜತೆ ಯುವ- ಹೊಸ ಶಾಸಕರಿಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
ವರಿಷ್ಠರ ಒಪ್ಪಿಗೆ ದೊರೆತರೆ ಭಾನುವಾರ ಇಲ್ಲವೇ ಸೋಮವಾರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಂಭವವಿದೆ. ಮೊದಲ ಹಂತದಲ್ಲಿ ಪ್ರಭಾವಿ ಹಾಗೂ ದೈನಂದಿನ ಆಡಳಿತಕ್ಕೆ ಪೂರಕವಾದ ಖಾತೆ ಹಂಚಿಕೆಯಾಗುವ ನಿರೀಕ್ಷೆ ಇದೆ. ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆ ಸಚಿವಾಕಾಂಕ್ಷಿಗಳು ಸ್ಥಾನ ಗಿಟ್ಟಿಸಿಕೊಳ್ಳಲು ಲಾಬಿ ತೀವ್ರಗೊಳಿಸಿದ್ದಾರೆ. ಎಲ್ಲವೂ ಪಕ್ಷದ ವರಿಷ್ಠರ ನಿಲುವಿನ ಮೇಲೆ ಆಧಾರಿತವಾಗಿದೆ.
ರಾಜ್ಯ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಲೆಕ್ಕಾಚಾರದಲ್ಲಿ ತೊಡಗಿದ್ದು, ತೆರೆಮರೆಯಲ್ಲೇ ಕಸರತ್ತು ನಡೆದಿದೆ. ಇನ್ನೊಂದೆಡೆ ಹೈಕಮಾಂಡ್ ಕೂಡ ತನ್ನದೇ ಮೂಲಗಳ ಪ್ರಕಾರ ಮಾಹಿತಿ ಸಂಗ್ರಹಿಸಿದೆ. ಹೀಗಾಗಿ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಚರ್ಚಿಸಿ ಸಚಿವರನ್ನು ಅಂತಿಮಗೊಳಿಸಲಿದ್ದು, ತೀವ್ರ ಕುತೂಹಲ ಮೂಡಿದೆ.
ಮೊದಲ ಹಂತದಲ್ಲಿ 15 ಸಚಿವರ ಆಯ್ಕೆ: ಮೊದಲ ಹಂತದಲ್ಲಿ 15 ಸಚಿವರ ಆಯ್ಕೆ ಪ್ರಯತ್ನ ನಡೆಯಲಿದೆ. ಗೃಹ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಲ ಸಂಪನ್ಮೂಲ, ನಗರಾಭಿವೃದ್ಧಿ, ಪೌರಾಡಳಿತ, ಆಹಾರ ಮತ್ತು ನಾಗರಿಕ ಸರಬ ರಾಜು, ಸಮಾಜ ಕಲ್ಯಾಣ ಸೇರಿದಂತೆ ಪ್ರಭಾವಿ ಖಾತೆ ಹಂಚಿಕೆಯಾಗಲಿದೆ. ಬಿಜೆಪಿ ಸರ್ಕಾರ ರಚನೆಯಾಗಿ 20 ದಿನ ಕಳೆಯುತ್ತಿದ್ದು, ಮುಖ್ಯ ಮಂತ್ರಿಗಳೊಬ್ಬರೇ ಕಾರ್ಯ ನಿರ್ವಹಿಸು ತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ವರ್ಚಸ್ವಿ ಮುಖಗಳಿಗೆ ಆದ್ಯತೆ: ಉತ್ತಮ ಆಡಳಿತದ ಜತೆಗೆ ಸರ್ಕಾರ ಹಾಗೂ ಪಕ್ಷದ ಬಗ್ಗೆ ವರ್ಚಸ್ಸು ಹೆಚ್ಚಿಸುವುದತ್ತಲೂ ಬಿಜೆಪಿ ವರಿಷ್ಠರು ಗಮನ ಹರಿಸಿದ್ದಾರೆ. ಆ ಹಿನ್ನೆಲೆಯಲ್ಲಿ ವಿವಾದಗಳಿಂದ ದೂರವಿರುವ, ಉತ್ತಮ ವ್ಯಕ್ತಿತ್ವ- ವರ್ಚಸ್ಸು ಹೊಂದಿರುವ ಶಾಸಕರನ್ನೇ ಗುರುತಿಸಿ ಅವಕಾಶ ನೀಡುವ ಸಾಧ್ಯತೆ ಇದೆ. ಹಿಂದಿನ ಸರ್ಕಾರಗಳಿಗಿಂತಲೂ ಭಿನ್ನ ರೀತಿ ಆಡಳಿತ ನೀಡಲು ಸಮರ್ಥರನ್ನೇ ಗುರುತಿಸಿ ಸಚಿವರನ್ನು ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿವೆ.
ನೆರೆ ಪರಿಹಾರ ಕಾರ್ಯಕ್ಕೂ ಒತ್ತು: ರಾಜ್ಯದಲ್ಲಿ ಪ್ರಸ್ತುತ ಪ್ರವಾಹ ಉಂಟಾಗಿ ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಈ ವೇಳೆ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಗಳನ್ನು ಕೈಗೊಳ್ಳುವ ಜತೆಗೆ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಬೇಕಾದ ಅನಿವಾ ರ್ಯತೆ ಇದೆ. ಹಾಗಾಗಿ ಪ್ರತಿಕೂಲ ಪರಿಸ್ಥಿತಿ ನಿರ್ವಹಿಸಲು ಸಂಪುಟದಲ್ಲಿ ಸಮರ್ಥರಿಗೆ ಆದ್ಯತೆ ಸಿಗುವ ಲೆಕ್ಕಾಚಾರವಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಗುರುವಾರ ದೆಹಲಿಗೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ರಾತ್ರಿ ದೆಹಲಿಗೆ ತೆರಳಲಿದ್ದು, ಶುಕ್ರವಾರ ಪ್ರಧಾನಿ ಸೇರಿದಂತೆ ಕೇಂದ್ರದ ಹಲವು ಸಚಿವರನ್ನು ಭೇಟಿಯಾ ಗಲಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ದಂತೆ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ. ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಂದೆರಡು ದಿನದಲ್ಲಿ ಹಸಿರು ನಿಶಾನೆ ತೋರುವ ವಿಶ್ವಾಸ ವಿದೆ. ರಾಜ್ಯ ನಾಯ ಕರು ಭಾನುವಾರ ಇಲ್ಲವೇ ಸೋಮವಾರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸುವ ಬಗ್ಗೆ ಚಿಂತಿಸಿದ್ದಾರೆ.
ಸಚಿವ ಸ್ಥಾನಕ್ಕೆ ಸಕಲ ಪ್ರಯತ್ನ: ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆ ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಲಾಬಿ ತೀವ್ರಗೊಳಿಸಿದ್ದಾರೆ. ಕೆಲವರು ಸಿಎಂ ಯಡಿಯೂರಪ್ಪ ಅವರ ಬೆನ್ನಿಗೆ ಬಿದ್ದಿದ್ದರೆ ಇನ್ನೂ ಕೆಲವರು ದೆಹಲಿ ಮಟ್ಟದಲ್ಲಿ ಪ್ರಭಾವ ಬಳಸಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಕೆಲವರು ಸಚಿವ ಸ್ಥಾನದ ಜತೆಗೆ ಇಂತದ್ದೇ ಖಾತೆ ನೀಡಿದರೆ ಸೂಕ್ತ ಎಂದು ಹೇಳಲಾರಂಭಿಸಿದ್ದಾರೆ.
ಹಿಂದೆ ನಿರ್ವಹಿಸಿದ ಖಾತೆ ನೀಡಿದರೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವ ವಿಶ್ವಾಸವನ್ನು ಕೆಲ ಹಿರಿಯ ಹಾಗೂ ಪ್ರಭಾವಿ ಸಮುದಾಯಗಳ ಶಾಸಕರು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಉಸ್ತುವಾರಿ ಜಿಲ್ಲೆ ಸೇರಿದಂತೆ ನಿರೀಕ್ಷೆಯಲ್ಲಿರುವ ಖಾತೆಯನ್ನೇ ಹಂಚಿಕೆ ಮಾಡುವಂತೆ ದುಂಬಾಲು ಬಿದ್ದಿದ್ದಾರೆ. ಜಾತಿ, ಪ್ರಾದೇಶಿಕತೆ, ಸಂಘಟನೆ ಇತರೆ ಅಂಶಗಳ ಆಧಾರದ ಮೇಲೆ ಸಚಿವ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ ಎನ್ನಲಾಗಿದೆ.
* ಎಂ. ಕೀರ್ತಿಪ್ರಸಾದ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.