IAS ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಪುಟ ಸಭೆ ತೀರ್ಮಾನ


Team Udayavani, Oct 5, 2023, 11:21 PM IST

Udayavani Kannada Newspaper

ಬೆಂಗಳೂರು: ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ನಡೆದ ಅಕ್ರಮ ಹಾಗೂ ಅಪೂರ್ಣ ಯೋಜನೆ ಜಾರಿ ಸಂಬಂಧ ಹಿರಿಯ ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಹಾಗೂ ಸಿವಿಲ್‌ ಮೊಕದ್ದಮೆ ಹೂಡಿ ಕ್ರಮ ತೆಗೆದುಕೊಳ್ಳುವ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

2015-16ರಲ್ಲಿ ನಡೆದ ಈ ಅಕ್ರಮಕ್ಕೆ ಸಂಬಂಧಿಸಿ ಐಎಎಸ್‌ ಅಧಿಕಾರಿಗಳಾದ ಎಂ.ಬಿ.ರಾಜೇಶ್‌ ಗೌಡ, ಜಯವಿಭವ ಸ್ವಾಮಿ, ಎಸ್‌.ನವೀನ್‌ ಕುಮಾರ್‌, ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳಾದ ಹನುಮಂತರಾಯ, ಎಂ.ಎನ್‌.ಅಲಿಪುರ್‌ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ.ಪಾಟೀಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2015-16ರಲ್ಲಿ ಸುಮಾರು 862.37 ಕೋಟಿ ರೂ. ವೆಚ್ಚದಲ್ಲಿ ಒಟ್ಟು 163 ಉಗ್ರಾಣ ನಿರ್ಮಾಣ ಹಾಗೂ 89 ಉಗ್ರಾಣಗಳಿಗೆ ಮೂಲಸೌಕರ್ಯ ಕಲ್ಪಿಸಲು ಈ ಯೋಜನೆ ರೂಪಿಸಲಾಗಿತ್ತು. ಆದರೆ ಈ ಕಾಮಗಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆದ ಹಿನ್ನೆಲೆಯಲ್ಲಿ ಮಧ್ಯಸ್ಥಿಕೆ ಸಂಧಾನದ ಮೂಲಕ ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವ ಅನಿವಾರ್ಯತೆ ಸರಕಾರಕ್ಕೆ ಎದುರಾಗಿತ್ತು. ಗುತ್ತಿಗೆದಾರರಿಗೆ 126.34 ಕೋಟಿ ರೂ. ಮಧ್ಯಸ್ಥಿಕೆ ಪ್ರಕಾರ ಪಾವತಿಸಲು ನಿರ್ಧರಿಸಲಾಗಿತ್ತು. ಇದನ್ನೂ ಒಳಗೊಂಡಂತೆ ಬಾಕಿ ಕಾಮಗಾರಿ ಪೂರ್ಣಗೊಳಿಸುವುದಕ್ಕೆ 376.54 ಕೋ. ರೂ. ಬಿಡುಗಡೆ ಮಾಡುವುದಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ಸಂಪುಟದ ಇತರ ತೀರ್ಮಾನಗಳು

 ಆರೋಗ್ಯ ಇಲಾಖೆ ಹಾಗೂ ನಿಮ್ಹಾನ್ಸ್‌ ಸಹಯೋಗದೊಂದಿಗೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 25 ಕೋ. ರೂ. ವೆಚ್ಚದಲ್ಲಿ ಮೆದುಳಿನ ಆರೋಗ್ಯ, ಆರೈಕೆ ಯೋಜನೆ ಜಾರಿ.
 ರಕ್ತ ಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆ ಜಾರಿಗೆ 185.74 ನಿಗದಿಗೆ ಒಪ್ಪಿಗೆ.
 ಬಳ್ಳಾರಿ ನಗರ ಕಾನೂನು ಸಂಕೀರ್ಣದ 120 ಕೋಟಿ ರೂ. ಯೋಜನೆಯನ್ನು ಮುಂದುವರಿದ ಕಾಮಗಾರಿಗಾಗಿ 121.90 ಕೋ. ರೂ. ಪರಿಷ್ಕೃತ ಆದೇಶ.
 ಕರ್ನಾಟಕ ಗೃಹ ಮಂಡಳಿಯ ಅನುಪಾತದ ಪಾಲುದಾರಿಕೆ ಅಡಿಯಲ್ಲಿ ಭೂಮಿ ಪಡೆದು ವಸತಿ ಯೋಜನೆ ಅನುಷ್ಠಾನ ಮಾಡುವ ಬಗ್ಗೆ ಸಾಮಾನ್ಯ ನೀತಿ ರೂಪಿಸಲು ಸಂಪುಟದ ಒಪ್ಪಿಗೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡದಂಥ ನಗರಗಳಲ್ಲಿ ಭೂಮಿಯನ್ನು ಗ್ರಾಮೀಣ ಪ್ರದೇಶದ ಜಮೀನಿಗೆ ವಿಭಿನ್ನವಾಗಿ ಪರಿಗಣಿಸಬೇಕಾಗುತ್ತದೆ. ಪ್ರತಿಯೊಂದು ಯೋಜನೆಯೂ ಒಂದಕ್ಕಿಂತ ಇನ್ನೊಂದು ಭಿನ್ನವಾಗಿರುವುದರಿಂದ ಒಂದೇ ನೀತಿ ಕಷ್ಟ. ಹೀಗಾಗಿ ಬೇರೆ ಬೇರೆ ಜಿಲ್ಲೆಗೆ ಇದು ಪ್ರತ್ಯೇಕವಾಗಿರುತ್ತದೆ. ಜತೆಗೆ ಗೃಹ ಮಂಡಳಿಯ ಎಲ್ಲ ವಸತಿ ಯೋಜನೆಗಳ ಪ್ರಕರಣವಾರು ಅನುಪಾತ ನಿರ್ಧರಿಸಲು ಇನ್ನು ಮುಂದೆ ಸಂಪುಟದ ಒಪ್ಪಿಗೆ ಅನಿವಾರ್ಯವಾಗಿರುತ್ತದೆ.
 ಬರ ಅಧ್ಯಯನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡದ ಪ್ರವಾಸದ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಂಪುಟ ಸಭೆಗೆ ಮಾಹಿತಿ ನೀಡಿದ್ದು, ವರದಿ ತಯಾರಿಸಲು ಶ್ರಮಿಸಿದ ಅಧಿಕಾರಿಗಳನ್ನು ಪ್ರಶಂಸಿಸಲು ಸಂಪುಟ ತೀರ್ಮಾನಿಸಿತು.

ಟಾಪ್ ನ್ಯೂಸ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Bengaluru: ಕಂಬಳ ಆಯೋಜನೆ; ನ. 5ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.