ಸ್ವಾವಲಂಬಿ ಬದುಕಿಗೆ ಆಸರೆಯಾದ ಪಂಜರದ ಮೀನು ಕೃಷಿ

ಕಲಿಕೆಯೊಂದಿಗೆ ಮೀನು ಸಾಕಣೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿ

Team Udayavani, Oct 5, 2021, 6:10 AM IST

ಸ್ವಾವಲಂಬಿ ಬದುಕಿಗೆ ಆಸರೆಯಾದ ಪಂಜರದ ಮೀನು ಕೃಷಿ

ತೆಕ್ಕಟ್ಟೆ:ಆತನಿಗೆ ಬಾಲ್ಯದಿಂದಲೇ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ಮೊದಲಾದವುಗಳಲ್ಲಿ ಆಕರ್ಷಣೆ ಹೆಚ್ಚಾಗಿತ್ತು. ಅದಕ್ಕೆ ಬೇಕಾದ ಪೂರಕ ವಾತಾವರಣವೂ ಊರಲ್ಲಿತ್ತು.  ಲಾಭನಷ್ಟದ ಬಗ್ಗೆ ಚಿಂತೆಯೇ ಮಾಡಲಿಲ್ಲ. ಈಗ ಪಂಜರ ಮೀನು ಕೃಷಿಯೂ ಆಸಕ್ತಿ ವಹಿಸಿದವರಿಗೆ ಲಾಭ ತರಬಲ್ಲದು ಎಂಬ ಆಶಾಭಾವನೆ ಮೂಡಿಸುತ್ತಿದ್ದಾನೆ ಆಕರ್ಷ್‌ ಪೂಜಾರಿ.

ಈತ ಕೋಟ ವಿವೇಕ ಜೂನಿಯರ್‌ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ. ಬೇಳೂರಿನ ದೇಲಟ್ಟು ಗೋವಿಂದ ಪೂಜಾರಿ ಹಾಗೂ ವಸಂತಿ ಪೂಜಾರಿ ಈತನ ಹೆತ್ತವರು.

ಪಂಜರದ ಮೀನು ಕೃಷಿಯೆಡೆಗೆ ಆಕರ್ಷಣೆ
ಆಕರ್ಷ್‌ ಬಾಲ್ಯದಿಂದಲೂ ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆ ಕುರಿತಾಗಿ ಆಸಕ್ತಿ ವಹಿಸಿದ್ದನು. ಇದಕ್ಕೆ ಪೂರಕವಾಗಿ ಮಾವ ಬಸವ ಪೂಜಾರಿ ಅವರು ಮಾರ್ಗದರ್ಶನ ನೀಡಿದ್ದರು. ಅಲ್ಲದೆ ಯೂಟ್ಯೂಬ್‌ನಿಂದ ಮಾಹಿತಿ ಸಂಗ್ರಹಿಸಿ ಕಾಟ್ಲಾ, ರೋಬೋ ಹಾಗೂ ವಿವಿಧ ಜಾತಿಗೆ ಸೇರಿದ ಸುಮಾರು 800ಕ್ಕೂ ಅಧಿಕ ಮೀನಿನ ಮರಿಗಳನ್ನು ಬಳಸಿ ಮನೆ ಸಮೀಪದ ಸಣ್ಣಹೊಳೆಯಲ್ಲಿ ಪ್ರಾಯೋಗಿಕವಾಗಿ ಪಂಜರದ ಮೀನು ಕೃಷಿ ಆರಂಭಿಸಿದ್ದ.

ಪಂಜರ ರಚನೆ
ಪಿವಿಸಿ ಪೈಪ್‌ ಹಾಗೂ ಬಲೆಗಳನ್ನು ಬಳಸಿಕೊಂಡು, ಸುಮಾರು 5 ಸಾವಿರಕ್ಕೂ ಅಧಿಕ ಮೀನು ಸಾಕಣೆ ಮಾಡುವ ಸಾಮರ್ಥ್ಯ ಹೊಂದಿದ 12 ಅಡಿ ಅಗಲ ಹಾಗೂ 8 ಅಡಿ ಎತ್ತರದ ಪಂಜರವನ್ನು 25 ಸಾವಿರ ರೂ. ವೆಚ್ಚದಲ್ಲಿ ಸಿದ್ಧಪಡಿಸಿದ್ದಾನೆ.

ಇದನ್ನೂ ಓದಿ:ತಂತ್ರಜ್ಞಾನ ಆಧಾರಿತ ಹೈನುಗಾರಿಕೆ, ಆಧುನಿಕ ಪದ್ಧತಿ ಅಳವಡಿಕೆಯಿಂದ ಲಾಭದಾಯಕ

ವಿದ್ಯಾರ್ಥಿಯೋರ್ವ ಕಲಿಕೆಯ ಜತೆ ಸ್ವಾವಲಂಬಿ ಬದುಕು ಕಟ್ಟಿಕೊಂಡು ಬಿಡುವಿನ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಮೀನು ಕೃಷಿಯ ಹಾಗೂ ಡೆಕೋರೇಶನ್‌ ಕಾಯಕದಲ್ಲಿ  ತೊಡಗಿಸಿಕೊಂಡಿದ್ದಾನೆ.

ಬಾಲ್ಯದಿಂದಲೂ ಆಕರ್ಷ್‌ ಕಲಿಕೆಯ ಜತೆಗೆ ಸಾಂಪ್ರದಾಯಿಕ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ ಹಾಗೂ ತೆಂಗಿನ  ಕಾಯಿ ಕೀಳುವ ಕಾಯಕದಲ್ಲಿ ಆಸಕ್ತಿ ಹೊಂದಿದ್ದಾನೆ.  ಬಿಡುವಿನ ವೇಳೆಯಲ್ಲಿ ಏನಾದರೂ ಚಟುವಟಿಕೆಯಲ್ಲಿ ತೊಡಗಿರುತ್ತಾನೆ ಎಂದು ಆಕರ್ಷ್‌ ಪೂಜಾರಿಯ ತಾಯಿ ವಸಂತಿ ಪೂಜಾರಿ ಹೇಳಿದ್ದಾರೆ.

ಮೀನಿಗೆ ಬೇಡಿಕೆ

ಏರುತ್ತಿರುವ ತಾಪಮಾನ, ಜಲ ಮಾಲಿನ್ಯದಿಂದಾಗಿ ಕಡಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗಿದೆ. ಹೀಗಾಗಿ ಈ ಮೀನಿಗೆ ಬೇಡಿಕೆ ಇದೆ.  ಈ ಬಾರಿ ಅನುಭವದ ಕೊರತೆಯಿಂದ ಅಷ್ಟೇನು ಲಾಭದಾಯಕವಾಗಿಲ್ಲ. ಮುಂದಿನ ದಿನಗಳಲ್ಲಿ ಸರಕಾರದ ಯೋಜನೆಗಳನ್ನು ಬಳಸಿಕೊಂಡು  ಮೀನು ಕೃಷಿ ವಿಸ್ತರಿಸಬೇಕು ಎನ್ನುವ ಹಂಬಲವಿದೆ.
-ಆಕರ್ಷ್‌ ಪೂಜಾರಿ, ಪಂಜರದ ಮೀನು ಕೃಷಿ ಮಾಡಿದ ವಿದ್ಯಾರ್ಥಿ

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.