ಡಿಸೆಂಬರ್‌ಗೆ ಗಣತಿ ವರದಿ- ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷರ ಅವಧಿ ವಿಸ್ತರಣೆ

 ವರದಿ ದತ್ತಾಂಶ ಕಾಣೆಯಾಗಿದೆ ಎಂಬುದು ಸುಳ್ಳು: ಸರಕಾರ

Team Udayavani, Nov 23, 2023, 12:39 AM IST

census

ಬೆಂಗಳೂರು: ಜಾತಿಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ಸಂಬಂಧ ಸರಕಾರದೊಳಗಿನ ಭಿನ್ನ ಅಭಿಪ್ರಾಯ, ವಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿರುವಂತೆಯೇ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಅವರ ಅಧಿಕಾರದ ಅವಧಿಯನ್ನು ರಾಜ್ಯ ಸರಕಾರ ವಿಸ್ತರಿಸಿದೆ. ಈ ಮೂಲಕ ವರದಿ ಸಲ್ಲಿಕೆ ಡಿಸೆಂಬರ್‌ಗೆ ಮುಂದೂಡಿಕೆಯಾದಂತಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇನ್ನೆರಡು ದಿನಗಳಲ್ಲಿ ಜಯಪ್ರಕಾಶ್‌ ಹೆಗ್ಡೆ ಅವರು ವರದಿ ಸಲ್ಲಿಕೆ ಮಾಡಬೇಕಾಗಿತ್ತು. ಆದರೆ ಶೇ. 90ರಷ್ಟು ಕಾರ್ಯ ಪೂರ್ಣಗೊಂಡಿದ್ದು, ವರದಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಹೀಗಾಗಿ 15ರಿಂದ 20 ದಿನಗಳ ವರೆಗೆ ಕಾಲಾವಕಾಶ ಕೋರಲಾಗಿದೆ ಎಂದು ಸರಕಾರದ ಮೂಲಗಳು ಹೇಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಪ್ರತಿಕ್ರಿಯೆ ನೀಡಿದ್ದು, ವರದಿ ಸಲ್ಲಿಕೆ ಮಾಡುವವರೆಗೆ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಶ್ವತ ಹಿಂದುಳಿದ ಆಯೋಗವು ನಿಗದಿತ ಅವಧಿಯಲ್ಲಿ ಶತಾಯಗತಾಯ ವರದಿ ಸಲ್ಲಿಸಲು ಅಹೋರಾತ್ರಿ ಕೆಲಸ ಮಾಡುತ್ತಿದೆ. ಈ ಮೂಲಕ ಸರಕಾರಕ್ಕೆ ವರದಿ ಸಲ್ಲಿಕೆ ಬಹುತೇಕ ಖಚಿತ ಎನ್ನಲಾಗಿದೆ.

ಸಮೀಕ್ಷೆಯ ಅಂಕಿ-ಅಂಶಗಳನ್ನು ಇರಿಸಿಕೊಂಡು ವರದಿ ತಯಾರಿಸುವ ಪ್ರಕ್ರಿಯೆ ನಡೆದಿದೆ. ಶೇ. 90ರಷ್ಟು ಕಾರ್ಯ ಪೂರ್ಣಗೊಂಡಿದ್ದು, ಈಗ ಅಂತಿಮ ಸ್ಪರ್ಶ ಕೊಡಲಾಗುತ್ತಿದೆ. ಗಣತಿ ಆಧರಿಸಿ ಶಿಫಾರಸುಗಳನ್ನು ನೀಡುವ ಕೆಲಸ ನಡೆಯುತ್ತಿದೆ. ಇದು ಆಯೋಗದ ಎಲ್ಲ ಸದಸ್ಯರು ಜತೆಯಾಗಿ ಮಾಡುವಂತಹದ್ದಾಗಿದೆ. ಇದಕ್ಕಾಗಿ ಸಮಯ ಕೋರಲಾಗಿದೆ ಎನ್ನಲಾಗುತ್ತಿದೆ.

ಇದೇ ವೇಳೆ, ಸಮೀಕ್ಷೆಗೆ ಸಂಬಂಧಿಸಿದ ಯಾವುದೇ ದತ್ತಾಂಶಗಳು ಕಾಣೆಯಾಗಿಲ್ಲ. ಅದನ್ನು ಆಧರಿಸಿ ಸಿದ್ಧಪಡಿಸಲಾದ ಪ್ರತಿ ಮಾತ್ರ ಇಲ್ಲ. ಈ ಬಗ್ಗೆ 2021ರಲ್ಲೇ ಅಂದಿನ ಸರಕಾರದ ಗಮನಸೆಳೆಯಲಾಗಿತ್ತು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ.

ಹೊಸ ಸರಕಾರ ಬಂದ ಅನಂತರ ಮತ್ತೂಮ್ಮೆ ಈ ಅಂಶವನ್ನು ಉಲ್ಲೇಖೀಸಿ ಪತ್ರ ಬರೆಯಲಾಗಿತ್ತು. ಆಗ ಪರಿಷ್ಕೃತ ವರದಿ ಸಲ್ಲಿಸುವಂತೆ ಸರಕಾರ ನಿರ್ದೇಶನ ನೀಡಿತ್ತು. ಹಾಗಾಗಿ ಸಮೀಕ್ಷೆಯ ಮೂಲಕ ಸಂಗ್ರಹಿಸಿದ ಅಂಕಿ-ಅಂಶಗಳ ನೆರವಿನಿಂದಲೇ ವರದಿ ಸಿದ್ಧಪಡಿಸಲಾಗುತ್ತಿದೆ. ಡಿಸೆಂಬರ್‌ ಅಂತ್ಯದ ಒಳಗೆ ಸಲ್ಲಿಕೆಯೂ ಆಗಲಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ವಿಪಕ್ಷಗಳಿಗೆ ಆಹಾರ

ಈ ಮಧ್ಯೆ ಉದ್ದೇಶಿತ ವರದಿಯನ್ನು ತಿರಸ್ಕರಿಸು ವಂತೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹಿತ ಒಕ್ಕಲಿಗರ ಸಂಘದ ಮುಖಂಡರ ಸಹಿಯನ್ನು ಒಳಗೊಂಡ ಮನವಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿದೆ. ಒಕ್ಕಲಿಗರ ಈ ಮನವಿಗೆ ಪ್ರತಿಯಾಗಿ, “ವರದಿ ಸಲ್ಲಿಸುವ ಮೊದಲೇ ವಿರೋಧ ಯಾಕೆ?’ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ಇದರೊಂದಿಗೆ ವರದಿಯ ವಿಷಯವಾಗಿ ಸಿಎಂ-ಡಿಸಿಎಂ ನಡುವೆಯೇ ಭಿನ್ನ ಅಭಿಪ್ರಾಯಗಳಿರುವುದು ಸ್ಪಷ್ಟವಾದಂತಾಗಿದೆ. ಇದು ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು, ವಿಪಕ್ಷಗಳಿಗೆ ಆಹಾರವಾಗಿದೆ.

ಮುಂದಿನ ತಿಂಗಳು ವರದಿ ನಿರೀಕ್ಷೆ

ಆಯೋಗದ ಅಧ್ಯಕ್ಷರು ನನ್ನನ್ನು ಭೇಟಿಯಾಗಿ  ವರದಿ ಸಲ್ಲಿಸುವುದಾಗಿ ಹೇಳಿದ್ದು, ಅಲ್ಲಿಯವರೆಗೆ ಅವಧಿ ವಿಸ್ತರಿಸುವಂತೆ ಕೋರಿದ್ದರು. ಹೀಗಾಗಿ ಅವರು ವರದಿ ನೀಡುವ ವರೆಗೆ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ಮುಂದಿನ ತಿಂಗಳು ವರದಿ ಸಲ್ಲಿಸುವ ನಿರೀಕ್ಷೆ ಇದೆ.

-ಸಿದ್ದರಾಮಯ್ಯ, ಮುಖ್ಯಮಂತ್ರಿ

ವೈಜ್ಞಾನಿಕವಾಗಿ ಗಣತಿ ನಡೆಸಲು ಒತ್ತಾಯವಿದೆ

ಜಾತಿಗಣತಿ ನಡೆಸಿ  ಸಾಮಾಜಿಕ ನ್ಯಾಯ ಒದಗಿಸಬೇಕು ಎನ್ನುವುದು ಪಕ್ಷದ ನಿಲುವು. ಅದಕ್ಕೆ ಬದ್ಧರಾಗಿದ್ದೇವೆ. ಆದರೆ ಗಣತಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂಬ ಬಗ್ಗೆ ಹಲವು ಸಮುದಾಯಗಳ ಒತ್ತಾಯವಿದೆ.

-ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.