ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯಲಿದೆ ಸಿಇಟಿ…ವಿಡಿಯೋ ಚಿತ್ರೀಕರಣವೇಕೆ?

ಅಭ್ಯರ್ಥಿಗಳಿಗೆ ಅರೆ ಪಾರದರ್ಶಕವಾದ ಸರ್ಜಿಕಲ್‌ ಮಾಸ್ಕ್ ಗೆ ಮಾತ್ರ ಅವಕಾಶ ನೀಡಲಾಗಿದೆ.

Team Udayavani, Jun 15, 2022, 12:15 PM IST

ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯಲಿದೆ ಸಿಇಟಿ…ವಿಡಿಯೋ ಚಿತ್ರೀಕರಣವೇಕೆ?

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಕಟ್ಟು ನಿಟ್ಟಾಗಿ ನಡೆಸಲು ನಿರ್ಧರಿಸಿದ್ದು, ಇದೇ ಮೊದಲ ಬಾರಿಗೆ ಪರೀಕ್ಷಾ ಕೊಠಡಿಗಳ ವಿಡಿಯೋ ಚಿತ್ರೀಕರಣ ಮಾಡುತ್ತಿದೆ.

ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕಾಗಿ ಜೂ.16ರಿಂದ 18ರ ವರೆಗೆ ಸಿಇಟಿ ನಡೆಯಲಿದೆ. ಸಹಾಯಕ ಪ್ರಾಧ್ಯಾಪಕ ಹಾಗೂ ಪಿಎಸ್‌ಐ ಪರೀಕ್ಷಾ ಅಕ್ರಮದ ಪರಿಣಾಮ ಎಚ್ಚೆತ್ತುಕೊಂಡಿರುವ ಕೆಇಎ, ಭದ್ರತಾ ಕ್ರಮದ ದೃಷ್ಟಿಯಿಂದ ಸಿಇಟಿ ಪರೀಕ್ಷಾ ಕೊಠಡಿಗಳ ಚಿತ್ರೀಕರಣವನ್ನು ಹೆಚ್ಚುವರಿಯಾಗಿ ಕ್ರಮ ಕೈಗೊಳ್ಳುತ್ತಿದೆ.

ವಿಡಿಯೋ ಚಿತ್ರೀಕರಣವೇಕೆ?: ಈಗಾಗಲೇ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ವಿಡಿಯೋ ಚಿತ್ರೀಕರಣವು ಅಭ್ಯರ್ಥಿಗಳ ಮುಖಚರ್ಯೆ, ಹಾವ ಭಾವ, ಕೊಠಡಿಯೊಳಗಿನ ಚಟುವಟಿಕೆಗಳು ಸಿಸಿಟಿವಿ ತುಣುಕುಗಳಿಗಿಂತ ವಿಡಿಯೋ ಚಿತ್ರೀಕರಣದಲ್ಲಿ ನಿಖರ ಮತ್ತು ಸ್ಪಷ್ಟತೆ ಇರುತ್ತದೆ. ಪರೀಕ್ಷಾ ಆವರಣದಲ್ಲಿಯೂ ವಿಡಿಯೋ ಚಿತ್ರೀಕರಣ ಮಾಡಲಿದ್ದು, ಅಭ್ಯರ್ಥಿಗಳನ್ನು ಹೊರತುಪಡಿಸಿ ಅನಗತ್ಯ ವಾಗಿ ಸಂಶಯಾಸ್ಪದ ವ್ಯಕ್ತಿ ಗಳು ಅಡ್ಡಾಡಿದರೂ ವಿಡಿಯೋದಲ್ಲಿ ಸೆರೆಯಾಗಲಿದೆ.

ಒಂದು ವೇಳೆ ಪರೀಕ್ಷಾ ಅಕ್ರಮಗಳು ನಡೆದರೆ ಅಥವಾ ನಕಲು ಮಾಡಿದರೆ ಸಂಬಂಧಪಟ್ಟ ಅಭ್ಯರ್ಥಿಯನ್ನು ಪತ್ತೆ ಹಚ್ಚಲು ಮತ್ತು ಸ್ಪಷ್ಟವಾದ ಅಕ್ರಮ ಚಟುವಟಿಕೆ ಗಳನ್ನು ಗುರುತಿಸಲು ಸುಲಭವಾಗಲಿದೆ ಎಂಬುದು ಪ್ರಾಧಿಕಾರದ ಉದ್ದೇಶವಾಗಿದೆ.

ಪರೀಕ್ಷಾ ನಿಯಮ ಪಾಲನೆ ಶಿಸ್ತು: ಅಕ್ರಮ ಪತ್ತೆ ಹಚ್ಚುವುದು ಮಾತ್ರವಲ್ಲ, ವಿಡಿಯೋ ಚಿತ್ರೀಕರಣದಿಂದ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸುವುದನ್ನು ಕೂಡ ತಿಳಿಯಬಹುದಾಗಿದೆ. ಥರ್ಮಲ್‌ ಸ್ಕ್ಯಾನಿಂಗ್‌, ಮಾಸ್ಕ್ ಧರಿಸುವುದು, ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಅಭ್ಯರ್ಥಿಗಳಿಗೆ ಒಎಂಆರ್‌ ಶೀಟ್‌ ವಿತರಿಸುವುದು ಮತ್ತು ಕರ್ತವ್ಯ ನಿರ್ವಹಣೆ ಕೂಡ ಸೆರೆಯಾಗುವುದರಿಂದ ಪರೀಕ್ಷಾ ಸಿಬ್ಬಂದಿ ಜಾಗರೂಕತೆಯಿಂದ ಪರೀಕ್ಷೆ ನಡೆಸಲು ಸಾಧ್ಯವಾಗಲಿದೆ ಎಂಬ ಉದ್ದೇಶ ಹೊಂದಲಾಗಿದೆ ಎಂದು ಕೆಇಎ ಮೂಲಗಳು ತಿಳಿಸಿವೆ.

ಸರ್ಜಿಕಲ್‌ ಮಾಸ್ಕ್ ಗೆ ಮಾತ್ರ ಅವಕಾಶ: ನೀಟ್‌ ಪರೀಕ್ಷೆ ಮಾದರಿಯಲ್ಲಿ ಭದ್ರತಾ ಕ್ರಮ ಕೈಗೊಂಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ನಿಯಮ ರೂಪಿಸಿದ್ದು, ತುಂಬು ತೋಳಿನ ವಸ್ತ್ರಗಳು, ಕಿವಿ ಮತ್ತು ತಲೆ ಮುಚ್ಚುವಂತಹ ವಸ್ತ್ರಗಳನ್ನು ಪರೀಕ್ಷಾ ಕೊಠಡಿಯಲ್ಲಿ ಧರಿಸಬಾರದು ಎಂಬ ನಿಯಮ ರೂಪಿಸಿದೆ. ಅಭ್ಯರ್ಥಿಗಳಿಗೆ ಅರೆ ಪಾರದರ್ಶಕವಾದ ಸರ್ಜಿಕಲ್‌ ಮಾಸ್ಕ್ ಗೆ ಮಾತ್ರ ಅವಕಾಶ ನೀಡಲಾಗಿದೆ. ಎನ್‌-95/ಕಾಟನ್‌ ಮಾಸ್ಕ್ ಗಳಿಗೆ ಅನುಮತಿ ನೀಡಿಲ್ಲ. ಯಾವುದೇ ರೀತಿಯ ಆಭರಣಗಳಿಗೆ ಅನುಮತಿ ಇಲ್ಲ. ಮೊಬೈಲ್‌ ಫೋನ್‌, ಬ್ಲೂಟೂಥ್‌, ವೈರ್‌ಲೆಸ್‌ ಸೆಟ್ಸ್‌, ಕೈ ಗಡಿಯಾರಗಳನ್ನು ಸೇರಿ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಪರೀಕ್ಷಾ ಕೊಠಡಿಯೊಳಗೆ ನಿಷೇಧಿಸಿದೆ.

ನಾಳೆಯಿಂದ ಪರೀಕ್ಷೆ
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2022ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜೂ.16ರಿಂದ 18ರ ವರೆಗೆ ನಡೆಯಲಿದೆ. ಜೂ.16ರಂದು ಬೆಳಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಅದೇ ದಿನ ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. ಜೂ.17ರಂದು ಬೆಳಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2.30ರಿಂದ 3.50ರ ವರೆಗೆ
ರಸಾಯನಶಾಸ್ತ್ರಗಳು ತಲಾ 60 ಅಂಕಗಳಿಗೆ ನಡೆಯಲಿವೆ.

ಜೂ.18ರಂದು ಬೆಳಗ್ಗೆ 11.30ರಿಂದ 12.30ರ ವರೆಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ 50 ಅಂಕಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಬಾರಿ 1,04,550 ವಿದ್ಯಾರ್ಥಿಗಳು ಹಾಗೂ 1,11,975 ವಿದ್ಯಾರ್ಥಿನಿಯರು ಸೇರಿ 2,16,525 ಮಂದಿ ಸಿಇಟಿ ಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಭದ್ರತಾ ದೃಷ್ಟಿಯಿಂದ ಇದೇ ಮೊದಲ ಬಾರಿಗೆ ಸಿಇಟಿ ಪರೀಕ್ಷಾ ಕೊಠಡಿಗಳ ಚಿತ್ರೀಕರಣ ಮಾಡ ಲಾಗುತ್ತಿದೆ. ವಿದ್ಯಾರ್ಥಿಗಳು ನಿರಾಂತಕವಾಗಿ ಪರೀಕ್ಷೆ ಬರೆಯಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ.
●ಎಸ್‌. ರಮ್ಯಾ,
ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ

●ಎನ್‌.ಎಲ್‌. ಶಿವಮಾದು

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.