ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷಕ್ಕೆ ಕಂಟಕ: ಛಲವಾದಿ ನಾರಾಯಣಸ್ವಾಮಿ


Team Udayavani, May 6, 2022, 10:30 PM IST

ಸಿದ್ದರಾಮಯ್ಯ ಕಾಂಗ್ರೆಸ್‌ ಪಕ್ಷಕ್ಕೆ ಕಂಟಕ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯರವರು ಕಾಂಗ್ರೆಸ್‌ಗೆ ಕಂಟಕ. ಕಾಂಗ್ರೆಸ್‌ ಪಕ್ಷವನ್ನು ಇವರು ಮುಗಿಸಲಿದ್ದಾರೆ. ಇವರ ಕುರಿತು ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಒಂದು ಶನಿ. ಅವರು ಇದನ್ನು ಮುಗಿಸಿ ಹೋಗಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಬಿರುದು ಕೊಟ್ಟಿದ್ದರು ಎಂದು ಎಸ್‌.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಪತ್ರಿಕಾಹೇಳಿಕೆ ನೀಡಿದ ಅವರು, ವಿರೋಧ ಪಕ್ಷದ ನಾಯಕರು ಮತ್ತು ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯರವರ ಬಗ್ಗೆ ರಾಜ್ಯದ ಜನರು ಈ ಹಿಂದೆ ಗೌರವದಿಂದ ಕಾಣುತ್ತಿದ್ದರು. ಇತ್ತೀಚೆಗೆ ಬಹುಶಃ ಅವರ ತಲೆ ಕೆಟ್ಟಂತೆ ಕಾಣುತ್ತಿದೆ. ಅವರಿಗೆ ಚಿಕಿತ್ಸೆ ಅಗತ್ಯವಿದ್ದಂತೆ ಕಾಣುತ್ತಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯರವರ ಅಹಂಕಾರ ನೆತ್ತಿಗೇರಿದಂತೆ ಕಾಣುತ್ತಿದೆ. ಅವರೀಗ ಉಡಾಫೆ ರಾಮಯ್ಯ ಆಗಿದ್ದಾರೆ. ದಲಿತರು ಹೊಟ್ಟೆಪಾಡಿನವರು; ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗುತ್ತಿದ್ದಾರೆ’ ಎಂದು ಅವರು ಹೇಳಿದ್ದರು. ನಾವು ಆಪಾದನೆ ಮಾಡಿ ವಿಡಿಯೋ ಬಿಡುಗಡೆ ಮಾಡಿದ್ದೆವು. ಆಗ ಬಿಜೆಪಿಯವರು ವಿಡಿಯೋ ತಿರುಚಿದ್ದಾರೆ ಎಂದು ಸಿದ್ದರಾಮಯ್ಯ ಸುಳ್ಳು ಹೇಳಿದ್ದರು ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ನಿನ್ನೆ ಬಿಜೆಪಿಯನ್ನು ನಿಂದಿಸುವ ಮಾತಿನ ಭರದಲ್ಲಿ ಹಜಾಮತಿ ಮಾಡುತ್ತಿದ್ದರಾ ಎಂದು ಕೇಳಿದ್ದಾರೆ. ನಾವು ಸವಿತಾ ಸಮಾಜವನ್ನು ಗೌರವದಿಂದ ಕಾಣುತ್ತೇವೆ. ಅವರ ಕೆಲಸವನ್ನೂ ಗೌರವದಿಂದಲೇ ನೋಡುತ್ತೇವೆ. ಹಜಾಮತಿ ಎಂದಿರುವುದು ಅಂಥ ಸಮಾಜವನ್ನು ಅಪಮಾನ ಮಾಡಿದಂತೆ. ಅವರು ದಲಿತ ವಿರೋಧಿ ಮಾತ್ರವಲ್ಲ ಹಿಂದುಳಿದವರ ವಿರೋಧಿಯೂ ಆಗಿದ್ದಾರೆ. ತಳ ಸಮುದಾಯವನ್ನೂ ಬಹಳ ಕೇವಲವಾಗಿ ನೋಡುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ಜನತೆ ಇಂಥ ನಾಯಕರನ್ನು ತಿರಸ್ಕರಿಸಿ ಸರಿಯಾಗಿ ಬುದ್ಧಿ ಕಲಿಸಬೇಕು. ತಕ್ಷಣ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಮುಖ್ಯಮಂತ್ರಿಯಾಗಿದ್ದ ವ್ಯಕ್ತಿಗೆ ಇಂಥ ಅಗೌರವದ ಮಾತು ಸರಿಹೊಂದುವುದಿಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಈ ಪ್ರವೃತ್ತಿಗೆ ರಾಜ್ಯದ ಜನರು ಛೀಮಾರಿ ಹಾಕುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ನಾಲಿಗೆ ಮೇಲೆ ಹಿಡಿತವಿಲ್ಲವೇ? ಇಷ್ಟ ಬಂದಂತೆ ಎಲ್ಲರನ್ನೂ ನೀವು ಮಾತನಾಡುತ್ತೀರಿ. ಏಕವಚನದಲ್ಲೇ ಎಲ್ಲರನ್ನೂ ಮಾತನಾಡುತ್ತೀರಿ. ಆರೋಗ್ಯ ಕಳಕೊಂಡ ಕಾರಣ ಹೀಗಾಗುತ್ತಿದೆ. ನಿಮಗೆ ಚಿಕಿತ್ಸೆ ಅವಶ್ಯಕತೆ ಇದೆ ಎಂದು ನನಗೆ ಅನಿಸುತ್ತಿದೆ ಎಂದು ನುಡಿದರು. ಯಾರೂ ಚಿಕಿತ್ಸೆ ಮಾಡದಿದ್ದರೆ ಹೇಳಿ, ನಾವೇ ಆಸ್ಪತ್ರೆಗೆ ಸೇರಿಸುತ್ತೇವೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.