ಕೋವಿಡ್ ನಿಂದ ಗೆಳೆಯ ಸಾವು ; ಆತನ ಪತ್ನಿಯನ್ನು ವಿವಾಹವಾದ ಯುವಕ
Team Udayavani, Feb 6, 2022, 9:24 PM IST
ಚಾಮರಾಜನಗರ : ಕೋವಿಡ್ ನಿಂದ ಪತಿಯನ್ನು ಕಳೆದುಕೊಂಡು ಕಂಗೆಟ್ಟ ಯುವತಿಯನ್ನು ಪತಿಯ ಸ್ನೇಹಿತನೇ ಮದುವೆಯಾಗಿ ಯುವತಿಯ ಬಾಳಿಗೆ ಬೆಳಕಾದ ಅಪರೂಪದ ಘಟನೆ ವರದಿಯಾಗಿದೆ.
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಚೇತನ್ಕುಮಾರ್ (41) ಮತ್ತು ಹನೂರು ಪಟ್ಟಣದ ಅಂಬಿಕಾ (30) 8 ವರ್ಷಗಳ ಹಿಂದೆ ವಿವಾಹವಾಗಿದ್ದರು. ಚೇತನ್ಕುಮಾರ್ ಅವರು ಬೆಂಗಳೂರಿನ ಖಾಸಗಿ ಕಾರ್ಖಾನೆಯಲ್ಲಿ ಉದ್ಯೋಗಿಯಾಗಿದ್ದರು. ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಚೇತನ್ಕುಮಾರ್ ಕೋವಿಡ್ ಸೋಂಕಿಗೆ ಮೃತಪಟ್ಟಿದ್ದರು.
ಪತಿಯ ಸಾವಿನಿಂದ ಕಂಗೆಟ್ಟ ಅಂಬಿಕಾ, ಖನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಚೇತನ್ಕುಮಾರ್ ಗೆಳೆಯ, ಚಾಮರಾಜನಗರ ತಾಲೂಕಿನ ನಂಜೇದೇವನಪುರ ಗ್ರಾಮದ ಎಂ.ಲೋಕೇಶ್ ಅವರು ಅಂಬಿಕಾ ಅವರಿಗೆ ಸಾಂತ್ವನ ಹೇಳಿ, ತನ್ನ ಗೆಳೆಯನ ಕುಟುಂಬಕ್ಕೆ ಆಸರೆಯಾಗಿ ನಿಲ್ಲಲು ನಿರ್ಧರಿಸಿದರು. ತನ್ನ ಗೆಳೆಯನ ಪತ್ನಿಯನ್ನು ಮದುವೆಯಾಗಲು ನಿರ್ಧರಿಸಿ, ಅಂಬಿಕಾ ತಂದೆ, ತಾಯಿಯ ಬಳಿ ಹಾಗೂ ಚೇತನ್ಕುಮಾರ ತಂದೆ, ತಾಯಿಯ ಬಳಿ ವಿಷಯ ಪ್ರಸ್ತಾವಿಸಿದರು. ಅವರೆಲ್ಲರ ಮನವೊಲಿಕೆಯ ಬಳಿಕ ಅಂಬಿಕಾ ಮದುವೆಗೆ ಒಪ್ಪಿದರು.
ಜ. 27ರಂದು ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಸರ್ಪಭೂಷಣ ಶಿವಯೋಗಿಗಳ ಮಠದ ಆವರಣದಲ್ಲಿ ಈ ಆದರ್ಶ ಮದುವೆ ನಡೆಯಿತು. ಲೋಕೇಶ್ ಅವರು ಅಂಬಿಕಾ ಅವರನ್ನು ಪುನರ್ ವಿವಾಹವಾಗುವ ಮೂಲಕ ಮಾದರಿಯಾದರು.
ಇದನ್ನೂ ಓದಿ : ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಎಸಿಬಿ ಬಲೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.