![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 2, 2021, 10:51 PM IST
ಚಿತ್ರದುರ್ಗ: ಐತಿಹಾಸಿಕ ಚಂದ್ರವಳ್ಳಿ ಕೆರೆಯ ಸಮೀಪದ ಬಾವಿಯಲ್ಲಿ ರಾತ್ರಿ ಹತ್ತು ಗಂಟೆ ಸುಮಾರಿಗೆ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಯಿತು.
ಲಕ್ಷಾಂತರ ಜನ ಸೇರುವ ಶೋಭಾಯಾತ್ರೆ ರಾಜ್ಯದಲ್ಲೇ ಹೆಸರುವಾಸಿಯಾಗಿರುವ ಹಿಂದೂ ಮಹಾಗಣಪತಿ ಮೆರವಣಿಗೆ ಈ ವರ್ಷ ಸರಳವಾಗಿ ಮಾಡುವ ಲೆಕ್ಕಾಚಾರ ನಡೆದಿತ್ತು.
ಆದರೆ, ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡಿ ಸಾಗರೋಪಾದಿಯಲ್ಲಿ ಸೇರಿದ ಅಪಾರ ಜನಸ್ಥೋಮದ ನಡುವೆ ಹಿಂದೂ ಮಹಾಗಣಪತಿ ವಿರಾಜಮಾನರಾಗಿ ಮೆರವಣಿಗೆಯಲ್ಲಿ ಸಾಗಿದರು.
ಇದನ್ನೂ ಓದಿ:ರೈತರ ಕಷ್ಟ ಕೇಳದ ಪ್ರಧಾನಿ ಮೋದಿ: ಡಿ.ಕೆ.ಶಿವಕುಮಾರ್
ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಷ್ಠಾಪಿಸುವ ಹಿಂದೂ ಮಹಾಗಣಪತಿ ಈ ವರ್ಷ ಡಿಜೆಗಳ ಅಬ್ಬರ ಇಲ್ಲದಿದ್ದರೂ ಬರೋಬ್ಬರಿ ಐದು ಕಿ.ಮೀ ಉದ್ದದ ಮಾರ್ಗದಲ್ಲಿ ನಿರಂತರ ಹತ್ತು ಗಂಟೆಗಳ ಅವಧಿಯ ಮೆರವಣಿಗೆಯಲ್ಲಿ ಸಾಗಿಬಂದು ಚಂದ್ರವಳ್ಳಿ ಬಳಿ ಬಾವಿಯಲ್ಲಿ ವಿಸರ್ಜಿಸಲಾಯಿತು. ಈ ವೇಳೆ ಹಿಂದೂ ಮಹಾಗಣಪತಿ ಉತ್ಸವ ಸಮಿತಿ, ವಿಎಚ್ಪಿ, ಬಜರಂಗದಳ, ಸಂಘ ಪರಿವಾರ ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ರಾತ್ರಿ ಹತ್ತೂವರೆ ವರೆಗೆ ಸ್ಥಳದಲ್ಲಿ ಜಮಾಯಿಸಿದ್ದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
You seem to have an Ad Blocker on.
To continue reading, please turn it off or whitelist Udayavani.