![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
Team Udayavani, May 20, 2024, 1:30 AM IST
![bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್](https://www.udayavani.com/wp-content/uploads/2024/05/b-620x341.jpg)
ಬೆಳ್ತಂಗಡಿ: ರಸ್ತೆಯ ತಿರುವಿನಲ್ಲಿ ಮುಂದೆ ಸಾಗ ಲಾರದೆ 32 ಚಕ್ರದ ಬೃಹತ್ ಕಂಟೈನರ್ ಲಾರಿಯೊಂದು ಸಿಲುಕಿ ಕೊಂಡದ್ದರಿಂದ ಸುಮಾರು ಎರಡು ತಾಸು ಸಂಚಾರ ಸಮಸ್ಯೆ ಉಂಟಾದ ಘಟನೆ ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಸಮೀಪ ರವಿವಾರ ಬೆಳಗ್ಗೆ ಸಂಭವಿಸಿದೆ.
ಕಂಟೈನರ್ ಲಾರಿಯ ಮುಂಭಾಗ ಮಣ್ಣಿನಲ್ಲಿ ಹೂತು ಹೋಗಿ ರಸ್ತೆಯಲ್ಲೇ ಸಿಲುಕಿಕೊಂಡಿತು. ಬದಿಯಲ್ಲಿದ್ದ ಕೊಂಚ ಜಾಗದಲ್ಲಿ ಇತರ ವಾಹನಗಳು ಸಂಚರಿಸುತ್ತಿದ್ದವು. ಕೆಎಸ್ಸಾರ್ಟಿಸಿ ಬಸ್ಸೊಂದು ಆ ಸ್ಥಳದಲ್ಲಿ ಹೂತು ಹೋಗಿ ರಸ್ತೆ ಸಂಪೂರ್ಣ ತಡೆಯಾಯಿತು. ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತವು.
ಕೆಟ್ಟು ನಿಂತ ಬಸ್: ಚಾರ್ಮಾಡಿ ಘಾಟಿಯ 6ನೇ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ ತಾಂತ್ರಿಕ ತೊಂದರೆಯಿಂದ ರಸ್ತೆ ಮಧ್ಯೆ ಕೆಟ್ಟು ನಿಂತು ಹಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ರವಿವಾರ ರಾತ್ರಿ ಸಂಭವಿಸಿದೆ.
ಟಾಪ್ ನ್ಯೂಸ್
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.